ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ವಾಲಿಸ್‌ಗೆ ಬೈಕ್‌ ಡಿಕ್ಕಿ: ಸವಾರ ಸಾವು

Last Updated 21 ಆಗಸ್ಟ್ 2022, 19:37 IST
ಅಕ್ಷರ ಗಾತ್ರ

ಬೆಂಗಳೂರು: ಬಳ್ಳಾರಿ ರಸ್ತೆಯ ದೇವನಹಳ್ಳಿ ಜಂಕ್ಷನ್‌ನಲ್ಲಿ ಭಾನುವಾರ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಪ್ರತ್ಯುಕ್ಷ ಶರ್ಮಾ (25) ಮೃತಪಟ್ಟಿದ್ದಾರೆ.

‘ಖಾಸಗಿ ಕಂಪನಿ ಉದ್ಯೋಗಿ ಪ್ರತ್ಯುಕ್ಷ, ಸ್ನೇಹಿತ ರಾಜೀವ್ ಜೊತೆ ಬೆಂಗಳೂರಿನಿಂದ ಚಿಕ್ಕಬಳ್ಳಾಪುರಕ್ಕೆ ಎನ್‌ಫೀಲ್ಡ್‌ ಬೈಕ್‌ನಲ್ಲಿ ಹೊರಟಿದ್ದಾಗ ಈ ಅವಘಡ ಸಂಭವಿಸಿದೆ’ ಎಂದು ದೇವನಹಳ್ಳಿ ಸಂಚಾರ ಪೊಲೀಸ್ ಮೂಲಗಳು ಹೇಳಿವೆ.

‘ಪ್ರತ್ಯುಕ್ಷ ಅವರು ಅತೀ ವೇಗವಾಗಿ ಬೈಕ್ ಚಲಾಯಿಸುತ್ತಿದ್ದರು. ದೇವನಹಳ್ಳಿ ಜಂಕ್ಷನ್‌ನಲ್ಲಿರುವ ಹಂಪ್ಸ್‌ ಗಮನಿಸಿರಲಿಲ್ಲ. ಅತೀ ವೇಗದಲ್ಲಿ ಹಂಪ್ಸ್‌ ದಾಟಿಸಲು ಹೋಗಿ ಬೈಕ್‌ ನಿಯಂತ್ರಣ ತಪ್ಪಿತ್ತು. ವಿಜಯಪುರದಿಂದ ದೊಡ್ಡಬಳ್ಳಾಪುರ ಕಡೆಗೆ ಹೊರಟಿದ್ದ ಕ್ವಾಲಿಸ್‌ ವಾಹನಕ್ಕೂ ಬೈಕ್‌ಗೂ ಪರಸ್ಪರ ಡಿಕ್ಕಿ ಆಗಿತ್ತು. ಬೈಕ್‌ನಲ್ಲಿದ್ದ ಇಬ್ಬರೂ ರಸ್ತೆಯಲ್ಲಿ ಬಿದ್ದಿದ್ದರು. ತೀವ್ರ ಗಾಯಗೊಂಡು ಪ್ರತ್ಯುಕ್ಷ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ನೇಹಿತ ರಾಜೀವ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದೂ ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT