<p><strong>ಬೀದರ್: </strong> ಕೈದಿಗಳಿಗೆ ಎಳ್ಳು-ಬೆಲ್ಲ ಹಂಚುವ ಮೂಲಕ ಕರ್ನಾಟಕ ಲೇಖಕಿಯರ ಸಂಘವು ನಗರದ ಜಿಲ್ಲಾ ಕಾರಾಗೃಹದಲ್ಲಿ ಶನಿವಾರ ಸಂಕ್ರಾಂತಿ ಆಚರಿಸಿತು.<br /> <br /> ಕಾರಾಗೃಹದಲ್ಲಿ ಇರುವ ಕೈದಿಗಳಿಗೆ ಹಬ್ಬದ ಪ್ರಯುಕ್ತ ಎಳ್ಳು- ಬೆಲ್ಲ ಹಂಚಲಾಯಿತು. ಸಾಮೂಹಿಕವಾಗಿ ಸಿಹಿ ತಿನ್ನುವ ಮೂಲಕ ಹಬ್ಬದ ಸಂಭ್ರಮ ಆಚರಿಸಲಾಯಿತು. ಸಂಘವು `ಮಹಿಳಾ ಕೈದಿಗಳಿಗೆ ಅರಿವು ಕಾರ್ಯಕ್ರಮ~ವನ್ನೂ ಏರ್ಪಡಿಸಿತ್ತು. <br /> <br /> ಅಸಮಾನತೆಯೇ ಅಪರಾಧಗಳಿಗೆ ಕಾರಣ ಎಂದು ಜಿಲ್ಲಾ ಸತ್ರ ನ್ಯಾಯಾಧೀಶ ವೆಂಕಟೇಶ ಅಭಿಪ್ರಾಯಪಟ್ಟರು. ಸಂವಿಧಾನದಲ್ಲಿ ಎಲ್ಲರಿಗೂ ಸಮಾನ ಹಕ್ಕುಗಳನ್ನು ನೀಡಲಾಗಿದೆ. ಹೀಗಾಗಿ ಅಸಮಾನತೆಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆಯಬೇಕಿದೆ ಎಂದು ಹೇಳಿದರು.<br /> <br /> ಕೈದಿಗಳು ತಪ್ಪಿಂದ ಆದ ತಪ್ಪಿಗೆ ಪಶ್ಚಾತಾಪಪಟ್ಟು ಜೈಲಿನಿಂದ ಹೊರ ಬಂದ ನಂತರ ಒಳ್ಳೆಯ ನಾಗರಿಕರಾಗಿ ಬದುಕಬೇಕು ಎಂದು ವಿಶೇಷ ಉಪನ್ಯಾಸ ನೀಡಿದ ಮಾರ್ಕೇಟ್ ಠಾಣೆಯ ಮಹಿಳಾ ಪೇದೆ ಮಲ್ಲೇಶ್ವರಿ ಉದಯಗಿರಿ ಕಿವಿಮಾತು ಹೇಳಿದರು.<br /> <br /> ಪತ್ರಕರ್ತೆ ಬಿ.ಎಂ. ಶಶಿಕಲಾ ಮಾತನಾಡಿದರು. ಕರ್ನಾಟಕ ಲೇಖಕಿಯರ ಸಂಘದ ಜಿಲ್ಲಾ ಅಧ್ಯಕ್ಷೆ ಡಾ. ವಜ್ರಾ ಪಾಟೀಲ್ ಅಧ್ಯಕ್ಷತೆ ವಹಿಸಿದ್ದರು.</p>.<p>ಬೀ<strong>ದರ್</strong>: ಸಂಕ್ರಾಂತಿ ಹಬ್ಬವನ್ನು ನಗರದಲ್ಲಿ ಭಾನುವಾರ ಸಂಭ್ರಮ ಸಡಗರಿಂದ ಆಚರಿಸಲಾಯಿತು. ಮಕ್ಕಳು, ಯುವಕರು, ಮಹಿಳೆಯರಾದಿಯಾಗಿ ಎಲ್ಲರು ಪರಸ್ಪರ ಎಳ್ಳು ಬೆಲ್ಲ ಹಂಚುವ ಮೂಲಕ ಸಂತಸ ಹಂಚಿಕೊಂಡದರು.