<p><strong>ಬೀದರ್: </strong>ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆಯ ಕಟ್ಟುನಿಟ್ಟಿನ ಜಾರಿಗಾಗಿ ಪೊಲೀಸ್ ಇಲಾಖೆ ಜಿಲ್ಲೆಯಲ್ಲಿ 16 ಚೆಕ್ಪೋಸ್ಟ್ಗಳನ್ನು ಗುರುತಿಸಿದ್ದು, ಗಸ್ತು ಚುರುಕುಗೊಳಿಸಲು ನಿರ್ಧರಿಸಿದೆ.<br /> <br /> ಆಯ್ದ ಕಡೆ ಈಗಾಗಲೇ ಗಸ್ತು ಚುರುಕುಗೊಳಿಸಲಾಗುತ್ತಿದೆ. ಜಿಲ್ಲೆಯಲ್ಲಿ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಮತಗಟ್ಟೆಗಳ ಸಂಖ್ಯೆ ಆಧರಿಸಿ ಸುಗಮ ಚುನಾವಣೆಗಾಗಿ ಬಂದೊಬಸ್ತ್ ನಿಯೋಜಿಸಲು ನಿರ್ಧರಿಸಲಾಗಿದೆ.<br /> <br /> ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ಕುಮಾರ್ ರೆಡ್ಡಿ, ‘ಜಿಲ್ಲೆಯಲ್ಲಿ ಈಗಾಗಲೇ ಎರಡು ಮೀಸಲು ಪಡೆ ಪೊಲೀಸ್ ತುಕಡಿ ಇದೆ. ಇದರ ಜೊತೆಗೆ ಹೆಚ್ಚುವರಿ ಮೀಸಲು ಪಡೆಯನ್ನು ನಿರೀಕ್ಷಿಸಲಾಗಿದೆ’ ಎಂದರು.<br /> <br /> ಜಿಲ್ಲಾ ಪೊಲೀಸ್ ಪಡೆ, ಕೆಎಸ್ಆರ್ಪಿ, ಡಿಎಆರ್, ಗೃಹರಕ್ಷಕ ದಳದ 350 ಮಂದಿ ಸೇರಿದಂತೆ ಸುಮಾರು 1,600 ಪೊಲೀಸ್ ಸಿಬ್ಬಂದಿ ಚುನಾವಣಾ ಸಂದರ್ಭದಲ್ಲಿ ಸೇವೆಗೆ ಲಭ್ಯರಿರುತ್ತಾರೆ ಎಂದು ತಿಳಿಸಿದರು.<br /> <br /> <strong>ಪಿಸ್ತೂಲ್ ಹಾಜರಿಗೆ ಸೂಚನೆ</strong>: ಜಿಲ್ಲೆಯಲ್ಲಿ ಲೈಸೆನ್ಸ್ ಪಡೆದು ಬಳಸುತ್ತಿರುವ ಪಿಸ್ತೂಲ್ಗಳನ್ನು ಸಂಬಂಧಿಸಿದ ಪೊಲೀಸ್ ಠಾಣೆಗಳಲ್ಲಿ ಹಾಜರು ಪಡಿಸಬೇಕು ಎಂದು ಈಗಾಗಲೇ ಸೂಚಿಸಲಾಗಿದೆ. ಬಹುತೇಕ ಬುಧವಾರದ ಒಳಗೆ ಈ ಪ್ರಕ್ರಿಯೆ ಪೂರ್ಣಗೊಳ್ಳಬಹುದು ಎಂದರು.<br /> <br /> <strong>900 ಮಂದಿ ಗುರುತು</strong>: ಜಿಲ್ಲೆಯಾದ್ಯಂತ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಸಮಾಜದಲ್ಲಿ ಅಶಾಂತಿ ಮೂಡಿಸಬಹುದು ಎಂದು ಸುಮಾರು 900 ಮಂದಿಯನ್ನು ಗುರುತಿಸಲಾಗಿದೆ. ಇವರಿಂದ ಯಾವುದೇ ಅಹಿತಕರ ಚಟುವಟಿಕೆಗಳಲ್ಲಿ ಭಾಗವಹಿಸುವುದಿಲ್ಲ ಎಂದು ಮುಚ್ಚಳಿಕೆ ಪತ್ರ, ಖಾತರಿ ಪಡೆಯಲಾಗುತ್ತಿದೆ. ಚುನಾವಣೆ ಅವಧಿಯಲ್ಲೂ ಈ ಎಲ್ಲರ ಮೇಲೂ ಇಲಾಖೆ ನಿಗಾ ವಹಿಸಲಿದೆ ಎಂದು ಹೇಳಿದರು.