ಗ್ರಾಮದ ಶಿವರಾಜ ಹಾಲೇಪೂರ್ಗಾ, ಅಕ್ಬರ್ ಎಂಬುವರ ಸುಮಾರು 5 ಎಕರೆ ಜಮೀನಿನಲ್ಲಿ ನಾಟಿ ಮಾಡಿದ್ದ ಈರುಳ್ಳಿ ಬೆಳೆ ಸಂಪೂರ್ಣ ನಾಶವಾಗಿದೆ. ಸುಕೇಶ ರೆಡ್ಡಿ ಎಂಬುವರ 1 ಎಕರೆ ಈರುಳ್ಳಿ ಬೆಳೆ ಹಾಳಾಗಿದ್ದು, ರೈತರು ಆತಂಕಕ್ಕೆ ಸಿಲುಕಿದ್ದಾರೆ. ಅಧಿಕಾರಿಗಳು ಭೇಟಿ ನೀಡಿ ಬೆಳೆ ಹಾನಿ ಪರಿಶೀಲಿಸಿ ಪರಿಹಾರ ನೀಡುವಂತೆ ರೈತರು ಒತ್ತಾಯಿಸಿದ್ದಾರೆ.