ರೈತರ ಸಾಲ ಮನ್ನಾ ವಿಷಯ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ರಾಜ್ಯದ 150 ತಾಲ್ಲೂಕುಗಳು ಬರಪೀಡಿತವಾಗಿವೆ. ಅಧಿಕಾರಿಗಳು, ಸರ್ಕಾರ ಜನರ ಸಂಕಷ್ಟ ಬಗೆಹರಿಸಲು ಯಾವುದೇ ಕ್ರಮಕೈಗೊಂಡಿಲ್ಲ. ಅಧಿವೇಶನದಲ್ಲಿ ಬಿಜೆಪಿ ಪ್ರಶ್ನೆ ಮಾಡಿದ ಬಳಿಕ ಬರ ಪೀಡಿತ ತಾಲ್ಲೂಕುಗಳಿಗೆ ತಲಾ ₹50 ಲಕ್ಷ ಬಿಡುಗಡೆ ಮಾಡಲಾಗಿದೆ ಎಂದರು.