<p><strong>ಭಾಲ್ಕಿ:</strong> ‘ರಾಷ್ಟ್ರದ ಭವಿಷ್ಯ ಯುವಜನರ ಕೈಯಲ್ಲಿದ್ದು, ಸಂಸ್ಕಾರಯುತ, ಜವಾಬ್ದಾರಿಯುತ ಯುವಜನಾಂಗವೇ ಶಕ್ತಿಶಾಲಿ ಭಾರತ ನಿರ್ಮಾಣಕ್ಕೆ ಕಾರಣವಾಗುತ್ತದೆ’ ಎಂದು ಶಿಕ್ಷಕ ಚಂದ್ರಕಾಂತ ತಳವಾಡೆ ಹೇಳಿದರು.</p>.<p>ತಾಲ್ಲೂಕಿನ ಮೊರಂಬಿ ಗ್ರಾಮದಲ್ಲಿ ನಡೆದ ನಂದಿ ಬಸವೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಯುವ ಸಮಾವೇಶ ಮತ್ತು ರೈತ ಗೋಷ್ಠಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಯುವಕರು ಸಂಸ್ಕಾರಯುತ ಬದುಕನ್ನು ಅಳವಡಿಸಿಕೊಂಡರೆ ಬಲಿಷ್ಠ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ. ಸಂಸ್ಕಾರ, ಶಿಸ್ತು, ಶ್ರದ್ಧೆ ಮತ್ತು ಸೇವಾಭಾವವೇ ಯುವಜನರ ಬದುಕಿನ ಮೂಲ ಮೌಲ್ಯಗಳಾಗಬೇಕು’ ಎಂದು ತಿಳಿಸಿದರು.</p>.<p>ತಹಶೀಲ್ದಾರ್ ಶಿವಾನಂದ ಮೇತ್ರೆ ಮಾತನಾಡಿ, ‘ಯುವಕರು ಶಿಕ್ಷಣ, ಕೃಷಿ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಅಭಿವೃದ್ಧಿಯತ್ತ ಸಾಗಬೇಕು’ ಎಂದು ಹೇಳಿದರು.</p>.<p>ಶಾಂತವೀರ ಶಿವಾಚಾರ್ಯರು, ಲೋಕೇಶ ಗುರೂಜಿ ಆಶೀರ್ವಚನ ನೀಡಿದರು. ಯುವಕರು, ರೈತರು ಸೇರಿ ಅನೇಕರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಾಲ್ಕಿ:</strong> ‘ರಾಷ್ಟ್ರದ ಭವಿಷ್ಯ ಯುವಜನರ ಕೈಯಲ್ಲಿದ್ದು, ಸಂಸ್ಕಾರಯುತ, ಜವಾಬ್ದಾರಿಯುತ ಯುವಜನಾಂಗವೇ ಶಕ್ತಿಶಾಲಿ ಭಾರತ ನಿರ್ಮಾಣಕ್ಕೆ ಕಾರಣವಾಗುತ್ತದೆ’ ಎಂದು ಶಿಕ್ಷಕ ಚಂದ್ರಕಾಂತ ತಳವಾಡೆ ಹೇಳಿದರು.</p>.<p>ತಾಲ್ಲೂಕಿನ ಮೊರಂಬಿ ಗ್ರಾಮದಲ್ಲಿ ನಡೆದ ನಂದಿ ಬಸವೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಯುವ ಸಮಾವೇಶ ಮತ್ತು ರೈತ ಗೋಷ್ಠಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಯುವಕರು ಸಂಸ್ಕಾರಯುತ ಬದುಕನ್ನು ಅಳವಡಿಸಿಕೊಂಡರೆ ಬಲಿಷ್ಠ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ. ಸಂಸ್ಕಾರ, ಶಿಸ್ತು, ಶ್ರದ್ಧೆ ಮತ್ತು ಸೇವಾಭಾವವೇ ಯುವಜನರ ಬದುಕಿನ ಮೂಲ ಮೌಲ್ಯಗಳಾಗಬೇಕು’ ಎಂದು ತಿಳಿಸಿದರು.</p>.<p>ತಹಶೀಲ್ದಾರ್ ಶಿವಾನಂದ ಮೇತ್ರೆ ಮಾತನಾಡಿ, ‘ಯುವಕರು ಶಿಕ್ಷಣ, ಕೃಷಿ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಅಭಿವೃದ್ಧಿಯತ್ತ ಸಾಗಬೇಕು’ ಎಂದು ಹೇಳಿದರು.</p>.<p>ಶಾಂತವೀರ ಶಿವಾಚಾರ್ಯರು, ಲೋಕೇಶ ಗುರೂಜಿ ಆಶೀರ್ವಚನ ನೀಡಿದರು. ಯುವಕರು, ರೈತರು ಸೇರಿ ಅನೇಕರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>