<p><strong>ಯಾದಗಿರಿ</strong>: ‘ಸುರಪುರ ತಾಲ್ಲೂಕಿನಲ್ಲಿ ನರೇಗಾ ಯೋಜನೆಯ ಒಗ್ಗೂಡಿಸುವ ಕಾಮಗಾರಿಗಳಲ್ಲಿ ಅಧಿಕಾರಿಗಳು ಬೋಗಸ್ ಬಿಲ್ ಸೃಷ್ಟಿಸಿ ಸುಮಾರು ₹1.95 ಕೋಟಿ ದುರ್ಬಳಕೆ ಮಾಡಿರು ವುದು ಕಂಡುಬಂದಿದ್ದರೂ, ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮಕೈಗೊಂಡಿಲ್ಲ’ ಎಂದು ಬಿಜೆಪಿ ಎಸ್ಟಿ ಮೋರ್ಚಾ ಅಧ್ಯಕ್ಷ ರಾಜೂಗೌಡ ಆರೋಪಿಸಿದರು.</p>.<p>ನಗರದಲ್ಲಿ ಗುರುವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸುರಪುರ ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಅವ್ಯವಹಾರ ನಡೆಸಲಾಗಿದೆ. ಒಟ್ಟು ₹10 ಕೋಟಿಗೂ ಹೆಚ್ಚು ಅವ್ಯವಹಾರ ನಡೆಸಿರುವುದು ಕಂಡುಬಂದಿದೆ. ಆದರೆ, ತನಿಖೆ ವೇಳೆ ಕೇವಲ ₹1.95 ಕೋಟಿಯಷ್ಟೇ ಕಂಡುಬಂದಿದೆ. ಸಮಗ್ರ ತನಿಖೆ ನಡೆಸಿದರು ಭಾರೀ ಅವ್ಯವಹಾರ ಬೆಳಕಿಗೆ ಬರಲಿದೆ’ ಎಂದು ತಿಳಿಸಿದರು.</p>.<p>ಕ್ರಿಯಾಯೋಜನೆ ಇಲ್ಲದೆ ಒಟ್ಟು 180ಕ್ಕೂ ಹೆಚ್ಚು ಕಾಮಗಾರಿಗಳಿಗೆ ಬೋಗಸ್ ಬಿಲ್ ಸೃಷ್ಟಿಸಿದ್ದಾರೆ. ಈ ಕೃತ್ಯದಲ್ಲಿ ಅಧಿಕಾರಿಗಳು, ಸಿಬ್ಬಂದಿ ಕೈಜೋಡಿಸಿದ್ದಾರೆ. ದೂರಿನ ಮೇಲೆ ಪ್ರಾಮಾಣಿ ಕವಾಗಿ ತನಿಖೆ ನಡೆಸಿರುವ ಜಿಲ್ಲಾ ಪಂಚಾಯಿತಿ ಸಿಇಒ ಅವಿನಾಶ್ ಮೆನನ್ ರಾಜೇಂದ್ರನ್ ಅವರ ಮೇಲೆ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಶಾಸಕರು ಒತ್ತಡ ಹೇರುತ್ತಿದ್ದಾರೆ’ ಎಂದು ಆರೋಪಿಸಿದರು.</p>.<p>‘ವಾಸ್ತವಾಗಿ ಉದ್ಯೋಗ ಖಾತ್ರಿ ಯೋಜನೆಯ ಕೆಲವು ಗುತ್ತಿಗೆದಾರರು ಕಾಮಗಾರಿಗಳನ್ನು ಮಾಡಿದ್ದಾರೆ. ಆದರೆ, ಅವರಿಗೆ ಸಂದಾಯವಾಗಬೇಕಿದ್ದ ಹಣವನ್ನು ವಂಚಿಸಿ ಬೋಗಸ್ ಬಿಲ್ ಸೃಷ್ಟಿಸಿ ಅಧಿಕಾರಿಗಳು ಕಬಳಿಸಿದ್ದಾರೆ. ಈ ಭ್ರಷ್ಟಾಚಾದಲ್ಲಿ ಶಾಮೀಲಾಗಿರುವ ಗುತ್ತಿಗೆದಾರರು ತನಿಖೆಗೆ ಸಹಕರಿಸಿದ ಸ್ಥಳೀಯ ಯುವಕರಿಗೆ ಜೀವ ಬೆದರಿಕೆ ಹಾಕುತ್ತಿದ್ದಾರೆ’ ಎಂದು ದೂರಿದರು.</p>.<p>‘ಆರೋಪಿಗಳಿಗೆ ಜನ ಪ್ರತಿನಿಧಿಗಳ ಬೆಂಬಲ ಇರುವುದರಿಂದ ಪ್ರಕರಣವನ್ನು ಮುಚ್ಚಿ ಹಾಕುವ ಅನುಮಾನ ಇದೆ. ಕೂಡಲೇ ಆರೋಪಿಗಳನ್ನು ಬಂಧಿಸಿ ಸಮಗ್ರ ತನಿಖೆ ನಡೆಸಬೇಕು’ ಎಂದರು. ಬಿಜೆಪಿ ಜಿಲ್ಲಾ ಘಟಕ ಅಧ್ಯಕ್ಷ ಚಂದ್ರಶೇಖರಗೌಡ ಮಾಗನೂರು, ಭೀಮಣ್ಣ ಮೇಟಿ, ದೇವೇಂದ್ರನಾಥ ನಾದ ಪತ್ರಿಕಾಗೋಷ್ಠಿಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ</strong>: ‘ಸುರಪುರ ತಾಲ್ಲೂಕಿನಲ್ಲಿ ನರೇಗಾ ಯೋಜನೆಯ ಒಗ್ಗೂಡಿಸುವ ಕಾಮಗಾರಿಗಳಲ್ಲಿ ಅಧಿಕಾರಿಗಳು ಬೋಗಸ್ ಬಿಲ್ ಸೃಷ್ಟಿಸಿ ಸುಮಾರು ₹1.95 ಕೋಟಿ ದುರ್ಬಳಕೆ ಮಾಡಿರು ವುದು ಕಂಡುಬಂದಿದ್ದರೂ, ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮಕೈಗೊಂಡಿಲ್ಲ’ ಎಂದು ಬಿಜೆಪಿ ಎಸ್ಟಿ ಮೋರ್ಚಾ ಅಧ್ಯಕ್ಷ ರಾಜೂಗೌಡ ಆರೋಪಿಸಿದರು.</p>.<p>ನಗರದಲ್ಲಿ ಗುರುವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸುರಪುರ ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಅವ್ಯವಹಾರ ನಡೆಸಲಾಗಿದೆ. ಒಟ್ಟು ₹10 ಕೋಟಿಗೂ ಹೆಚ್ಚು ಅವ್ಯವಹಾರ ನಡೆಸಿರುವುದು ಕಂಡುಬಂದಿದೆ. ಆದರೆ, ತನಿಖೆ ವೇಳೆ ಕೇವಲ ₹1.95 ಕೋಟಿಯಷ್ಟೇ ಕಂಡುಬಂದಿದೆ. ಸಮಗ್ರ ತನಿಖೆ ನಡೆಸಿದರು ಭಾರೀ ಅವ್ಯವಹಾರ ಬೆಳಕಿಗೆ ಬರಲಿದೆ’ ಎಂದು ತಿಳಿಸಿದರು.</p>.<p>ಕ್ರಿಯಾಯೋಜನೆ ಇಲ್ಲದೆ ಒಟ್ಟು 180ಕ್ಕೂ ಹೆಚ್ಚು ಕಾಮಗಾರಿಗಳಿಗೆ ಬೋಗಸ್ ಬಿಲ್ ಸೃಷ್ಟಿಸಿದ್ದಾರೆ. ಈ ಕೃತ್ಯದಲ್ಲಿ ಅಧಿಕಾರಿಗಳು, ಸಿಬ್ಬಂದಿ ಕೈಜೋಡಿಸಿದ್ದಾರೆ. ದೂರಿನ ಮೇಲೆ ಪ್ರಾಮಾಣಿ ಕವಾಗಿ ತನಿಖೆ ನಡೆಸಿರುವ ಜಿಲ್ಲಾ ಪಂಚಾಯಿತಿ ಸಿಇಒ ಅವಿನಾಶ್ ಮೆನನ್ ರಾಜೇಂದ್ರನ್ ಅವರ ಮೇಲೆ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಶಾಸಕರು ಒತ್ತಡ ಹೇರುತ್ತಿದ್ದಾರೆ’ ಎಂದು ಆರೋಪಿಸಿದರು.</p>.<p>‘ವಾಸ್ತವಾಗಿ ಉದ್ಯೋಗ ಖಾತ್ರಿ ಯೋಜನೆಯ ಕೆಲವು ಗುತ್ತಿಗೆದಾರರು ಕಾಮಗಾರಿಗಳನ್ನು ಮಾಡಿದ್ದಾರೆ. ಆದರೆ, ಅವರಿಗೆ ಸಂದಾಯವಾಗಬೇಕಿದ್ದ ಹಣವನ್ನು ವಂಚಿಸಿ ಬೋಗಸ್ ಬಿಲ್ ಸೃಷ್ಟಿಸಿ ಅಧಿಕಾರಿಗಳು ಕಬಳಿಸಿದ್ದಾರೆ. ಈ ಭ್ರಷ್ಟಾಚಾದಲ್ಲಿ ಶಾಮೀಲಾಗಿರುವ ಗುತ್ತಿಗೆದಾರರು ತನಿಖೆಗೆ ಸಹಕರಿಸಿದ ಸ್ಥಳೀಯ ಯುವಕರಿಗೆ ಜೀವ ಬೆದರಿಕೆ ಹಾಕುತ್ತಿದ್ದಾರೆ’ ಎಂದು ದೂರಿದರು.</p>.<p>‘ಆರೋಪಿಗಳಿಗೆ ಜನ ಪ್ರತಿನಿಧಿಗಳ ಬೆಂಬಲ ಇರುವುದರಿಂದ ಪ್ರಕರಣವನ್ನು ಮುಚ್ಚಿ ಹಾಕುವ ಅನುಮಾನ ಇದೆ. ಕೂಡಲೇ ಆರೋಪಿಗಳನ್ನು ಬಂಧಿಸಿ ಸಮಗ್ರ ತನಿಖೆ ನಡೆಸಬೇಕು’ ಎಂದರು. ಬಿಜೆಪಿ ಜಿಲ್ಲಾ ಘಟಕ ಅಧ್ಯಕ್ಷ ಚಂದ್ರಶೇಖರಗೌಡ ಮಾಗನೂರು, ಭೀಮಣ್ಣ ಮೇಟಿ, ದೇವೇಂದ್ರನಾಥ ನಾದ ಪತ್ರಿಕಾಗೋಷ್ಠಿಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>