ವಿಜಯಪುರ: ಚಡಚಣ ಸಹೋದರರ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮಹಾದೇವ ಬೈರಗೊಂಡ ಜನ್ಮ ದಿನಾಚರಣೆಯಲ್ಲಿ, ಇದೇ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಪೊಲೀಸ್ ಅಧಿಕಾರಿಗಳಿಬ್ಬರು ಪಾಲ್ಗೊಂಡಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.
ಚಡಚಣ ಸಮೀಪದ ಕೆರೂರ ಗ್ರಾಮದಲ್ಲಿನ ಬೈರಗೊಂಡ ನಿವಾಸದಲ್ಲಿ ಈಚೆಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹಿಂದಿನ ಸಿಪಿಐ ಮಲ್ಲಿಕಾರ್ಜುನ ಅಸೋಡೆ ಹಾಗೂ ಪಿಎಸ್ಐ ಗೋಪಾಲ ಹಳ್ಳೂರ ಭಾಗವಹಿಸಿದ್ದರು. ಅಷ್ಟೇ ಅಲ್ಲ, ಮಹಾದೇವ ಬೈರಗೊಂಡನೊಂದಿಗೆ ಹಾರ ಹಾಕಿಕೊಂಡು ಸಿಹಿ ತಿನ್ನಿಸಿ, ಶುಭಾಶಯ ಕೋರಿದ್ದರು.
‘ಬೈರಗೊಂಡ ಜನ್ಮ ದಿನಾಚರಣೆಯಲ್ಲಿ ಪೊಲೀಸ್ ಅಧಿಕಾರಿಗಳು ಭಾಗವಹಿಸಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆಮೇಲಧಿಕಾರಿಗಳಿಗೆ ವರದಿ ಸಲ್ಲಿಸಲಾಗುವುದು’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.