ಶಿವಮೊಗ್ಗ: ಲಿಂಗಾಯಿತ ಸ್ವತಂತ್ರ ಧರ್ಮ ಕುರಿತು ಸಚಿವ ಡಿ.ಕೆ. ಶಿವಕುಮಾರ್ ಹೇಳಿಕೆ ಸ್ವಾಗತಾರ್ಹ. ಈಗಲಾದರೂ ಕಾಂಗ್ರೆಸ್ಗೆ ಬುದ್ಧಿ ಬಂದಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಕುಟುಕಿದರು.
ಲೋಕಸಭಾ ಉಪಚುನಾವಣೆ ಪ್ರಚಾರದ ವೇಳೆ ಅವರು ಸುದ್ದಿಗಾರರ ಜತೆ ಮಾತನಾಡಿದರು.
ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ ಧರ್ಮ ಒಡೆಯುವ ಕೆಲಸಕ್ಕೆ ಕೈ ಹಾಕಿ ತಪ್ಪುಹೆಜ್ಜೆ ಇಟ್ಟಿತ್ತು ಎಂದು ಶಿವಕುಮಾರ್ ಒಪ್ಪಿಕೊಂಡಿದ್ದಾರೆ. ಈ ಕುರಿತು ಟೀಕಿಸುವ, ಚರ್ಚಿಸುವ ಅಗತ್ಯವಿಲ್ಲ. ಅವರಿಗೆ ವಾಸ್ತವ ಸ್ಥಿತಿ ಅರ್ಥವಾಗಿದೆಯಲ್ಲ ಅಷ್ಟೆ ಸಾಕು ಎಂದರು.