<br /> <br /> <strong>ಮತದಾನ ಮಹತ್ವ– ಜಾಗೃತಿ</strong>: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಡಿಮೆ ಪ್ರಮಾಣದಲ್ಲಿ ಮತದಾನ ಆಗಿರುವ ಮತಗಟ್ಟೆಗಳ ವ್ಯಾಪ್ತಿಯಲ್ಲಿ ಮತದಾನ ಪ್ರಮಾಣವನ್ನು ಶೇ 10 ರಿಂದ 15ರಷ್ಟು ಹೆಚ್ಚಿಸುವ ಗುರಿಯೊಂದಿಗೆ ಮತದಾನದ ಮಹತ್ವ ಕುರಿತ ಜಾಗೃತಿ ಕಾರ್ಯಕ್ರಮಗಳಿಗೆ ಜಿಲ್ಲಾಡಳಿತ ಗುರುವಾರ ಚಾಲನೆ ನೀಡಲಿದೆ.<br /> <br /> ಸ್ವೀಪ್ ಹೆಸರಿನಲ್ಲಿ ನಡೆಯುವ ಜಾಗೃತಿ ಕಾರ್ಯಕ್ರಮಕ್ಕೆ ಮಾ. 13ರಂದು ಮಧ್ಯಾಹ್ನ 1 ಗಂಟೆಗೆ ಬಿ.ವಿ.ಭೂಮರೆಡ್ಡಿ ಮಹಾವಿದ್ಯಾಲಯದಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಸಿಇಒ ಚಾಲನೆ ನೀಡುವರು.<br /> <br /> ಮತದಾನದ ಪ್ರಮಾಣ ಹೆಚ್ಚಿಸುವುದು, ಅದರಲ್ಲೂ ಪ್ರಮುಖವಾಗಿ ಕಳೆದ ಚುನಾವಣೆಯಲ್ಲಿ ಕಡಿಮೆ ಮತದಾನ ಆಗಿರುವ ಕೇಂದ್ರಗಳಲ್ಲಿ ಪ್ರಮಾಣ ಹೆಚ್ಚಿಸುವುದು, ಮಹಿಳೆಯರ ಮತದಾನದ ಪ್ರಮಾಣ ಹೆಚ್ಚಿಸುವುದು, ಮತದಾನದಿಂದ ಹೊರಗುಳಿದ ಸಮುದಾಯಗಳಿಗೆ ಮತದಾನದಲ್ಲಿ ಪಾಲ್ಗೊಳ್ಳುವಂತೆ ಉತ್ತೇಜನ ನೀಡುವುದು ಇದರ ಉದ್ದೇಶ ಎಂದು ಹೇಳಿಕೆ ತಿಳಿಸಿದೆ.<br /> <br /> ಮಹಿಳೆ, ಯುವಕರು, ದುರ್ಬಲ ವರ್ಗ, ಅಂಗವಿಕಲರು, ಅಸಂಘಟಿತ ವಲಯದ ಕಾರ್ಮಿಕರು, ಕೊಳೆಗೇರಿ ಪ್ರದೇಶದಲ್ಲಿ ಇರುವವರು ಬಗ್ಗೆ ಈ ಕಾರ್ಯಕ್ರಮದಡಿ ಹೆಚ್ಚಿನ ಒತ್ತು ನೀಡಲಾಗುತ್ತದೆ.<br /> <br /> ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವುದು, ವಿವಿಧ ಸ್ಪರ್ಧೆ ಹಾಗೂ ಜಾಥಾ ಅಯೋಜಿಸುವುದು; ವಿವಿಧ ಜಾನಪದ, ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಅರಿವು ಮೂಡಿಸುವುದು, ಕರಪತ್ರ, ಭಿತ್ತಿಪತ್ರ, ಕರಪತ್ರ ಹಾಕುವುದು ಮತ್ತಿತರ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆಯ ಕಟ್ಟುನಿಟ್ಟಿನ ಜಾರಿಗಾಗಿ ಪೊಲೀಸ್ ಇಲಾಖೆ ಜಿಲ್ಲೆಯಲ್ಲಿ 16 ಚೆಕ್ಪೋಸ್ಟ್ಗಳನ್ನು ಗುರುತಿಸಿದ್ದು, ಗಸ್ತು ಚುರುಕುಗೊಳಿಸಲು ನಿರ್ಧರಿಸಿದೆ.