‘ಪ್ರತ್ಯುಕ್ಷ ಅವರು ಅತೀ ವೇಗವಾಗಿ ಬೈಕ್ ಚಲಾಯಿಸುತ್ತಿದ್ದರು. ದೇವನಹಳ್ಳಿ ಜಂಕ್ಷನ್ನಲ್ಲಿರುವ ಹಂಪ್ಸ್ ಗಮನಿಸಿರಲಿಲ್ಲ. ಅತೀ ವೇಗದಲ್ಲಿ ಹಂಪ್ಸ್ ದಾಟಿಸಲು ಹೋಗಿ ಬೈಕ್ ನಿಯಂತ್ರಣ ತಪ್ಪಿತ್ತು. ವಿಜಯಪುರದಿಂದ ದೊಡ್ಡಬಳ್ಳಾಪುರ ಕಡೆಗೆ ಹೊರಟಿದ್ದ ಕ್ವಾಲಿಸ್ ವಾಹನಕ್ಕೂ ಬೈಕ್ಗೂ ಪರಸ್ಪರ ಡಿಕ್ಕಿ ಆಗಿತ್ತು. ಬೈಕ್ನಲ್ಲಿದ್ದ ಇಬ್ಬರೂ ರಸ್ತೆಯಲ್ಲಿ ಬಿದ್ದಿದ್ದರು. ತೀವ್ರ ಗಾಯಗೊಂಡು ಪ್ರತ್ಯುಕ್ಷ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ನೇಹಿತ ರಾಜೀವ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದೂ ತಿಳಿಸಿವೆ.