ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುಟ್ಟರಂಗಶೆಟ್ಟಿ ರಾಜೀನಾಮೆಗೆ ಯಡಿಯೂರಪ್ಪ ಆಗ್ರಹ

Last Updated 5 ಜನವರಿ 2019, 13:05 IST
ಅಕ್ಷರ ಗಾತ್ರ

ಶಿವಮೊಗ್ಗ: ವಿಧಾನಸೌಧದಲ್ಲಿ ನಡೆದ ಹಣದ ವ್ಯವಹಾರದ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ಪುಟ್ಟರಂಗಶೆಟ್ಟಿ ರಾಜೀನಾಮೆ ನೀಡಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಆಗ್ರಹಿಸಿದರು.

ಶಿವಮೊಗ್ಗದಲ್ಲಿ ಶನಿವಾರ ಅವರು ಸುದ್ದಿಗಾರರ ಜತೆ ಮಾತನಾಡಿದರು.

‘ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಪುಟ್ಟರಂಗಶೆಟ್ಟಿ ಬಳಿ ಕೆಲಸ ಮಾಡುತ್ತಿದ್ದ ಮೋಹನ್ ₹25.76 ಲಕ್ಷ ಸಮೇತ ಸಿಕ್ಕಿಬಿದ್ದಿದ್ದಾನೆ. ಪೊಲೀಸರು ಆತನನ್ನು ಬಂಧಿಸಿದ್ದಾರೆ. ಎಫ್ಐಆರ್ ಆಗಿದೆ. ಆತನೇ ನೀಡಿದ ಹೇಳಿಕೆ ಪ್ರಕಾರ ಇದು ಸಚಿವರಿಗೆ ಸೇರಿದ ಹಣ. ಕವರ್‌ ಮೇಲೆ ಸಚಿವರ ಹೆಸರು ನಮೂದಿಸಲಾಗಿದೆ. ಈ ಇಡೀ ಘಟನೆಯ ಸುತ್ತ ತನಿಖೆ ನಡೆಸಬೇಕು’ ಎಂದು ಒತ್ತಾಯಿಸಿದರು.

ಇದನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT