<p>ಬಸವಕಲ್ಯಾಣ: ಇಲ್ಲಿನ ಸಸ್ತಾಪುರ ಬಂಗ್ಲಾಕ್ಕೆ ಹೋಗುವ ಮುಖ್ಯ ರಸ್ತೆಯಲ್ಲಿ ತಗ್ಗುಗಳು ಬಿದ್ದು ವಾಹನ ಸಂಚಾರಕ್ಕೆ ಅಡೆತಡೆ ಉಂಟಾಗಿ, ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಒಬ್ಬರಿಗೆ ಗಾಯವಾಗಿದ್ದರಿಂದ ರೊಚ್ಚಿಗೆದ್ದ ನಾಗರಿಕರು ಭಾನುವಾರ ದಿಢೀರ್ ಪ್ರತಿಭಟನೆ ನಡೆಸಿದರು.<br /> <br /> ಅಟೋನಗರ ಮಸೀದಿ ಹತ್ತಿರದ ಯು ಟರ್ನ್ ಹಾಗೂ 9ನೇ ರಾಷ್ಟ್ರೀಯ ಹೆದ್ದಾರಿಯಿಂದ ನಗರಕ್ಕೆ ಆಗಮಿಸುವ ರಸ್ತೆಯಲ್ಲಿ ಪ್ರವೇಶದ್ವಾರದ ಬಳಿ ಅಲ್ಲಲ್ಲಿ ತಗ್ಗುಗಳು ಬಿದ್ದಿವೆ. ಭಾರೀ ವಾಹನಗಳಿಗೆ ಅಷ್ಟೇ ಅಲ್ಲ; ಬೈಕ್ಗಳನ್ನು ತೆಗೆದುಕೊಂಡು ಹೋಗಬೇಕಾದರೂ ತೊಂದರೆ ಆಗುತ್ತಿದೆ.<br /> <br /> ವಾಹನ ವೇಗವಾಗಿ ಚಲಾಯಿಸಿದರೆ ಇಂಥ ತಗ್ಗುಗಳಲ್ಲಿ ವಾಹನ ತಿರುವು ಮುರುವು ಆಗುವ ಸಾಧ್ಯತೆ ಹೆಚ್ಚಾಗಿದೆ. ಹೀಗಾಗಿ ಒಳಗೆ ಕುಳಿತ ಪ್ರಯಾಣಿಕರಿಗೆ ತೊಂದರೆಯಾಗುವುದಲ್ಲದೆ, ವಾಹನಗಳ ಡಿಕ್ಕಿ ಸಂಭವಿಸುತ್ತಿದೆ. ಪ್ರತಿನಿತ್ಯ ಅಪಘಾತಗಳು ಸಂಭವಿಸುತ್ತಿವೆ ಎಂದು ಪ್ರತಿಭಟನಾಕಾರರು ದೂರಿದರು.<br /> <br /> ಮುಖ್ಯರಸ್ತೆಯಲ್ಲಿನ ತಗ್ಗುಗಳನ್ನು ಮುಚ್ಚಬೇಕು. ಅಲ್ಲಲ್ಲಿ ಸ್ಪೀಡ್ ಬ್ರೇಕರ್ ಹಾಕಿಸಬೇಕು. ರಸ್ತೆ ದ್ವಿಭಾಜಕದ ಎತ್ತರ ಕಡಿಮೆ ಮಾಡಬೇಕು ಎಂದು ಆಗ್ರಹಿಸಿದರು. ಈ ಬಗ್ಗೆ ಸಂಬಂಧಿತರಿಗೆ ಈ ಮೊದಲು ಮನವಿ ಸಲ್ಲಿಸಿದರೂ ಪ್ರಯೋಜನ ಆಗಿಲ್ಲ ಎಂದು ದೂರಿದರು. ಶಿರಸ್ತೆದಾರ ದೇವಿದಾಸ ಬಿರಾದಾರ ಅವರಿಗೆ ಮನವಿಪತ್ರ ಸಲ್ಲಿಸಲಾಯಿತು.<br /> <br /> ರಸ್ತೆತಡೆ ಮಾಡಿದ್ದರಿಂದ ಕೆಲಕಾಲ ವಾಹನ ಸಂಚಾರ ಸ್ಥಗಿತವಾಗಿತ್ತು. ಪ್ರಯಾಣಿಕರು, ಮದುವೆ ಕಾರ್ಯಕ್ರಮಗಳಿಗೆ ಹೋಗುವವರು ಪರದಾಡಬೇಕಾಯಿತು. ನಗರ ಠಾಣೆ ಸಬ್ ಇನ್ಸ್ಪೆಕ್ಟರ್ ಉಮೇಶ ಕಾಂಬಳೆ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ಶಾಂತಗೊಳಿಸಿದರು.