ಬಿಜೆಪಿಗೆ ಆಪರೇಷನ್ ಕಮಲ ನಡೆಸುವ ಅನಿವಾರ್ಯತೆ ಇಲ್ಲ. ಕಾಂಗ್ರೆಸ್, ಜೆಡಿಎಸ್ ಶಾಸಕರು ಪರಸ್ಪರ ಕಾಲೆಳೆದುಕೊಂಡು ಸರ್ಕಾರ ಪತನಗೊಳಿಸುತ್ತಾರೆ. ಮುಖ್ಯಮಂತ್ರಿಗೆ ಉಪ ಮುಖ್ಯಮಂತ್ರಿ ಮೇಲೆ ನಂಬಿಕೆ ಇಲ್ಲ. ಉಪ-ಮುಖ್ಯಮಂತ್ರಿ ಸಚಿವರನ್ನು ನಂಬುತ್ತಿಲ್ಲ. ರಾಜ್ಯದಲ್ಲಿ ತುಘಲಕ್ ದರ್ಬಾರ್ ನಡೆಯುತ್ತಿದೆ. ಮೈತ್ರಿ ಪಕ್ಷದ ಶಾಸಕರೇ ಸರ್ಕಾರದ ವಿರುದ್ಧ ಟೀಕೆ ಆರಂಭಿಸಿದ್ದಾರೆ ಎಂದರು.