ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಮರ್ಥ್ಯ ವೃದ್ಧಿಗೆ ತರಬೇತಿ ಪೂರಕ: ಬಿ.ಎಲ್. ಚಂದ್ರಶೇಖರ್

Last Updated 16 ಜೂನ್ 2012, 10:00 IST
ಅಕ್ಷರ ಗಾತ್ರ

ಬೀದರ್: ಸಾಮರ್ಥ್ಯ ವೃದ್ಧಿಗೆ ತರಬೇತಿಗಳು ಪೂರಕವಾಗಿವೆ ಎಂದು ಗುಲ್ಬರ್ಗದ ಉದ್ಯೋಗ ಮತ್ತು ತರಬೇತಿ ಇಲಾಖೆ ಜಂಟಿ ನಿರ್ದೇಶಕ ಬಿ.ಎಲ್. ಚಂದ್ರಶೇಖರ್ ಅಭಿಪ್ರಾಯಪಟ್ಟರು.

ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಶುಕ್ರವಾರ ನಡೆದ ಗುಲ್ಬರ್ಗ ವಿಭಾಗ ಮಟ್ಟದ ವಿಷಯ ನಿರ್ವಾಹಕರ ಪರಿಚಯಾತ್ಮಕ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ಅನಗತ್ಯ ವಿಷಯಗಳಿಂದ ಮನಸ್ಸು ಚಂಚಲಗೊಳ್ಳುತ್ತದೆ. ಆದ್ದರಿಂದ ಅತ್ತ ಕಡೆಗೆ ಗಮನ ಹರಿಸದೆ ಅಗತ್ಯ ವಿಷಯಗಳಲ್ಲಿ ಜ್ಞಾನ ವೃದ್ಧಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.

ಪ್ರಾಚಾರ್ಯ ಶಿವಶಂಕರ ಟೋಕರೆ ಮಾತನಾಡಿದರು. ಪ್ರಮುಖರಾದ ಸಂಜೀವಕುಮಾರ, ತನುಜಾ, ಮಹೇಶ, ಶರಣಬಸಪ್ಪ ಮಡಿವಾಳ್ ಉಪಸ್ಥಿತರಿದ್ದರು. ಸೈಯದ್ ಅಕ್ಬರ್ ಪಾಶಾ ಸ್ವಾಗತಿಸಿದರು. ಶರಣಬಸಪ್ಪ ಮಡಿವಾಳ್ ನಿರೂಪಿಸಿದರು. ಯುಸೂಫ್‌ಮಿಯ್ಯೊ ವಂದಿಸಿದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT