‘₹10 ಸಾವಿರದಿಂದ ₹50 ಸಾವಿರ ಮುಂಗಡಕೊಟ್ಟು ತೆಲಂಗಾಣ ರಾಜ್ಯದ ವಿವಿಧ ಜಿಲ್ಲೆಗಳಿಂದ ಇವರನ್ನು ಕರೆತರಲಾಗಿತ್ತು. ತಿಂಗಳಿಗೆ ₹2 ಸಾವಿರ ಸಂಬಳ ಕೊಡಲಾಗುತ್ತಿತ್ತು. ಅಲ್ಲದೆ, ಇವರಿಗೆ ಸರಿಯಾಗಿ ಊಟ, ವಸತಿ ವ್ಯವಸ್ಥೆ ಕಲ್ಪಿಸದೆ, ಬೆಳಿಗ್ಗೆ 8 ರಿಂದ ಸಂಜೆ 7 ಗಂಟೆಯವರೆಗೆ ಕೆಲಸ ಮಾಡಿಸಿಕೊಳ್ಳುತ್ತಿದ್ದರು ಎಂಬುದು ವಿಚಾರಣೆ ವೇಳೆ ತಿಳಿದು ಬಂದಿದೆ’ ಎಂದು ಇಂಡಿ ಉಪ ವಿಭಾಗಾಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ ಅವರು ಜಿಲ್ಲಾಧಿಕಾರಿಗೆ ಸಲ್ಲಿಸಿರುವ ವರದಿಯಲ್ಲಿ ತಿಳಿಸಿದ್ದಾರೆ.