<p><strong>ಶಿವಮೊಗ್ಗ:</strong> ಬಿ.ಎಸ್.ಯಡಿಯೂರಪ್ಪ ವಿರುದ್ಧ ನಕಲಿ ಡೈರಿ ಸೃಷ್ಟಿಸಿ, ಗಂಭೀರ ಆರೋಪ ಮಾಡಿರುವ ಎಐಸಿಸಿ ವಕ್ತಾರ ರಣದೀಪ್ ಸುರ್ಜವಾಲ ಅವರನ್ನು ತಕ್ಷಣ ಬಂಧಿಸಬೇಕು. ಯಾರೂ ಕೂಡ ಈ ಡೈರಿ ವಿಷಯ ಪ್ರಸ್ತಾವ ಮಾಡದಂತೆ ನಿರ್ಬಂಧ ಹೇರಬೇಕು ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ರುದ್ರೇಗೌಡ ಒತ್ತಾಯಿಸಿದರು.</p>.<p>ಆದಾಯ ಇಲಾಖೆ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಗಂಭೀರ ಭ್ರಷ್ಟಾಚಾರ ಆರೋಪ ಮಾಡಿದೆ. ಅವರ ಮನೆಯ ಮೇಲೆ ದಾಳಿ ನಡೆಸಿ ಕೋಟ್ಯಂತರ ರೂಪಾಯಿ ವಶಪಡಿಸಿಕೊಂಡಿದೆ. ₹ 75 ಕೋಟಿಗೂ ಅಧಿಕ ಮೌಲ್ಯದ ಆಸ್ತಿ ಪತ್ತೆ ಮಾಡಲಾಗಿದೆ. ಇಂತಹ ಆರೋಪ ಹೊತ್ತ ಶಿವಕುಮಾರ್ ಅವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.</p>.<p>ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರು ಈ ಬಾರಿ 2.5 ಲಕ್ಷ ಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ. ಚುನಾವಣೆಗೆ ಬಿಜೆಪಿ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದೆ. ಶಕ್ತಿಕೇಂದ್ರಗಳ ಮೂಲಕ ಬೂತ್ಮಟ್ಟದಿಂದ ಪ್ರಚಾರ ಕಾರ್ಯ ಆರಂಭಿಸಲಾಗಿದೆ. ಜನವರಿಯಿಂದಲೇ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಾಗಿದೆ. ಶಿವಮೊಗ್ಗ ನಗರದಲ್ಲೇ 2 ಸಾವಿರ ಬಿಜೆಪಿ ಕಾರ್ಯಕರ್ತರ ಮನೆಗಳ ಮೇಲೆ ಪಕ್ಷದ ಬಾವುಟ ಹಾರಾಡುತ್ತಿವೆ. ಕೇಂದ್ರದ ಯೋಜನೆಗಳು ಗೆಲುವಿಗೆ ಸಹಕಾರಿಯಾಗಿವೆ ಎಂದರು.</p>.<p><strong>ಕೇಸು ದಾಖಲು</strong></p>.<p>ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಮಾತನಾಡಿ, ಯಾವುದೇ ಆಧಾರ ಇಲ್ಲದೇ ಬಿ.ಎಸ್.ಯಡಿಯೂರಪ್ಪ ವಿರುದ್ಧ ಆರೋಪ ಮಾಡಿರುವ ರಣದೀಪ್ ವಿರುದ್ಧ ಶಿವಮೊಗ್ಗ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಲಾಗುವುದು ಎಂದು ಮಾಹಿತಿ ನೀಡಿದರು.</p>.<p>ಕಾಂಗ್ರೆಸ್ ನಾಯಕರು ಮಾಡಿರುವ ಆರೋಪದಲ್ಲಿ ಯಾವ ಹುರುಳೂ ಇಲ್ಲ. ಯಾವುದೋ ಜೆರಾಕ್ಸ್ ಹಾಳೆ ಆಧಾರದ ಮೇಲೆ ಆರೋಪ ಮಾಡಲಾಗಿದೆ. ಇದು ನ್ಯಾಯಾಂಗ ವ್ಯವಸ್ಥೆ ಮೇಲೂ ಕಳಂಕ ತಂದಿದೆ ಎಂದು ಹರಿಹಾಯ್ದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಕೆ.ಜಿ.ಕುಮಾರಸ್ವಾಮಿ, ಮುಖಂಡರಾದ ಡಿ.ಎಸ್.ಅರುಣ್, ಎನ್.ಜೆ.ರಾಜಶೇಖರ್, ಹಿರಣ್ಣಯ್ಯ, ಮಧುಸೂದನ್, ರತ್ನಾಕರಶೆಣೈ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಬಿ.ಎಸ್.ಯಡಿಯೂರಪ್ಪ ವಿರುದ್ಧ ನಕಲಿ ಡೈರಿ ಸೃಷ್ಟಿಸಿ, ಗಂಭೀರ ಆರೋಪ ಮಾಡಿರುವ ಎಐಸಿಸಿ ವಕ್ತಾರ ರಣದೀಪ್ ಸುರ್ಜವಾಲ ಅವರನ್ನು ತಕ್ಷಣ ಬಂಧಿಸಬೇಕು. ಯಾರೂ ಕೂಡ ಈ ಡೈರಿ ವಿಷಯ ಪ್ರಸ್ತಾವ ಮಾಡದಂತೆ ನಿರ್ಬಂಧ ಹೇರಬೇಕು ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ರುದ್ರೇಗೌಡ ಒತ್ತಾಯಿಸಿದರು.</p>.<p>ಆದಾಯ ಇಲಾಖೆ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಗಂಭೀರ ಭ್ರಷ್ಟಾಚಾರ ಆರೋಪ ಮಾಡಿದೆ. ಅವರ ಮನೆಯ ಮೇಲೆ ದಾಳಿ ನಡೆಸಿ ಕೋಟ್ಯಂತರ ರೂಪಾಯಿ ವಶಪಡಿಸಿಕೊಂಡಿದೆ. ₹ 75 ಕೋಟಿಗೂ ಅಧಿಕ ಮೌಲ್ಯದ ಆಸ್ತಿ ಪತ್ತೆ ಮಾಡಲಾಗಿದೆ. ಇಂತಹ ಆರೋಪ ಹೊತ್ತ ಶಿವಕುಮಾರ್ ಅವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.</p>.<p>ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರು ಈ ಬಾರಿ 2.5 ಲಕ್ಷ ಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ. ಚುನಾವಣೆಗೆ ಬಿಜೆಪಿ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದೆ. ಶಕ್ತಿಕೇಂದ್ರಗಳ ಮೂಲಕ ಬೂತ್ಮಟ್ಟದಿಂದ ಪ್ರಚಾರ ಕಾರ್ಯ ಆರಂಭಿಸಲಾಗಿದೆ. ಜನವರಿಯಿಂದಲೇ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಾಗಿದೆ. ಶಿವಮೊಗ್ಗ ನಗರದಲ್ಲೇ 2 ಸಾವಿರ ಬಿಜೆಪಿ ಕಾರ್ಯಕರ್ತರ ಮನೆಗಳ ಮೇಲೆ ಪಕ್ಷದ ಬಾವುಟ ಹಾರಾಡುತ್ತಿವೆ. ಕೇಂದ್ರದ ಯೋಜನೆಗಳು ಗೆಲುವಿಗೆ ಸಹಕಾರಿಯಾಗಿವೆ ಎಂದರು.</p>.<p><strong>ಕೇಸು ದಾಖಲು</strong></p>.<p>ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಮಾತನಾಡಿ, ಯಾವುದೇ ಆಧಾರ ಇಲ್ಲದೇ ಬಿ.ಎಸ್.ಯಡಿಯೂರಪ್ಪ ವಿರುದ್ಧ ಆರೋಪ ಮಾಡಿರುವ ರಣದೀಪ್ ವಿರುದ್ಧ ಶಿವಮೊಗ್ಗ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಲಾಗುವುದು ಎಂದು ಮಾಹಿತಿ ನೀಡಿದರು.</p>.<p>ಕಾಂಗ್ರೆಸ್ ನಾಯಕರು ಮಾಡಿರುವ ಆರೋಪದಲ್ಲಿ ಯಾವ ಹುರುಳೂ ಇಲ್ಲ. ಯಾವುದೋ ಜೆರಾಕ್ಸ್ ಹಾಳೆ ಆಧಾರದ ಮೇಲೆ ಆರೋಪ ಮಾಡಲಾಗಿದೆ. ಇದು ನ್ಯಾಯಾಂಗ ವ್ಯವಸ್ಥೆ ಮೇಲೂ ಕಳಂಕ ತಂದಿದೆ ಎಂದು ಹರಿಹಾಯ್ದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಕೆ.ಜಿ.ಕುಮಾರಸ್ವಾಮಿ, ಮುಖಂಡರಾದ ಡಿ.ಎಸ್.ಅರುಣ್, ಎನ್.ಜೆ.ರಾಜಶೇಖರ್, ಹಿರಣ್ಣಯ್ಯ, ಮಧುಸೂದನ್, ರತ್ನಾಕರಶೆಣೈ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>