<p><strong>ವಿಜಯಪುರ</strong>: ನಗರದ ಮಹಿಳೆಯೊಬ್ಬರಿಗೆ ಬ್ಲ್ಯಾಕ್ಮೇಲ್ ಮಾಡಿ, ಹಣ ವಸೂಲಿ ಮಾಡಿದ ಆರೋಪದ ಮೇಲೆ ಮೂರು ಜನ ಪತ್ರಕರ್ತರನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.</p>.<p>ಇಂಡಿ ತಾಲ್ಲೂಕು ಹೊರ್ತಿ ಗ್ರಾಮದ ಪ್ರಕಾಶ ಕೋಳಿ (ಗುಲಿಸ್ಥಾನ ಟಿವಿ), ನಗರದ ಬಾಗಾಯತ್ ಗಲ್ಲಿಯ ಝಾಕೀರ್ಹುಸೇನ್ ಅಮೀನಗಡ (ಗುಲಿಸ್ಥಾನ ಟಿವಿ ಕ್ಯಾಮೆರಾಮನ್), ಸಿಂದಗಿ ತಾಲ್ಲೂಕು ದೇವಣಗಾಂವ ಗ್ರಾಮದ ದಶರಥ ಸೊನ್ನ (ಝೆಡ್ ಟಿವಿ) ಬಂಧಿತರು. ಇನ್ನೊಬ್ಬ ಆರೋಪಿ ಪರಾರಿಯಾಗಿದ್ದಾನೆ.</p>.<p>ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ನಿಕ್ಕಂ, ‘ಮನೆಯೊಂದಕ್ಕೆ ನುಗ್ಗಿದ ಈ ನಾಲ್ಕು ಜನರು, ತಾವು ಪೊಲೀಸರು ಎಂದು ಹೇಳಿಕೊಂಡಿದ್ದಾರೆ. ನೀವು ವೇಶ್ಯಾವಾಟಿಕೆ ನಡೆಸುತ್ತಿದ್ದೀರಿ ಎಂದು ಬೆದರಿಸಿ, ವಿಡಿಯೊ ಮಾಡಿಕೊಂಡಿದ್ದಾರೆ. ಆ ಬಳಿಕ ₹1 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಈ ಎಲ್ಲ ಬೆಳವಣಿಗೆಗಳಿಂದ ಕಂಗಾಲಾದ ಮಹಿಳೆ, ಪರಿಚಯಸ್ಥರಿಂದ ಆರೋಪಿಯ ಬ್ಯಾಂಕ್ ಖಾತೆಗೆ ₹60 ಸಾವಿರ ನಗದು ವರ್ಗಾವಣೆ ಮಾಡಿಸಿದ್ದಾರೆ’ ಎಂದರು.<br /><br />‘ಇಷ್ಟಕ್ಕೆ ಸುಮ್ಮನಾಗದ ಆರೋಪಿಗಳು ಪದೇ ಪದೇ ಕರೆ ಮಾಡಿ, ಉಳಿಕೆ ₹40 ಸಾವಿರ ಕೊಡುವಂತೆ ಪೀಡಿಸುತ್ತಿದ್ದರು. ಇಲ್ಲವಾದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ಹರಿಬಿಡುವುದಾಗಿ ಬೆದರಿಕೆ ಒಡ್ಡಿದ್ದರು. ಇದರಿಂದ ನೊಂದ ಮಹಿಳೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ನಗರದ ಮಹಿಳೆಯೊಬ್ಬರಿಗೆ ಬ್ಲ್ಯಾಕ್ಮೇಲ್ ಮಾಡಿ, ಹಣ ವಸೂಲಿ ಮಾಡಿದ ಆರೋಪದ ಮೇಲೆ ಮೂರು ಜನ ಪತ್ರಕರ್ತರನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.</p>.<p>ಇಂಡಿ ತಾಲ್ಲೂಕು ಹೊರ್ತಿ ಗ್ರಾಮದ ಪ್ರಕಾಶ ಕೋಳಿ (ಗುಲಿಸ್ಥಾನ ಟಿವಿ), ನಗರದ ಬಾಗಾಯತ್ ಗಲ್ಲಿಯ ಝಾಕೀರ್ಹುಸೇನ್ ಅಮೀನಗಡ (ಗುಲಿಸ್ಥಾನ ಟಿವಿ ಕ್ಯಾಮೆರಾಮನ್), ಸಿಂದಗಿ ತಾಲ್ಲೂಕು ದೇವಣಗಾಂವ ಗ್ರಾಮದ ದಶರಥ ಸೊನ್ನ (ಝೆಡ್ ಟಿವಿ) ಬಂಧಿತರು. ಇನ್ನೊಬ್ಬ ಆರೋಪಿ ಪರಾರಿಯಾಗಿದ್ದಾನೆ.</p>.<p>ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ನಿಕ್ಕಂ, ‘ಮನೆಯೊಂದಕ್ಕೆ ನುಗ್ಗಿದ ಈ ನಾಲ್ಕು ಜನರು, ತಾವು ಪೊಲೀಸರು ಎಂದು ಹೇಳಿಕೊಂಡಿದ್ದಾರೆ. ನೀವು ವೇಶ್ಯಾವಾಟಿಕೆ ನಡೆಸುತ್ತಿದ್ದೀರಿ ಎಂದು ಬೆದರಿಸಿ, ವಿಡಿಯೊ ಮಾಡಿಕೊಂಡಿದ್ದಾರೆ. ಆ ಬಳಿಕ ₹1 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಈ ಎಲ್ಲ ಬೆಳವಣಿಗೆಗಳಿಂದ ಕಂಗಾಲಾದ ಮಹಿಳೆ, ಪರಿಚಯಸ್ಥರಿಂದ ಆರೋಪಿಯ ಬ್ಯಾಂಕ್ ಖಾತೆಗೆ ₹60 ಸಾವಿರ ನಗದು ವರ್ಗಾವಣೆ ಮಾಡಿಸಿದ್ದಾರೆ’ ಎಂದರು.<br /><br />‘ಇಷ್ಟಕ್ಕೆ ಸುಮ್ಮನಾಗದ ಆರೋಪಿಗಳು ಪದೇ ಪದೇ ಕರೆ ಮಾಡಿ, ಉಳಿಕೆ ₹40 ಸಾವಿರ ಕೊಡುವಂತೆ ಪೀಡಿಸುತ್ತಿದ್ದರು. ಇಲ್ಲವಾದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ಹರಿಬಿಡುವುದಾಗಿ ಬೆದರಿಕೆ ಒಡ್ಡಿದ್ದರು. ಇದರಿಂದ ನೊಂದ ಮಹಿಳೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>