<br /> <br /> ಆಯ್ದ ಕಡೆ ಈಗಾಗಲೇ ಗಸ್ತು ಚುರುಕುಗೊಳಿಸಲಾಗುತ್ತಿದೆ. ಜಿಲ್ಲೆಯಲ್ಲಿ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಮತಗಟ್ಟೆಗಳ ಸಂಖ್ಯೆ ಆಧರಿಸಿ ಸುಗಮ ಚುನಾವಣೆಗಾಗಿ ಬಂದೊಬಸ್ತ್ ನಿಯೋಜಿಸಲು ನಿರ್ಧರಿಸಲಾಗಿದೆ.<br /> <br /> ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ಕುಮಾರ್ ರೆಡ್ಡಿ, ‘ಜಿಲ್ಲೆಯಲ್ಲಿ ಈಗಾಗಲೇ ಎರಡು ಮೀಸಲು ಪಡೆ ಪೊಲೀಸ್ ತುಕಡಿ ಇದೆ. ಇದರ ಜೊತೆಗೆ ಹೆಚ್ಚುವರಿ ಮೀಸಲು ಪಡೆಯನ್ನು ನಿರೀಕ್ಷಿಸಲಾಗಿದೆ’ ಎಂದರು.<br /> <br /> ಜಿಲ್ಲಾ ಪೊಲೀಸ್ ಪಡೆ, ಕೆಎಸ್ಆರ್ಪಿ, ಡಿಎಆರ್, ಗೃಹರಕ್ಷಕ ದಳದ 350 ಮಂದಿ ಸೇರಿದಂತೆ ಸುಮಾರು 1,600 ಪೊಲೀಸ್ ಸಿಬ್ಬಂದಿ ಚುನಾವಣಾ ಸಂದರ್ಭದಲ್ಲಿ ಸೇವೆಗೆ ಲಭ್ಯರಿರುತ್ತಾರೆ ಎಂದು ತಿಳಿಸಿದರು.<br /> <br /> <strong>ಪಿಸ್ತೂಲ್ ಹಾಜರಿಗೆ ಸೂಚನೆ</strong>: ಜಿಲ್ಲೆಯಲ್ಲಿ ಲೈಸೆನ್ಸ್ ಪಡೆದು ಬಳಸುತ್ತಿರುವ ಪಿಸ್ತೂಲ್ಗಳನ್ನು ಸಂಬಂಧಿಸಿದ ಪೊಲೀಸ್ ಠಾಣೆಗಳಲ್ಲಿ ಹಾಜರು ಪಡಿಸಬೇಕು ಎಂದು ಈಗಾಗಲೇ ಸೂಚಿಸಲಾಗಿದೆ. ಬಹುತೇಕ ಬುಧವಾರದ ಒಳಗೆ ಈ ಪ್ರಕ್ರಿಯೆ ಪೂರ್ಣಗೊಳ್ಳಬಹುದು ಎಂದರು.<br /> <br /> <strong>900 ಮಂದಿ ಗುರುತು</strong>: ಜಿಲ್ಲೆಯಾದ್ಯಂತ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಸಮಾಜದಲ್ಲಿ ಅಶಾಂತಿ ಮೂಡಿಸಬಹುದು ಎಂದು ಸುಮಾರು 900 ಮಂದಿಯನ್ನು ಗುರುತಿಸಲಾಗಿದೆ. ಇವರಿಂದ ಯಾವುದೇ ಅಹಿತಕರ ಚಟುವಟಿಕೆಗಳಲ್ಲಿ ಭಾಗವಹಿಸುವುದಿಲ್ಲ ಎಂದು ಮುಚ್ಚಳಿಕೆ ಪತ್ರ, ಖಾತರಿ ಪಡೆಯಲಾಗುತ್ತಿದೆ. ಚುನಾವಣೆ ಅವಧಿಯಲ್ಲೂ ಈ ಎಲ್ಲರ ಮೇಲೂ ಇಲಾಖೆ ನಿಗಾ ವಹಿಸಲಿದೆ ಎಂದು ಹೇಳಿದರು.