<p><strong>ಶಿವಮೊಗ್ಗ:</strong> ಬಿಜೆಪಿ ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿಯಬೇಕು. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗಬೇಕು ಎಂದು ಪ್ರಾರ್ಥಿಸಿ ಜಿಲ್ಲಾ ಅರ್ಚಕರ ಸಂಘ ಬುಧವಾರ ನಗರದ ವೀರಶೈವ ಕಲ್ಯಾಣ ಮಂದಿರದಲ್ಲಿ ವಿಶೇಷ ಪೂಜೆ, ಹವನ ಹಮ್ಮಿಕೊಂಡಿತ್ತು.</p>.<p>ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೇರಲಿ. ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟು ನಿವಾರಣೆಗೊಳ್ಳಲಿ. ಬಿಜೆಪಿಗೆ ರಾಜ್ಯದಲ್ಲಿ ಒಳ್ಳೆಯ ದಿನಗಳು ಬರಲಿ ಎಂದು ಬೇಡಿಕೊಂಡರು.</p>.<p>ಅರ್ಚಕರ ಸಂಘದ ಅಧ್ಯಕ್ಷ ಎಚ್.ಜಿ.ನಾಗರಾಜ್ ಶಾಸ್ತ್ರಿ ಅವರ ನೇತೃತ್ವದಲ್ಲಿ ಸುಮಾರು 25 ಅರ್ಚಕರು ಹೋಮ ನಡೆಸಿದರು.</p>.<p>ಯಡಿಯೂರಪ್ಪ ಪುತ್ರಿ ಎಸ್.ವೈ. ಅರುಣಾದೇವಿ, ಬಿಜೆಪಿ ಮುಖಂಡರಾದ ಎಚ್.ಸಿ.ಬಸವರಾಜಪ್ಪ, ಜ್ಯೋತಿ ಪ್ರಕಾಶ್, ಧೀರರಾಜ್ ಹೊನ್ನವಿಲೆ, ದೀನ ದಯಾಳು, ಬಳ್ಳೆಕೆರೆ ಸಂತೋಷ್, ಬಸವರಾಜ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಬಿಜೆಪಿ ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿಯಬೇಕು. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗಬೇಕು ಎಂದು ಪ್ರಾರ್ಥಿಸಿ ಜಿಲ್ಲಾ ಅರ್ಚಕರ ಸಂಘ ಬುಧವಾರ ನಗರದ ವೀರಶೈವ ಕಲ್ಯಾಣ ಮಂದಿರದಲ್ಲಿ ವಿಶೇಷ ಪೂಜೆ, ಹವನ ಹಮ್ಮಿಕೊಂಡಿತ್ತು.</p>.<p>ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೇರಲಿ. ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟು ನಿವಾರಣೆಗೊಳ್ಳಲಿ. ಬಿಜೆಪಿಗೆ ರಾಜ್ಯದಲ್ಲಿ ಒಳ್ಳೆಯ ದಿನಗಳು ಬರಲಿ ಎಂದು ಬೇಡಿಕೊಂಡರು.</p>.<p>ಅರ್ಚಕರ ಸಂಘದ ಅಧ್ಯಕ್ಷ ಎಚ್.ಜಿ.ನಾಗರಾಜ್ ಶಾಸ್ತ್ರಿ ಅವರ ನೇತೃತ್ವದಲ್ಲಿ ಸುಮಾರು 25 ಅರ್ಚಕರು ಹೋಮ ನಡೆಸಿದರು.</p>.<p>ಯಡಿಯೂರಪ್ಪ ಪುತ್ರಿ ಎಸ್.ವೈ. ಅರುಣಾದೇವಿ, ಬಿಜೆಪಿ ಮುಖಂಡರಾದ ಎಚ್.ಸಿ.ಬಸವರಾಜಪ್ಪ, ಜ್ಯೋತಿ ಪ್ರಕಾಶ್, ಧೀರರಾಜ್ ಹೊನ್ನವಿಲೆ, ದೀನ ದಯಾಳು, ಬಳ್ಳೆಕೆರೆ ಸಂತೋಷ್, ಬಸವರಾಜ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>