<br /> <br /> ಯುವಕರು ಗುಂಪು ಕಟ್ಟಿಕೊಂಡು ಸ್ನೇಹಿತರು ಹಾಗೂ ಸಂಬಂಧಿಕರ ಮನೆಗಳಿಗೆ ತೆರಳಿ ಎಳ್ಳು- ಬೆಲ್ಲ ಹಂಚಿದರು. ಸ್ನೇಹಿತರು ಎಳ್ಳು- ಬೆಲ್ಲ ವಿನಿಮಯ ಮಾಡಿಕೊಂಡು ಪರಸ್ಪರ ಅಪ್ಪಿಕೊಂಡು ಶುಭಾಶಯ ಕೋರಿದರು.</p>.<p>ಬೆಳಿಗ್ಗೆ `ಟಿಕ್ಸಾ~ ಹಚ್ಚಿಕೊಂಡು ಸ್ನಾನ ಮಾಡುವುದು ಸಂಪ್ರದಾಯ. ಹಾಗೆಯೇ ಶೇಂಗಾ ಹೋಳಿಗೆ ವಿಶೇಷ ಖಾದ್ಯಗಳಲ್ಲಿ ಒಂದಾಗಿತ್ತು. ಮಕ್ಕಳು ಹೊಸ ಬಟ್ಟೆ ಧರಿಸಿ ಸಂಭ್ರಮಿಸಿದರು. ಸಂಜೆ ಪರಸ್ಪರರ ಮನೆಗಳಿಗೆ ತೆರಳಿ ಎಳ್ಳು- ಬೆಲ್ಲ ಹಂಚುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong> ಕೈದಿಗಳಿಗೆ ಎಳ್ಳು-ಬೆಲ್ಲ ಹಂಚುವ ಮೂಲಕ ಕರ್ನಾಟಕ ಲೇಖಕಿಯರ ಸಂಘವು ನಗರದ ಜಿಲ್ಲಾ ಕಾರಾಗೃಹದಲ್ಲಿ ಶನಿವಾರ ಸಂಕ್ರಾಂತಿ ಆಚರಿಸಿತು.<br /> <br /> ಕಾರಾಗೃಹದಲ್ಲಿ ಇರುವ ಕೈದಿಗಳಿಗೆ ಹಬ್ಬದ ಪ್ರಯುಕ್ತ ಎಳ್ಳು- ಬೆಲ್ಲ ಹಂಚಲಾಯಿತು. ಸಾಮೂಹಿಕವಾಗಿ ಸಿಹಿ ತಿನ್ನುವ ಮೂಲಕ ಹಬ್ಬದ ಸಂಭ್ರಮ ಆಚರಿಸಲಾಯಿತು. ಸಂಘವು `ಮಹಿಳಾ ಕೈದಿಗಳಿಗೆ ಅರಿವು ಕಾರ್ಯಕ್ರಮ~ವನ್ನೂ ಏರ್ಪಡಿಸಿತ್ತು. <br /> <br /> ಅಸಮಾನತೆಯೇ ಅಪರಾಧಗಳಿಗೆ ಕಾರಣ ಎಂದು ಜಿಲ್ಲಾ ಸತ್ರ ನ್ಯಾಯಾಧೀಶ ವೆಂಕಟೇಶ ಅಭಿಪ್ರಾಯಪಟ್ಟರು. ಸಂವಿಧಾನದಲ್ಲಿ ಎಲ್ಲರಿಗೂ ಸಮಾನ ಹಕ್ಕುಗಳನ್ನು ನೀಡಲಾಗಿದೆ. ಹೀಗಾಗಿ ಅಸಮಾನತೆಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆಯಬೇಕಿದೆ ಎಂದು ಹೇಳಿದರು.