ಜನವಾಡ, ಮರಕಲ್, ಅಲಿಯಂಬರ್, ಮಾಳೆಗಾಂವ, ಚಿಮಕೋಡ, ಚಿಲ್ಲರ್ಗಿ, ಕಮಠಾಣ, ಬಗದಲ್, ಮನ್ನಳ್ಳಿ, ಆಣದೂರ, ಬಾವಗಿ ಸೇರಿದಂತೆ ವಿವಿಧೆಡೆ ರೈತರು ರೊಟ್ಟಿಯ ಗಂಟು ಕಟ್ಟಿಕೊಂಡು ಹೊಲಗಳಿಗೆ ತೆರಳಿ ಭೂಮಿ ತಾಯಿಗೆ ಪೂಜೆ ಸಲ್ಲಿಸಿ, ಚರಗ ಚೆಲ್ಲಿ ಎಳ್ಳ ಅಮಾವಾಸ್ಯೆಯನ್ನು ಆಚರಿಸಿದರು.
ರೈತರು ಬಂಧುಗಳು ಹಾಗೂ ಸ್ನೇಹಿತರನ್ನು ತಮ್ಮ ಹೊಲಕ್ಕೆ ಊಟಕ್ಕೆ ಆಹ್ವಾನಿಸಿದರು. ಭಜ್ಜಿ, ಜೋಳದ ರೊಟ್ಟಿ, ಸಜ್ಜೆ ರೊಟ್ಟಿ, ಜೋಳದ ಅನ್ನ, ಶೇಂಗಾ ಚಟ್ನಿ, ಕರ್ಚಿಕಾಯಿ, ಅಂಬಲಿ ಮೊದಲಾದ ಖಾದ್ಯಗಳನ್ನು ಉಣಬಡಿಸಿದರು.