<p><strong>ಹುಮನಾಬಾದ್:</strong> ‘ಶಿಕ್ಷಕ, ಶಿಕ್ಷಕಿಯರು ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶ್ರಮಿಸಬೇಕು’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಚಪ್ಪ ವಾಲಿ ತಿಳಿದರು.</p>.<p>ಪಟ್ಟಣದ ವಿಶ್ವೇಶ್ವರಯ್ಯ ಶಿಕ್ಷಣ ಸಂಸ್ಥೆಯ ವಿಶ್ವೇಶ್ವರಯ್ಯ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಈಚೆಗೆ ನಡೆದ ‘ಯೋಜನಾ ದಿನಾಚರಣೆ ಮತ್ತು ಶೈಕ್ಷಣಿಕ ವಸ್ತು ಪ್ರದರ್ಶನ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಆಧುನಿಕ ಯುಗದಲ್ಲಿ ಶಿಕ್ಷಕರು ಮಕ್ಕಳಿಗೆ ಹೊಸ, ಹೊಸ ವಿಷಯಗಳನ್ನು ತಿಳಿಸಿಕೊಡಬೇಕು. ವೈಜ್ಞಾನಿಕ ಮನೋಭಾವ ಮೂಡಿಸಬೇಕು’ ಎಂದರು.</p>.<p>ಪಶು ಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಗೋವಿಂದ, ಸಂಸ್ಥೆ ಅಧ್ಯಕ್ಷ ರಾಜಕುಮಾರ ಕೆ.ಭೂರೇಶ ಮಾತನಾಡಿದರು.</p>.<p>ಶಾಲೆಯ ಮುಖ್ಯಶಿಕ್ಷಕ ಡ್ಯಾನಿಯಲ್ ಕೆ.ಭೂರೇಶ, ವಿಶ್ವಭಾರತಿ ಕನ್ನಡ ಮಾದ್ಯಮ ಶಾಲೆಯ ಮುಖ್ಯಶಿಕ್ಷಕಿ ವನಜಾಕ್ಷಿ, ಸಂಪತಿ, ಗೀತಾ, ಕಾವೇರಿ, ಸವಿತಾ, ನಿರ್ಮಲಾ, ಪೂಜಾ, ದೀಪಿಕಾ, ಸಿದ್ಧಾರ್ಥ ಹಾಗೂ ಸಂಗಮೇಶ ಇದ್ದರು.</p>.<p>ಆರತಿ ನಿರೂಪಿಸಿದರು. ಹೀನಾ ಅಂಜುಮ್ ಸ್ವಾಗತಿಸಿದರು. ರಂಜನಾ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಮನಾಬಾದ್:</strong> ‘ಶಿಕ್ಷಕ, ಶಿಕ್ಷಕಿಯರು ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶ್ರಮಿಸಬೇಕು’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಚಪ್ಪ ವಾಲಿ ತಿಳಿದರು.</p>.<p>ಪಟ್ಟಣದ ವಿಶ್ವೇಶ್ವರಯ್ಯ ಶಿಕ್ಷಣ ಸಂಸ್ಥೆಯ ವಿಶ್ವೇಶ್ವರಯ್ಯ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಈಚೆಗೆ ನಡೆದ ‘ಯೋಜನಾ ದಿನಾಚರಣೆ ಮತ್ತು ಶೈಕ್ಷಣಿಕ ವಸ್ತು ಪ್ರದರ್ಶನ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಆಧುನಿಕ ಯುಗದಲ್ಲಿ ಶಿಕ್ಷಕರು ಮಕ್ಕಳಿಗೆ ಹೊಸ, ಹೊಸ ವಿಷಯಗಳನ್ನು ತಿಳಿಸಿಕೊಡಬೇಕು. ವೈಜ್ಞಾನಿಕ ಮನೋಭಾವ ಮೂಡಿಸಬೇಕು’ ಎಂದರು.</p>.<p>ಪಶು ಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಗೋವಿಂದ, ಸಂಸ್ಥೆ ಅಧ್ಯಕ್ಷ ರಾಜಕುಮಾರ ಕೆ.ಭೂರೇಶ ಮಾತನಾಡಿದರು.</p>.<p>ಶಾಲೆಯ ಮುಖ್ಯಶಿಕ್ಷಕ ಡ್ಯಾನಿಯಲ್ ಕೆ.ಭೂರೇಶ, ವಿಶ್ವಭಾರತಿ ಕನ್ನಡ ಮಾದ್ಯಮ ಶಾಲೆಯ ಮುಖ್ಯಶಿಕ್ಷಕಿ ವನಜಾಕ್ಷಿ, ಸಂಪತಿ, ಗೀತಾ, ಕಾವೇರಿ, ಸವಿತಾ, ನಿರ್ಮಲಾ, ಪೂಜಾ, ದೀಪಿಕಾ, ಸಿದ್ಧಾರ್ಥ ಹಾಗೂ ಸಂಗಮೇಶ ಇದ್ದರು.</p>.<p>ಆರತಿ ನಿರೂಪಿಸಿದರು. ಹೀನಾ ಅಂಜುಮ್ ಸ್ವಾಗತಿಸಿದರು. ರಂಜನಾ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>