<p><strong>ಖಟಕಚಿಂಚೋಳಿ:</strong> ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ಹಾರ್ಮೋನಿಯಂ ಹಾಗೂ ಯೋಗ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿರುವ ಬಹುಮುಖ ಪ್ರತಿಭೆ ವಚನಶ್ರೀ ನೌಬಾದೆ.</p>.<p>ಬೀದರ್ ತಾಲ್ಲೂಕಿನ ಕೊಳಾರ (ಕೆ) ಗ್ರಾಮದ ಚನ್ನಬಸಪ್ಪ ಹಾಗೂ ಅಂಬಿಕಾ ನೌಬಾದೆ ದಂಪತಿಯ ಹಿರಿಯ ಮಗಳು. ಈಗ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅಗ್ರಶ್ರೇಣಿಯಲ್ಲಿ ಉತ್ತೀರ್ಣರಾದ ವಚನಶ್ರೀ, ಹಿಂದೂಸ್ತಾನಿ ಸಂಗೀತದಲ್ಲಿ ಜೂನಿಯರ್ ಮುಗಿಸಿದ್ದಾರೆ.</p>.<p>ಸಂಗೀತ ಕಲಾವಿದ ಈಶ್ವರಪ್ಪ ಪಾಂಚಾಳರ ಶಿಷ್ಯೆಯಾದ ವಚನಶ್ರೀ, ತಂದೆ ಚನ್ನಬಸಪ್ಪ ಅವರ ಮಾರ್ಗದರ್ಶನದಲ್ಲಿ ಸಂಗೀತ ಕಲಿಕೆ ಹಾಗೂ ಸಾಧನೆಯಲ್ಲಿ ನಿರತವಾಗಿದ್ದಾರೆ.</p>.<p>ಜಿಲ್ಲೆ ಸೇರಿದಂತೆ ನೆರೆಯ ರಾಜ್ಯಗಳಾದ ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣದ ಅನೇಕ ಕಡೆ ನಡೆದ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ತಮ್ಮ ಸುಮಧುರ ಗಾಯನದ ಮೂಲಕ ಕೇಳುಗರ ಮನ ರಂಜಿಸಿದ್ದಾರೆ. ಈ ಬಾಲಕಿಯ ಪ್ರತಿಭೆ ಅರಸಿ 2019ರಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಕನ್ನಡ ರತ್ನ ಪ್ರಶಸ್ತಿ ಬಂದಿದೆ. ಹೀಗೆ ತಮ್ಮ ಪ್ರತಿಭೆಯ ಮೂಲಕ ಅನೇಕ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.</p>.<p>‘ಮಕ್ಕಳಲ್ಲಿ ಭಾರತೀಯ ಸಂಸ್ಕೃತಿ, ಪರಂಪರೆ ಮೈಗೂಡಲು ನೃತ್ಯ, ಸಂಗೀತ, ಭರತನಾಟ್ಯದಂಥ ಕಲೆಗಳು ಸಹಾಯಕ. ಹೀಗಾಗಿ ಪಾಲಕರು ಮಕ್ಕಳಿಗೆ ಬಾಲ್ಯದಿಂದಲೇ ಶಿಕ್ಷಣದೊಂದಿಗೆ ಸಂಗೀತ,ಕಲೆ, ಸಾಹಿತ್ಯಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು' ಎಂದು ಸಂಗೀತ ಶಿಕ್ಷಕ ಸಂಗಯ್ಯ ಸ್ವಾಮಿ ತಿಳಿಸುತ್ತಾರೆ.</p>.<p>‘ಮುಂದಿನ ದಿನಗಳಲ್ಲಿ ಹಿಂದೂಸ್ತಾನಿ ಸಂಗೀತದ ಸಿನಿಯರ್ ಮುಗಿಸಿ ಸಂಗೀತ ಶಿಕ್ಷಕಿಯಾಗಬೇಕು ಎನ್ನುವುದು ನನ್ನ ಆಶಯವಾಗಿದೆ. ಅಲ್ಲದೇ ಎಲ್ಲ ಮಕ್ಕಳಿಗೆ ಉಚಿತ ಸಂಗೀತ ಕಲಿಸಬೇಕು ಎಂಬುವುದು ನನ್ನ ಗುರಿಯಾಗಿದೆ' ಎಂದು ವಚನಶ್ರೀ ಹೇಳುತ್ತಾಳೆ.</p>.