<br /> <br /> <strong>ಮತದಾನ ಮಹತ್ವ– ಜಾಗೃತಿ</strong>: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಡಿಮೆ ಪ್ರಮಾಣದಲ್ಲಿ ಮತದಾನ ಆಗಿರುವ ಮತಗಟ್ಟೆಗಳ ವ್ಯಾಪ್ತಿಯಲ್ಲಿ ಮತದಾನ ಪ್ರಮಾಣವನ್ನು ಶೇ 10 ರಿಂದ 15ರಷ್ಟು ಹೆಚ್ಚಿಸುವ ಗುರಿಯೊಂದಿಗೆ ಮತದಾನದ ಮಹತ್ವ ಕುರಿತ ಜಾಗೃತಿ ಕಾರ್ಯಕ್ರಮಗಳಿಗೆ ಜಿಲ್ಲಾಡಳಿತ ಗುರುವಾರ ಚಾಲನೆ ನೀಡಲಿದೆ.<br /> <br /> ಸ್ವೀಪ್ ಹೆಸರಿನಲ್ಲಿ ನಡೆಯುವ ಜಾಗೃತಿ ಕಾರ್ಯಕ್ರಮಕ್ಕೆ ಮಾ. 13ರಂದು ಮಧ್ಯಾಹ್ನ 1 ಗಂಟೆಗೆ ಬಿ.ವಿ.ಭೂಮರೆಡ್ಡಿ ಮಹಾವಿದ್ಯಾಲಯದಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಸಿಇಒ ಚಾಲನೆ ನೀಡುವರು.<br /> <br /> ಮತದಾನದ ಪ್ರಮಾಣ ಹೆಚ್ಚಿಸುವುದು, ಅದರಲ್ಲೂ ಪ್ರಮುಖವಾಗಿ ಕಳೆದ ಚುನಾವಣೆಯಲ್ಲಿ ಕಡಿಮೆ ಮತದಾನ ಆಗಿರುವ ಕೇಂದ್ರಗಳಲ್ಲಿ ಪ್ರಮಾಣ ಹೆಚ್ಚಿಸುವುದು, ಮಹಿಳೆಯರ ಮತದಾನದ ಪ್ರಮಾಣ ಹೆಚ್ಚಿಸುವುದು, ಮತದಾನದಿಂದ ಹೊರಗುಳಿದ ಸಮುದಾಯಗಳಿಗೆ ಮತದಾನದಲ್ಲಿ ಪಾಲ್ಗೊಳ್ಳುವಂತೆ ಉತ್ತೇಜನ ನೀಡುವುದು ಇದರ ಉದ್ದೇಶ ಎಂದು ಹೇಳಿಕೆ ತಿಳಿಸಿದೆ.<br /> <br /> ಮಹಿಳೆ, ಯುವಕರು, ದುರ್ಬಲ ವರ್ಗ, ಅಂಗವಿಕಲರು, ಅಸಂಘಟಿತ ವಲಯದ ಕಾರ್ಮಿಕರು, ಕೊಳೆಗೇರಿ ಪ್ರದೇಶದಲ್ಲಿ ಇರುವವರು ಬಗ್ಗೆ ಈ ಕಾರ್ಯಕ್ರಮದಡಿ ಹೆಚ್ಚಿನ ಒತ್ತು ನೀಡಲಾಗುತ್ತದೆ.<br /> <br /> ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವುದು, ವಿವಿಧ ಸ್ಪರ್ಧೆ ಹಾಗೂ ಜಾಥಾ ಅಯೋಜಿಸುವುದು; ವಿವಿಧ ಜಾನಪದ, ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಅರಿವು ಮೂಡಿಸುವುದು, ಕರಪತ್ರ, ಭಿತ್ತಿಪತ್ರ, ಕರಪತ್ರ ಹಾಕುವುದು ಮತ್ತಿತರ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>