<br /> <br /> ಕೈದಿಗಳು ತಪ್ಪಿಂದ ಆದ ತಪ್ಪಿಗೆ ಪಶ್ಚಾತಾಪಪಟ್ಟು ಜೈಲಿನಿಂದ ಹೊರ ಬಂದ ನಂತರ ಒಳ್ಳೆಯ ನಾಗರಿಕರಾಗಿ ಬದುಕಬೇಕು ಎಂದು ವಿಶೇಷ ಉಪನ್ಯಾಸ ನೀಡಿದ ಮಾರ್ಕೇಟ್ ಠಾಣೆಯ ಮಹಿಳಾ ಪೇದೆ ಮಲ್ಲೇಶ್ವರಿ ಉದಯಗಿರಿ ಕಿವಿಮಾತು ಹೇಳಿದರು.<br /> <br /> ಪತ್ರಕರ್ತೆ ಬಿ.ಎಂ. ಶಶಿಕಲಾ ಮಾತನಾಡಿದರು. ಕರ್ನಾಟಕ ಲೇಖಕಿಯರ ಸಂಘದ ಜಿಲ್ಲಾ ಅಧ್ಯಕ್ಷೆ ಡಾ. ವಜ್ರಾ ಪಾಟೀಲ್ ಅಧ್ಯಕ್ಷತೆ ವಹಿಸಿದ್ದರು.</p>.<p>ಬೀ<strong>ದರ್</strong>: ಸಂಕ್ರಾಂತಿ ಹಬ್ಬವನ್ನು ನಗರದಲ್ಲಿ ಭಾನುವಾರ ಸಂಭ್ರಮ ಸಡಗರಿಂದ ಆಚರಿಸಲಾಯಿತು. ಮಕ್ಕಳು, ಯುವಕರು, ಮಹಿಳೆಯರಾದಿಯಾಗಿ ಎಲ್ಲರು ಪರಸ್ಪರ ಎಳ್ಳು ಬೆಲ್ಲ ಹಂಚುವ ಮೂಲಕ ಸಂತಸ ಹಂಚಿಕೊಂಡದರು.<br /> <br /> ಯುವಕರು ಗುಂಪು ಕಟ್ಟಿಕೊಂಡು ಸ್ನೇಹಿತರು ಹಾಗೂ ಸಂಬಂಧಿಕರ ಮನೆಗಳಿಗೆ ತೆರಳಿ ಎಳ್ಳು- ಬೆಲ್ಲ ಹಂಚಿದರು. ಸ್ನೇಹಿತರು ಎಳ್ಳು- ಬೆಲ್ಲ ವಿನಿಮಯ ಮಾಡಿಕೊಂಡು ಪರಸ್ಪರ ಅಪ್ಪಿಕೊಂಡು ಶುಭಾಶಯ ಕೋರಿದರು.</p>.<p>ಬೆಳಿಗ್ಗೆ `ಟಿಕ್ಸಾ~ ಹಚ್ಚಿಕೊಂಡು ಸ್ನಾನ ಮಾಡುವುದು ಸಂಪ್ರದಾಯ. ಹಾಗೆಯೇ ಶೇಂಗಾ ಹೋಳಿಗೆ ವಿಶೇಷ ಖಾದ್ಯಗಳಲ್ಲಿ ಒಂದಾಗಿತ್ತು. ಮಕ್ಕಳು ಹೊಸ ಬಟ್ಟೆ ಧರಿಸಿ ಸಂಭ್ರಮಿಸಿದರು. ಸಂಜೆ ಪರಸ್ಪರರ ಮನೆಗಳಿಗೆ ತೆರಳಿ ಎಳ್ಳು- ಬೆಲ್ಲ ಹಂಚುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>