ಜೂನ್ 1ರಂದು ನೈರುತ್ಯ ಮುಂಗಾರು ಕೇರಳವನ್ನು ಪ್ರವೇಶಿಸುವ ಸಾಧ್ಯತೆಯಿದೆ. ಕೆಲವು ದಿನಗಳಿಂದ ಕೇರಳ, ತಮಿಳುನಾಡಿನಲ್ಲಿ ಸಾಕಷ್ಟು ಮಳೆಯಾಗಿದೆ. ಕೇರಳದ ತಿರುವನಂತಪುರ ನಗರದಲ್ಲಿ 10 ಸೆಂ. ಮೀ. ಮತ್ತು ಪಾಲಕ್ಕಾಡ್ ಜಿಲ್ಲೆಯ ತ್ರಿತ್ತಾಲ ಗ್ರಾಮದಲ್ಲಿ 7 ಸೆಂ. ಮೀ. ಮಳೆಯಾಗಿದೆ. ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ನಾಲ್ಕು ಸೆಂ.ಮೀ. ಮಳೆ ಸುರಿದಿದೆ. ಕೇರಳದಲ್ಲಿ ಈಗಾಗಲೇ ಮುಂಗಾರುಪೂರ್ವ ಮಳೆ ಸುರಿಯಲು ಆರಂಭಿಸಿದೆ.