ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಎಂ.ಪಿ. ಮುಲ್ಲೈ ಮುಹಿಲನ್ ಮಾತನಾಡಿ ಉಪ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಇದು ರಾಜಕೀಯವಾಗಿ ಸೂಕ್ಷ್ಮ ಕ್ಷೇತ್ರವಾಗಿದ್ದು, ಕಟ್ಟೆಚ್ಚರದಿಂದ ಕಾರ್ಯ ನಿರ್ವಹಿಸಬೇಕು, ರಾಜಕೀಯ ಪಕ್ಷಗಳ ಪ್ರಚಾರ ಇನ್ನೂ ಪ್ರಖರ ಪಡೆದಿಲ್ಲ, ಮುಂಬರುವ 10 ದಿನಗಳಲ್ಲಿ ಬಹಳ ಎಚ್ಚರಿಕೆಯಿಂದ ಕೆಲಸಮಾಡಬೇಕು ಎಂದರು.