<p><strong>ಬಸವಕಲ್ಯಾಣ: </strong>ತಾಲ್ಲೂಕಿನ ಈಶ್ವರನಗರ, ಕೈಕಾಡಿ ಗಲ್ಲಿ ಮತ್ತು ಪಾರಧಿ ಓಣಿಗಳಿಗೆ ಶಾಸಕ ಮಲ್ಲಿಕಾರ್ಜುನ ಖೂಬಾ ಶನಿವಾರ ದಿಢೀರ್ ಭೇಟಿ ನೀಡಿ ಪರಿಶೀಲಿಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.<br /> <br /> ಪಾರಧಿಗಲ್ಲಿ ಇಳಿಜಾರು ಪ್ರದೇಶದಲ್ಲಿ ಇರುವ ಕಾರಣ ನಗರದ ಚರಂಡಿ ನೀರು ನಿಲ್ಲುತ್ತಿದೆ. ಹೀಗಾಗಿ ಎಲ್ಲೆಡೆ ಹೊಲಸು ವಾತಾವರಣ ಇದೆ. ಆದರೂ ನಗರಸಭೆಯವರು ಸ್ವಚ್ಛತೆಗಾಗಿ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಜನರು ದೂರಿದರು.<br /> <br /> ಸಮರ್ಪಕ ಕುಡಿಯುವ ನೀರು ಸರಬರಾಜಾಗುತ್ತಿಲ್ಲ. ನಲ್ಲಿಯ ಬಳಿ ಚರಂಡಿಯ ಹೊಲಸು ನೀರು ಹರಿಯುತ್ತಿದೆ. ಈ ಬಗ್ಗೆ ನಗರಸಭೆ ಆಯುಕ್ತರಿಗೆ ಮನವಿ ಸಲ್ಲಿಸಿದರೂ ಗಮನ ನೀಡುತ್ತಿಲ್ಲ ಎಂದು ಓಣಿ ನಿವಾಸಿಗಳು ದೂರಿದರು. ಇಲ್ಲಿನ ವ್ಯವಸ್ಥೆಯನ್ನು ಶೀಘ್ರ ಬಗೆಹರಿಸಬೇಕು ಎಂದು ಸಿಕಂದರ ಪಾರಧಿ ಒತ್ತಾಯಿಸಿದರು.<br /> <br /> ವಾರ್ಡ್ ಅಭಿವೃದ್ಧಿಗಾಗಿ ನಗರಸಭೆ ಅಧಿಕಾರಿಗಳಿಗೆ ಸೂಚಿಸಲಾಗುವುದು. ಹೈದರಾಬಾದ್ ಕರ್ನಾಟಕ ಅಭಿವೃದ್ಧಿ ಮಂಡಳಿ ಅನುದಾನದಲ್ಲಿ ₨20 ಲಕ್ಷ ಮಂಜೂರು ಮಾಡಲಾಗಿದೆ. ಈ ಹಣದಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ಮಲ್ಲಿಕಾರ್ಜುನ ಖೂಬಾ ಭರವಸೆ ನೀಡಿದರು.<br /> <br /> ಕೈಕಾಡಿ ಮಹಾರಾಜ ಭವನ ಮತ್ತು ಪಾರಧಿ ಗಲ್ಲಿಯಲ್ಲಿ ಭವಾನಿ ಮಂದಿರ ನಿರ್ಮಾಣಕ್ಕೆ ₨50 ಸಾವಿರ ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು. ತಹಶೀಲ್ದಾರ್ ಡಿ.ಎಂ.ಪಾಣಿ, ಮುಖಂಡರಾದ ಕೇಶಪ್ಪ ಬಿರಾದಾರ, ಶಬ್ಬೀರಪಾಶಾ ಮುಜಾವರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಸವಕಲ್ಯಾಣ: </strong>ತಾಲ್ಲೂಕಿನ ಈಶ್ವರನಗರ, ಕೈಕಾಡಿ ಗಲ್ಲಿ ಮತ್ತು ಪಾರಧಿ ಓಣಿಗಳಿಗೆ ಶಾಸಕ ಮಲ್ಲಿಕಾರ್ಜುನ ಖೂಬಾ ಶನಿವಾರ ದಿಢೀರ್ ಭೇಟಿ ನೀಡಿ ಪರಿಶೀಲಿಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.<br /> <br /> ಪಾರಧಿಗಲ್ಲಿ ಇಳಿಜಾರು ಪ್ರದೇಶದಲ್ಲಿ ಇರುವ ಕಾರಣ ನಗರದ ಚರಂಡಿ ನೀರು ನಿಲ್ಲುತ್ತಿದೆ. ಹೀಗಾಗಿ ಎಲ್ಲೆಡೆ ಹೊಲಸು ವಾತಾವರಣ ಇದೆ. ಆದರೂ ನಗರಸಭೆಯವರು ಸ್ವಚ್ಛತೆಗಾಗಿ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಜನರು ದೂರಿದರು.<br /> <br /> ಸಮರ್ಪಕ ಕುಡಿಯುವ ನೀರು ಸರಬರಾಜಾಗುತ್ತಿಲ್ಲ. ನಲ್ಲಿಯ ಬಳಿ ಚರಂಡಿಯ ಹೊಲಸು ನೀರು ಹರಿಯುತ್ತಿದೆ. ಈ ಬಗ್ಗೆ ನಗರಸಭೆ ಆಯುಕ್ತರಿಗೆ ಮನವಿ ಸಲ್ಲಿಸಿದರೂ ಗಮನ ನೀಡುತ್ತಿಲ್ಲ ಎಂದು ಓಣಿ ನಿವಾಸಿಗಳು ದೂರಿದರು. ಇಲ್ಲಿನ ವ್ಯವಸ್ಥೆಯನ್ನು ಶೀಘ್ರ ಬಗೆಹರಿಸಬೇಕು ಎಂದು ಸಿಕಂದರ ಪಾರಧಿ ಒತ್ತಾಯಿಸಿದರು.<br /> <br /> ವಾರ್ಡ್ ಅಭಿವೃದ್ಧಿಗಾಗಿ ನಗರಸಭೆ ಅಧಿಕಾರಿಗಳಿಗೆ ಸೂಚಿಸಲಾಗುವುದು. ಹೈದರಾಬಾದ್ ಕರ್ನಾಟಕ ಅಭಿವೃದ್ಧಿ ಮಂಡಳಿ ಅನುದಾನದಲ್ಲಿ ₨20 ಲಕ್ಷ ಮಂಜೂರು ಮಾಡಲಾಗಿದೆ. ಈ ಹಣದಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ಮಲ್ಲಿಕಾರ್ಜುನ ಖೂಬಾ ಭರವಸೆ ನೀಡಿದರು.<br /> <br /> ಕೈಕಾಡಿ ಮಹಾರಾಜ ಭವನ ಮತ್ತು ಪಾರಧಿ ಗಲ್ಲಿಯಲ್ಲಿ ಭವಾನಿ ಮಂದಿರ ನಿರ್ಮಾಣಕ್ಕೆ ₨50 ಸಾವಿರ ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು. ತಹಶೀಲ್ದಾರ್ ಡಿ.ಎಂ.ಪಾಣಿ, ಮುಖಂಡರಾದ ಕೇಶಪ್ಪ ಬಿರಾದಾರ, ಶಬ್ಬೀರಪಾಶಾ ಮುಜಾವರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>