ಅಕ್ಕಮಹಾದೇವಿ 434 ವಚನಗಳನ್ನು ಬರೆದು ಕನ್ನಡ ಸಾಹಿತ್ಯಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಈ ಮೂಲಕ ಮಹಿಳೆಯರ ಗೌರವ ಹೆಚ್ಚಿಸಿದ್ದಾರೆ ಎಂದು ಹೇಳಿದರು.
ನಿವೃತ್ತ ವೈದ್ಯಾಧಿಕಾರಿ ಡಾ. ವೈಜನಾಥ ಬಿರಾದಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಚನ್ನಬಸವ ಪಟ್ಟದ್ದೇವರು ಬಸವತತ್ವ ಪ್ರಚಾರದ ಜೊತೆಗೆ ಸಮಾಜದಲ್ಲಿನ ದೀನ ದಲಿತರ ಹಾಗೂ ಬಡವರ ಸೇವೆ ಮಾಡಿದ್ದರು. ಜ್ಞಾನ ದಾಸೋಹ ಮಾಡಲು ಶಾಲಾ ಕಾಲೇಜುಗಳನ್ನು ಸ್ಥಾಪಿಸಿದ್ದರು ಎಂದು ತಿಳಿಸಿದರು.