<p><strong>ಹುಮನಾಬಾದ್: </strong>ಪ್ರಯತ್ನಕ್ಕೆ ತಕ್ಕ ಫಲ ಸಿಗುತ್ತದೆ ಎಂದು ರಾಮಚಂದ್ರ ವೀರಪ್ಪ ಆರ್ಯ ಮಹಿಳಾ ಪದವಿ ಕಾಲೇಜು ಪ್ರಾಚಾರ್ಯ ಭೀಮರಾವ ಕುಲಕರ್ಣಿ ಹೇಳಿದರು.<br /> <br /> ನಗರದ ಯಲಾಲ್ ಶಿಕ್ಷಣ ದತ್ತೀಯ ಬಸವೇಶ್ವರ ಪ್ರಾಥಮಿಕ ಹಾಗೂ ಪ್ರೌಢಶಾಲೆ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.<br /> <br /> ಕಲಂ 371(ಜೆ) ಅಡಿಯಲ್ಲಿ ಈ ಭಾಗದ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗ ಕ್ಷೇತ್ರಗಲ್ಲಿ ವಿಫುಲ ಅವಕಾಶಗಳಿದ್ದು, ವಿದ್ಯಾರ್ಥಿಗಳು ಸತತ ಪರಿಶ್ರಮಪಟ್ಟು ಯಶಸ್ಸು ಸಾಧಿಸಬೇಕು ಎಂದರು.<br /> <br /> ಸರ್ವೋದಯ ಶಿಕ್ಷಣ ಸಂಸ್ಥೆ ಅಧ್ಯಕ್ಷ ಪ್ರಕಾಶ ಬತಲಿ ಮಾತನಾಡಿ, ವಿದ್ಯೆ ಯಾರೊಬ್ಬರೂ ಕದಿಯಲಾಗದು ಸಂಪತ್ತು ಅಂಥ ಸಂಪತ್ತು ಗಳಿಸಲು ವಿದ್ಯಾರ್ಥಿಗಳು ಯತ್ನಿಸಬೇಕು ಎಂದರು.<br /> <br /> ಸಂಸ್ಥೆಯ ಅಧ್ಯಕ್ಷ ನಾಗಶೆಟ್ಟಿ ಯಲಾಲ್ ಅಧ್ಯಕ್ಷತೆ ವಹಿಸಿದ್ದರು. ಆಡಳಿತಾಧಿಕಾರಿ ಅನಿಲಕುಮಾರ ಲದ್ದಿ, ಮೀನಾಕ್ಷಿ ಯಲಾಲ್, ರಮೇಶರಾವ ಜಾಧವ್, ಸಂಗೀತಾ, ಬಿ.ಸಂಪ್ರೀತಿ, ಆಶಾದೇವಿ , ಅನ್ನಪೂರ್ಣ, ಸೋಮನಾಥ ರೊಟ್ಟೆ, ಶಿಲ್ಪಾ, ಸುರೇಶ ಬಪ್ಪಣ್ಣಿ, ಸುಷ್ಮಾ, ಮುಖ್ಯಶಿಕ್ಷಕ ತುಕಾರಾಮ ಬಾಯಿನೋರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಮನಾಬಾದ್: </strong>ಪ್ರಯತ್ನಕ್ಕೆ ತಕ್ಕ ಫಲ ಸಿಗುತ್ತದೆ ಎಂದು ರಾಮಚಂದ್ರ ವೀರಪ್ಪ ಆರ್ಯ ಮಹಿಳಾ ಪದವಿ ಕಾಲೇಜು ಪ್ರಾಚಾರ್ಯ ಭೀಮರಾವ ಕುಲಕರ್ಣಿ ಹೇಳಿದರು.<br /> <br /> ನಗರದ ಯಲಾಲ್ ಶಿಕ್ಷಣ ದತ್ತೀಯ ಬಸವೇಶ್ವರ ಪ್ರಾಥಮಿಕ ಹಾಗೂ ಪ್ರೌಢಶಾಲೆ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.<br /> <br /> ಕಲಂ 371(ಜೆ) ಅಡಿಯಲ್ಲಿ ಈ ಭಾಗದ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗ ಕ್ಷೇತ್ರಗಲ್ಲಿ ವಿಫುಲ ಅವಕಾಶಗಳಿದ್ದು, ವಿದ್ಯಾರ್ಥಿಗಳು ಸತತ ಪರಿಶ್ರಮಪಟ್ಟು ಯಶಸ್ಸು ಸಾಧಿಸಬೇಕು ಎಂದರು.<br /> <br /> ಸರ್ವೋದಯ ಶಿಕ್ಷಣ ಸಂಸ್ಥೆ ಅಧ್ಯಕ್ಷ ಪ್ರಕಾಶ ಬತಲಿ ಮಾತನಾಡಿ, ವಿದ್ಯೆ ಯಾರೊಬ್ಬರೂ ಕದಿಯಲಾಗದು ಸಂಪತ್ತು ಅಂಥ ಸಂಪತ್ತು ಗಳಿಸಲು ವಿದ್ಯಾರ್ಥಿಗಳು ಯತ್ನಿಸಬೇಕು ಎಂದರು.<br /> <br /> ಸಂಸ್ಥೆಯ ಅಧ್ಯಕ್ಷ ನಾಗಶೆಟ್ಟಿ ಯಲಾಲ್ ಅಧ್ಯಕ್ಷತೆ ವಹಿಸಿದ್ದರು. ಆಡಳಿತಾಧಿಕಾರಿ ಅನಿಲಕುಮಾರ ಲದ್ದಿ, ಮೀನಾಕ್ಷಿ ಯಲಾಲ್, ರಮೇಶರಾವ ಜಾಧವ್, ಸಂಗೀತಾ, ಬಿ.ಸಂಪ್ರೀತಿ, ಆಶಾದೇವಿ , ಅನ್ನಪೂರ್ಣ, ಸೋಮನಾಥ ರೊಟ್ಟೆ, ಶಿಲ್ಪಾ, ಸುರೇಶ ಬಪ್ಪಣ್ಣಿ, ಸುಷ್ಮಾ, ಮುಖ್ಯಶಿಕ್ಷಕ ತುಕಾರಾಮ ಬಾಯಿನೋರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>