<br /> ಅಟೋನಗರ ಕಾರ್ಮಿಕರ ಸಂಘದ ಅಧ್ಯಕ್ಷ ಖಲೀಲ ಅಹ್ಮದ್, ಇಕ್ಬಾದುಲ್ಲಾ ಖಾನ್, ಅನೀಲ ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಸವಕಲ್ಯಾಣ: ಇಲ್ಲಿನ ಸಸ್ತಾಪುರ ಬಂಗ್ಲಾಕ್ಕೆ ಹೋಗುವ ಮುಖ್ಯ ರಸ್ತೆಯಲ್ಲಿ ತಗ್ಗುಗಳು ಬಿದ್ದು ವಾಹನ ಸಂಚಾರಕ್ಕೆ ಅಡೆತಡೆ ಉಂಟಾಗಿ, ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಒಬ್ಬರಿಗೆ ಗಾಯವಾಗಿದ್ದರಿಂದ ರೊಚ್ಚಿಗೆದ್ದ ನಾಗರಿಕರು ಭಾನುವಾರ ದಿಢೀರ್ ಪ್ರತಿಭಟನೆ ನಡೆಸಿದರು.<br /> <br /> ಅಟೋನಗರ ಮಸೀದಿ ಹತ್ತಿರದ ಯು ಟರ್ನ್ ಹಾಗೂ 9ನೇ ರಾಷ್ಟ್ರೀಯ ಹೆದ್ದಾರಿಯಿಂದ ನಗರಕ್ಕೆ ಆಗಮಿಸುವ ರಸ್ತೆಯಲ್ಲಿ ಪ್ರವೇಶದ್ವಾರದ ಬಳಿ ಅಲ್ಲಲ್ಲಿ ತಗ್ಗುಗಳು ಬಿದ್ದಿವೆ. ಭಾರೀ ವಾಹನಗಳಿಗೆ ಅಷ್ಟೇ ಅಲ್ಲ; ಬೈಕ್ಗಳನ್ನು ತೆಗೆದುಕೊಂಡು ಹೋಗಬೇಕಾದರೂ ತೊಂದರೆ ಆಗುತ್ತಿದೆ.<br /> <br /> ವಾಹನ ವೇಗವಾಗಿ ಚಲಾಯಿಸಿದರೆ ಇಂಥ ತಗ್ಗುಗಳಲ್ಲಿ ವಾಹನ ತಿರುವು ಮುರುವು ಆಗುವ ಸಾಧ್ಯತೆ ಹೆಚ್ಚಾಗಿದೆ. ಹೀಗಾಗಿ ಒಳಗೆ ಕುಳಿತ ಪ್ರಯಾಣಿಕರಿಗೆ ತೊಂದರೆಯಾಗುವುದಲ್ಲದೆ, ವಾಹನಗಳ ಡಿಕ್ಕಿ ಸಂಭವಿಸುತ್ತಿದೆ. ಪ್ರತಿನಿತ್ಯ ಅಪಘಾತಗಳು ಸಂಭವಿಸುತ್ತಿವೆ ಎಂದು ಪ್ರತಿಭಟನಾಕಾರರು ದೂರಿದರು.<br /> <br /> ಮುಖ್ಯರಸ್ತೆಯಲ್ಲಿನ ತಗ್ಗುಗಳನ್ನು ಮುಚ್ಚಬೇಕು. ಅಲ್ಲಲ್ಲಿ ಸ್ಪೀಡ್ ಬ್ರೇಕರ್ ಹಾಕಿಸಬೇಕು. ರಸ್ತೆ ದ್ವಿಭಾಜಕದ ಎತ್ತರ ಕಡಿಮೆ ಮಾಡಬೇಕು ಎಂದು ಆಗ್ರಹಿಸಿದರು. ಈ ಬಗ್ಗೆ ಸಂಬಂಧಿತರಿಗೆ ಈ ಮೊದಲು ಮನವಿ ಸಲ್ಲಿಸಿದರೂ ಪ್ರಯೋಜನ ಆಗಿಲ್ಲ ಎಂದು ದೂರಿದರು. ಶಿರಸ್ತೆದಾರ ದೇವಿದಾಸ ಬಿರಾದಾರ ಅವರಿಗೆ ಮನವಿಪತ್ರ ಸಲ್ಲಿಸಲಾಯಿತು.<br /> <br /> ರಸ್ತೆತಡೆ ಮಾಡಿದ್ದರಿಂದ ಕೆಲಕಾಲ ವಾಹನ ಸಂಚಾರ ಸ್ಥಗಿತವಾಗಿತ್ತು. ಪ್ರಯಾಣಿಕರು, ಮದುವೆ ಕಾರ್ಯಕ್ರಮಗಳಿಗೆ ಹೋಗುವವರು ಪರದಾಡಬೇಕಾಯಿತು. ನಗರ ಠಾಣೆ ಸಬ್ ಇನ್ಸ್ಪೆಕ್ಟರ್ ಉಮೇಶ ಕಾಂಬಳೆ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ಶಾಂತಗೊಳಿಸಿದರು.<br /> ಅಟೋನಗರ ಕಾರ್ಮಿಕರ ಸಂಘದ ಅಧ್ಯಕ್ಷ ಖಲೀಲ ಅಹ್ಮದ್, ಇಕ್ಬಾದುಲ್ಲಾ ಖಾನ್, ಅನೀಲ ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>