<p><strong>ಬೀದರ್: ಜಿಲ್ಲೆಯ </strong>ಪ್ರತ್ಯೇಕ ಕಡೆಗಳಲ್ಲಿ ಬುಧವಾರ ಸಿಡಿಲು ಬಡಿದು ಮೂರು ಜಾನುವಾರುಗಳು ಮೃತಪಟ್ಟಿವೆ.<br /> ಬೀದರ್ ತಾಲ್ಲೂಕಿನ ಚಟ್ನಳ್ಳಿ ಗ್ರಾಮದಲ್ಲಿ ಮುಸ್ತಫಾ ಎಂಬುವರಿಗೆ ಸೇರಿದ ಎರಡು ಎತ್ತುಗಳು ಸಿಡಿಲಿಗೆ ಬಲಿಯಾಗಿವೆ. ಎತ್ತುಗಳ ಮೌಲ್ಯ 60 ಸಾವಿರ ರೂಪಾಯಿ ಎಂದು ಅಂದಾಜಿಸಲಾಗಿದೆ. <br /> <br /> ಹೊಲದಲ್ಲಿ ಇರುವ ಕೊಟ್ಟಿಗೆಯೊಂದರಲ್ಲಿ ಎತ್ತುಗಳನ್ನು ಕಟ್ಟಿ ಹಾಕಲಾಗಿತ್ತು. ಕೊಟ್ಟಿಗೆಗೆ ಸಿಡಿಲು ಅಪ್ಪಳಿಸಿದ್ದರಿಂದ ಎತ್ತುಗಳು ಸಾವನ್ನಪ್ಪಿವೆ. ಈ ಸಂಬಂಧ ಬಗದಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. <br /> <br /> ಭಾಲ್ಕಿ ತಾಲ್ಲೂಕಿನ ಧನ್ನೂರಾ ಗ್ರಾಮದಲ್ಲಿ ಗುರುನಾಥ ಮಲ್ಲಪ್ಪ ಮೇತ್ರೆ ಎಂಬುವರಿಗೆ ಸೇರಿದ ಎಮ್ಮೆ ಸಿಡಿಲಿಗೆ ಬಲಿಯಾಗಿದೆ. ಎಮ್ಮೆಯ ಮೌಲ್ಯ 35 ಸಾವಿರ ರೂಪಾಯಿ ಎಂದು ಅಂದಾಜಿಸಲಾಗಿದೆ. ಈ ಕುರಿತು ಧನ್ನೂರಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.<br /> <br /> <strong>ಸಿಡಿಲಿಗೆ ಎತ್ತು ಬಲಿ</strong><br /> ಔರಾದ್: ಸಮೀಪದ ಮುಂಗನಾಳದಲ್ಲಿ ಸಿಡಿಲು ಬಡಿದು ಎತ್ತು ಮೃತಪಟ್ಟ ಘಟನೆ ಬುಧವಾರ ಸಂಜೆ ನಡೆದಿದೆ. <br /> ಸೋಪಾನ ಮಚಕುರಿ ಎಂಬ ರೈತನಿಗೆ ಸೇರಿದ ಸುಮಾರು 40 ಸಾವಿರ ಮೌಲ್ಯದ ಎತ್ತು ಮೃತಪಟ್ಟಿದೆ. ಸಂಜೆ ವೇಳೆ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: ಜಿಲ್ಲೆಯ </strong>ಪ್ರತ್ಯೇಕ ಕಡೆಗಳಲ್ಲಿ ಬುಧವಾರ ಸಿಡಿಲು ಬಡಿದು ಮೂರು ಜಾನುವಾರುಗಳು ಮೃತಪಟ್ಟಿವೆ.<br /> ಬೀದರ್ ತಾಲ್ಲೂಕಿನ ಚಟ್ನಳ್ಳಿ ಗ್ರಾಮದಲ್ಲಿ ಮುಸ್ತಫಾ ಎಂಬುವರಿಗೆ ಸೇರಿದ ಎರಡು ಎತ್ತುಗಳು ಸಿಡಿಲಿಗೆ ಬಲಿಯಾಗಿವೆ. ಎತ್ತುಗಳ ಮೌಲ್ಯ 60 ಸಾವಿರ ರೂಪಾಯಿ ಎಂದು ಅಂದಾಜಿಸಲಾಗಿದೆ. <br /> <br /> ಹೊಲದಲ್ಲಿ ಇರುವ ಕೊಟ್ಟಿಗೆಯೊಂದರಲ್ಲಿ ಎತ್ತುಗಳನ್ನು ಕಟ್ಟಿ ಹಾಕಲಾಗಿತ್ತು. ಕೊಟ್ಟಿಗೆಗೆ ಸಿಡಿಲು ಅಪ್ಪಳಿಸಿದ್ದರಿಂದ ಎತ್ತುಗಳು ಸಾವನ್ನಪ್ಪಿವೆ. ಈ ಸಂಬಂಧ ಬಗದಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. <br /> <br /> ಭಾಲ್ಕಿ ತಾಲ್ಲೂಕಿನ ಧನ್ನೂರಾ ಗ್ರಾಮದಲ್ಲಿ ಗುರುನಾಥ ಮಲ್ಲಪ್ಪ ಮೇತ್ರೆ ಎಂಬುವರಿಗೆ ಸೇರಿದ ಎಮ್ಮೆ ಸಿಡಿಲಿಗೆ ಬಲಿಯಾಗಿದೆ. ಎಮ್ಮೆಯ ಮೌಲ್ಯ 35 ಸಾವಿರ ರೂಪಾಯಿ ಎಂದು ಅಂದಾಜಿಸಲಾಗಿದೆ. ಈ ಕುರಿತು ಧನ್ನೂರಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.<br /> <br /> <strong>ಸಿಡಿಲಿಗೆ ಎತ್ತು ಬಲಿ</strong><br /> ಔರಾದ್: ಸಮೀಪದ ಮುಂಗನಾಳದಲ್ಲಿ ಸಿಡಿಲು ಬಡಿದು ಎತ್ತು ಮೃತಪಟ್ಟ ಘಟನೆ ಬುಧವಾರ ಸಂಜೆ ನಡೆದಿದೆ. <br /> ಸೋಪಾನ ಮಚಕುರಿ ಎಂಬ ರೈತನಿಗೆ ಸೇರಿದ ಸುಮಾರು 40 ಸಾವಿರ ಮೌಲ್ಯದ ಎತ್ತು ಮೃತಪಟ್ಟಿದೆ. ಸಂಜೆ ವೇಳೆ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>