<p><strong>ಚಿತ್ತಾಪುರ:</strong> ತಾಲ್ಲೂಕಿನಿಂದ ಮಳಖೇಡವರೆಗೆ ನಿರ್ಮಾಣ ಮಾಡುತ್ತಿರುವ ರಸ್ತೆಯಲ್ಲಿೆ ನಿರ್ಮಿಸಿದ್ದ ಕಿರು ಸೇತುವೆಗೆ ಹಾಕಿದ್ದ ಕೊಳವೆಯು, ಎತ್ತರವಾಗಿ ರೈತರ ಜಮೀನಿನಲ್ಲಿ ನೀರು ಸಂಗ್ರಹವಾಗುತ್ತಿತ್ತು.<br /> <br /> ಈ ಸಮಸ್ಯೆ ಬಗ್ಗೆ ಪ್ರಜಾವಾಣಿ ಜೂ. 3ರ ಸಂಚಿಕೆಯಲ್ಲಿ ಬೆಳಕು ಚೆಲ್ಲಿತ್ತು. ಕೂಡಲೇ ಎಚ್ಚೆತ್ತುಕೊಂಡ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಸಂಬಂಧಿಸಿದ ಗುತ್ತಿಗೆದಾರರಿಂದ ನೀರು ಸಂಗ್ರಹವಾಗುತ್ತಿದ್ದ ಸಮಸ್ಯೆಗೆ ಪರಿಹಾರ ಕಲ್ಪಿಸಿದ್ದಾರೆ.<br /> <br /> ಮರಗೋಳ ನಾಲಾದ ಸಮೀಪ ಇರುವ ಹೊಲದ ಪಕ್ಕದ ಕಿರು ಸೇತುವೆ ನಿರ್ಮಾಣ ಮಾಡುವ ಸಮಯದಲ್ಲಿ ಸೇತುವೆಗೆ ಕೊಳವೆಯನ್ನು ಭೂಮಿಗಿಂತ ಮೇಲ್ಮಟ್ಟದಲ್ಲಿ ಹಾಕಲಾಗಿತ್ತು.<br /> <br /> ಹೀಗಾಗಿ ಮಳೆ ನೀರು ಹರಿದು ಹೋಗದೆ ಹೊಲದ ತುಂಬಾ ನಿಂತು ಹೊಲದ ರೈತರಿಗೆ ಕೃಷಿ ಚಟುವಟಿಕೆಗಳು, ಕೆಲಸಗಳು ಮಾಡಲಾಗದೆ ತೀವ್ರ ತೊಂದರೆಯಾಗಿತ್ತು.<br /> <br /> <strong>ಈಡೇರಿದ ಭರವಸೆ:</strong> ಹೊಲದಲ್ಲಿ ಮಳೆ ನೀರು ನಿಲ್ಲದಂತೆ ಮತ್ತು ನಿಂತಿರುವ ನೀರು ಹರಿದು ಹೋಗುವಂತೆ ವ್ಯವಸ್ಥೆ ಮಾಡಿಕೊಡುತ್ತೇವೆ ಎಂದು ಇಲ್ಲಿನ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಮಹ್ಮದ್ ಇಸ್ಮಾಯಿಲ್ ಪಟೇಲ್ ಭರವಸೆ ನೀಡಿದ್ದರು.<br /> <br /> ರೈತರಿಗೆ ಆಗುತ್ತಿರುವ ಸಮಸ್ಯೆಯನ್ನು ಗಮನಿಸಿ ಅಧಿಕಾರಿಗಳು ಸಕರಾತ್ಮಕವಾಗಿ ಸ್ಪಂದಸಿದ್ದಕ್ಕೆ ರೈತರು ಹರ್ಷ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ತಾಪುರ:</strong> ತಾಲ್ಲೂಕಿನಿಂದ ಮಳಖೇಡವರೆಗೆ ನಿರ್ಮಾಣ ಮಾಡುತ್ತಿರುವ ರಸ್ತೆಯಲ್ಲಿೆ ನಿರ್ಮಿಸಿದ್ದ ಕಿರು ಸೇತುವೆಗೆ ಹಾಕಿದ್ದ ಕೊಳವೆಯು, ಎತ್ತರವಾಗಿ ರೈತರ ಜಮೀನಿನಲ್ಲಿ ನೀರು ಸಂಗ್ರಹವಾಗುತ್ತಿತ್ತು.<br /> <br /> ಈ ಸಮಸ್ಯೆ ಬಗ್ಗೆ ಪ್ರಜಾವಾಣಿ ಜೂ. 3ರ ಸಂಚಿಕೆಯಲ್ಲಿ ಬೆಳಕು ಚೆಲ್ಲಿತ್ತು. ಕೂಡಲೇ ಎಚ್ಚೆತ್ತುಕೊಂಡ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಸಂಬಂಧಿಸಿದ ಗುತ್ತಿಗೆದಾರರಿಂದ ನೀರು ಸಂಗ್ರಹವಾಗುತ್ತಿದ್ದ ಸಮಸ್ಯೆಗೆ ಪರಿಹಾರ ಕಲ್ಪಿಸಿದ್ದಾರೆ.<br /> <br /> ಮರಗೋಳ ನಾಲಾದ ಸಮೀಪ ಇರುವ ಹೊಲದ ಪಕ್ಕದ ಕಿರು ಸೇತುವೆ ನಿರ್ಮಾಣ ಮಾಡುವ ಸಮಯದಲ್ಲಿ ಸೇತುವೆಗೆ ಕೊಳವೆಯನ್ನು ಭೂಮಿಗಿಂತ ಮೇಲ್ಮಟ್ಟದಲ್ಲಿ ಹಾಕಲಾಗಿತ್ತು.<br /> <br /> ಹೀಗಾಗಿ ಮಳೆ ನೀರು ಹರಿದು ಹೋಗದೆ ಹೊಲದ ತುಂಬಾ ನಿಂತು ಹೊಲದ ರೈತರಿಗೆ ಕೃಷಿ ಚಟುವಟಿಕೆಗಳು, ಕೆಲಸಗಳು ಮಾಡಲಾಗದೆ ತೀವ್ರ ತೊಂದರೆಯಾಗಿತ್ತು.<br /> <br /> <strong>ಈಡೇರಿದ ಭರವಸೆ:</strong> ಹೊಲದಲ್ಲಿ ಮಳೆ ನೀರು ನಿಲ್ಲದಂತೆ ಮತ್ತು ನಿಂತಿರುವ ನೀರು ಹರಿದು ಹೋಗುವಂತೆ ವ್ಯವಸ್ಥೆ ಮಾಡಿಕೊಡುತ್ತೇವೆ ಎಂದು ಇಲ್ಲಿನ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಮಹ್ಮದ್ ಇಸ್ಮಾಯಿಲ್ ಪಟೇಲ್ ಭರವಸೆ ನೀಡಿದ್ದರು.<br /> <br /> ರೈತರಿಗೆ ಆಗುತ್ತಿರುವ ಸಮಸ್ಯೆಯನ್ನು ಗಮನಿಸಿ ಅಧಿಕಾರಿಗಳು ಸಕರಾತ್ಮಕವಾಗಿ ಸ್ಪಂದಸಿದ್ದಕ್ಕೆ ರೈತರು ಹರ್ಷ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>