<p>*ಮಕ್ಕಳಿಗೆ ಸೂಕ್ತ ಪ್ರೋತ್ಸಾಹ ದೊರೆತರೆ ಮುಂದೆ ಅವರು ಏನನ್ನಾದರೂ ಸಾಧಿಸಬಹುದು ಎಂಬುವುದಕ್ಕೆ ವಚನಶ್ರೀ ಉದಾಹರಣೆ ಆಗಿದ್ದಾರೆ<br />-ಸುರೇಶ ಚನಶೆಟ್ಟಿ, ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಖಟಕಚಿಂಚೋಳಿ:</strong> ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ಹಾರ್ಮೋನಿಯಂ ಹಾಗೂ ಯೋಗ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿರುವ ಬಹುಮುಖ ಪ್ರತಿಭೆ ವಚನಶ್ರೀ ನೌಬಾದೆ.</p>.<p>ಬೀದರ್ ತಾಲ್ಲೂಕಿನ ಕೊಳಾರ (ಕೆ) ಗ್ರಾಮದ ಚನ್ನಬಸಪ್ಪ ಹಾಗೂ ಅಂಬಿಕಾ ನೌಬಾದೆ ದಂಪತಿಯ ಹಿರಿಯ ಮಗಳು. ಈಗ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅಗ್ರಶ್ರೇಣಿಯಲ್ಲಿ ಉತ್ತೀರ್ಣರಾದ ವಚನಶ್ರೀ, ಹಿಂದೂಸ್ತಾನಿ ಸಂಗೀತದಲ್ಲಿ ಜೂನಿಯರ್ ಮುಗಿಸಿದ್ದಾರೆ.</p>.<p>ಸಂಗೀತ ಕಲಾವಿದ ಈಶ್ವರಪ್ಪ ಪಾಂಚಾಳರ ಶಿಷ್ಯೆಯಾದ ವಚನಶ್ರೀ, ತಂದೆ ಚನ್ನಬಸಪ್ಪ ಅವರ ಮಾರ್ಗದರ್ಶನದಲ್ಲಿ ಸಂಗೀತ ಕಲಿಕೆ ಹಾಗೂ ಸಾಧನೆಯಲ್ಲಿ ನಿರತವಾಗಿದ್ದಾರೆ.</p>.<p>ಜಿಲ್ಲೆ ಸೇರಿದಂತೆ ನೆರೆಯ ರಾಜ್ಯಗಳಾದ ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣದ ಅನೇಕ ಕಡೆ ನಡೆದ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ತಮ್ಮ ಸುಮಧುರ ಗಾಯನದ ಮೂಲಕ ಕೇಳುಗರ ಮನ ರಂಜಿಸಿದ್ದಾರೆ. ಈ ಬಾಲಕಿಯ ಪ್ರತಿಭೆ ಅರಸಿ 2019ರಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಕನ್ನಡ ರತ್ನ ಪ್ರಶಸ್ತಿ ಬಂದಿದೆ. ಹೀಗೆ ತಮ್ಮ ಪ್ರತಿಭೆಯ ಮೂಲಕ ಅನೇಕ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.</p>.<p>‘ಮಕ್ಕಳಲ್ಲಿ ಭಾರತೀಯ ಸಂಸ್ಕೃತಿ, ಪರಂಪರೆ ಮೈಗೂಡಲು ನೃತ್ಯ, ಸಂಗೀತ, ಭರತನಾಟ್ಯದಂಥ ಕಲೆಗಳು ಸಹಾಯಕ. ಹೀಗಾಗಿ ಪಾಲಕರು ಮಕ್ಕಳಿಗೆ ಬಾಲ್ಯದಿಂದಲೇ ಶಿಕ್ಷಣದೊಂದಿಗೆ ಸಂಗೀತ,ಕಲೆ, ಸಾಹಿತ್ಯಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು' ಎಂದು ಸಂಗೀತ ಶಿಕ್ಷಕ ಸಂಗಯ್ಯ ಸ್ವಾಮಿ ತಿಳಿಸುತ್ತಾರೆ.</p>.<p>‘ಮುಂದಿನ ದಿನಗಳಲ್ಲಿ ಹಿಂದೂಸ್ತಾನಿ ಸಂಗೀತದ ಸಿನಿಯರ್ ಮುಗಿಸಿ ಸಂಗೀತ ಶಿಕ್ಷಕಿಯಾಗಬೇಕು ಎನ್ನುವುದು ನನ್ನ ಆಶಯವಾಗಿದೆ. ಅಲ್ಲದೇ ಎಲ್ಲ ಮಕ್ಕಳಿಗೆ ಉಚಿತ ಸಂಗೀತ ಕಲಿಸಬೇಕು ಎಂಬುವುದು ನನ್ನ ಗುರಿಯಾಗಿದೆ' ಎಂದು ವಚನಶ್ರೀ ಹೇಳುತ್ತಾಳೆ.</p>.<p>*ಮಕ್ಕಳಿಗೆ ಸೂಕ್ತ ಪ್ರೋತ್ಸಾಹ ದೊರೆತರೆ ಮುಂದೆ ಅವರು ಏನನ್ನಾದರೂ ಸಾಧಿಸಬಹುದು ಎಂಬುವುದಕ್ಕೆ ವಚನಶ್ರೀ ಉದಾಹರಣೆ ಆಗಿದ್ದಾರೆ<br />-ಸುರೇಶ ಚನಶೆಟ್ಟಿ, ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>