<p><strong>ಬಸವಕಲ್ಯಾಣ: </strong>ಜೀವನದಲ್ಲಿ ಗುರಿ ಇಟ್ಟುಕೊಂಡು ಅದನ್ನು ಸಾಧಿಸಲು ಪ್ರಯತ್ನಿಸಬೇಕು ಎಂದು ಮಾಜಿ ಶಾಸಕ ಎಂ.ಜಿ.ಮುಳೆ ಸಲಹೆ ಕೊಟ್ಟರು.ಇಲ್ಲಿನ ಜೀಜಾಮಾತಾ ಪ್ರೌಢಶಾಲೆಯಲ್ಲಿ ಈಚೆಗೆ ಹಮ್ಮಿಕೊಂಡ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭ ಮತ್ತು ಗಣ್ಯರ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> ತಾಲ್ಲೂಕಿನಲ್ಲಿನ ಶೈಕ್ಷಣಿಕ ವಾತಾವರಣ ಸುಧಾರಿಸುತ್ತಿದೆ. ಉನ್ನತ ಪದವಿ ಪಡೆಯುವವರ ಸಂಖ್ಯೆ ಹೆಚ್ಚುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಅಭಿಪ್ರಾಯಪಟ್ಟರು.<br /> ನೇತೃತ್ವ ವಹಿಸಿದ್ದ ಮಾಣಿಕನಗರ ಸಂಸ್ಥಾನದ ಜ್ಞಾನರಾಜಪ್ರಭು ಮಹಾರಾಜರು ಮಾತನಾಡಿ ಸಭ್ಯ ಸಮಾಜದ ನಿರ್ಮಾಣಕ್ಕೆ ಯತ್ನಿಸಬೇಕು. ದೇಶಭಕ್ತಿ ಬೆಳೆಸಿಕೊಳ್ಳಬೇಕು ಎಂದರು.<br /> <br /> ಡಾ.ಎಸ್.ಬಿ.ಮಹಾಜನ ಮಾತನಾಡಿ ಎಸ್ಸೆಸ್ಸೆಲ್ಸಿಗೆ ಹೆಚ್ಚಿನ ಮಹತ್ವ ಇರುವುದರಿಂದ ಈ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ಪಡೆಯಬೇಕು. ಮುಂದೆಯೂ ಅಧ್ಯಯನಶೀಲರಾಗಿ ಉನ್ನತ ಶಿಕ್ಷಣ ಪಡೆಯಬೇಕು ಎಂದು ಹೇಳಿದರು. ಡಾ.ಮಾರುತಿ ಪೂಜಾರಿ ಮಾತನಾಡಿದರು.<br /> <br /> ವಾಮನರಾವ ಕುಲಕರ್ಣಿ ಅಧ್ಯಕ್ಷತೆ ವಹಿಸಿದ್ದರು. ಡಾ.ಗೌತಮ ಕಾಂಬಳೆ, ಡಾ.ಸುಹಾಸ ಕಾಂಬಳೆ, ಡಾ.ನರೇಂದ್ರ ಸಿಂಧೆ, ದಿಲೀಪ ಸಿಂಧೆ, ನರಸಿಂಗರೆಡ್ಡಿ ಗದ್ಲೇಗಾಂವ, ಮಾಧವರಾವ ಹಸೂರೆ, ಬಸವರಾಜ ತಪಲಿ, ಅರುಣ ದೇಶಪಾಂಡೆ, ತಾತೇರಾವ ಪಾಟೀಲ ಉಪಸ್ಥಿತರಿದ್ದರು. ಬಾಲಾಜಿ ಬಿರಾದಾರ ಸ್ವಾಗತಿಸಿದರು. ಸುವರ್ಣಾ ಕಾಮಗಾರ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಸವಕಲ್ಯಾಣ: </strong>ಜೀವನದಲ್ಲಿ ಗುರಿ ಇಟ್ಟುಕೊಂಡು ಅದನ್ನು ಸಾಧಿಸಲು ಪ್ರಯತ್ನಿಸಬೇಕು ಎಂದು ಮಾಜಿ ಶಾಸಕ ಎಂ.ಜಿ.ಮುಳೆ ಸಲಹೆ ಕೊಟ್ಟರು.ಇಲ್ಲಿನ ಜೀಜಾಮಾತಾ ಪ್ರೌಢಶಾಲೆಯಲ್ಲಿ ಈಚೆಗೆ ಹಮ್ಮಿಕೊಂಡ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭ ಮತ್ತು ಗಣ್ಯರ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> ತಾಲ್ಲೂಕಿನಲ್ಲಿನ ಶೈಕ್ಷಣಿಕ ವಾತಾವರಣ ಸುಧಾರಿಸುತ್ತಿದೆ. ಉನ್ನತ ಪದವಿ ಪಡೆಯುವವರ ಸಂಖ್ಯೆ ಹೆಚ್ಚುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಅಭಿಪ್ರಾಯಪಟ್ಟರು.<br /> ನೇತೃತ್ವ ವಹಿಸಿದ್ದ ಮಾಣಿಕನಗರ ಸಂಸ್ಥಾನದ ಜ್ಞಾನರಾಜಪ್ರಭು ಮಹಾರಾಜರು ಮಾತನಾಡಿ ಸಭ್ಯ ಸಮಾಜದ ನಿರ್ಮಾಣಕ್ಕೆ ಯತ್ನಿಸಬೇಕು. ದೇಶಭಕ್ತಿ ಬೆಳೆಸಿಕೊಳ್ಳಬೇಕು ಎಂದರು.<br /> <br /> ಡಾ.ಎಸ್.ಬಿ.ಮಹಾಜನ ಮಾತನಾಡಿ ಎಸ್ಸೆಸ್ಸೆಲ್ಸಿಗೆ ಹೆಚ್ಚಿನ ಮಹತ್ವ ಇರುವುದರಿಂದ ಈ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ಪಡೆಯಬೇಕು. ಮುಂದೆಯೂ ಅಧ್ಯಯನಶೀಲರಾಗಿ ಉನ್ನತ ಶಿಕ್ಷಣ ಪಡೆಯಬೇಕು ಎಂದು ಹೇಳಿದರು. ಡಾ.ಮಾರುತಿ ಪೂಜಾರಿ ಮಾತನಾಡಿದರು.<br /> <br /> ವಾಮನರಾವ ಕುಲಕರ್ಣಿ ಅಧ್ಯಕ್ಷತೆ ವಹಿಸಿದ್ದರು. ಡಾ.ಗೌತಮ ಕಾಂಬಳೆ, ಡಾ.ಸುಹಾಸ ಕಾಂಬಳೆ, ಡಾ.ನರೇಂದ್ರ ಸಿಂಧೆ, ದಿಲೀಪ ಸಿಂಧೆ, ನರಸಿಂಗರೆಡ್ಡಿ ಗದ್ಲೇಗಾಂವ, ಮಾಧವರಾವ ಹಸೂರೆ, ಬಸವರಾಜ ತಪಲಿ, ಅರುಣ ದೇಶಪಾಂಡೆ, ತಾತೇರಾವ ಪಾಟೀಲ ಉಪಸ್ಥಿತರಿದ್ದರು. ಬಾಲಾಜಿ ಬಿರಾದಾರ ಸ್ವಾಗತಿಸಿದರು. ಸುವರ್ಣಾ ಕಾಮಗಾರ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>