ಬಸವಕಲ್ಯಾಣ:`ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಸಮಾನತೆಯ ಹರಿಕರರಾದ ಬಸವಣ್ಣನವರ ಕಾರ್ಯಕ್ಷೇತ್ರವಾದ ಬಸವಕಲ್ಯಾಣದಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗುವುದು. ಒಂದು ದಿನದ ಅಧಿವೇಶನ ಹಮ್ಮಿಕೊಳ್ಳುವ ಬಗ್ಗೆಯೂ ಪರಿಶೀಲಿಸಲಾಗುವುದು’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದರು.