ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದು ಬಿಜೆಪಿ ಅಭ್ಯರ್ಥಿ ರಾಘವೇಂದ್ರ ನಾಮಪತ್ರ ಸಲ್ಲಿಕೆ

Last Updated 27 ಮಾರ್ಚ್ 2019, 15:59 IST
ಅಕ್ಷರ ಗಾತ್ರ

ಶಿವಮೊಗ್ಗ: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಬಿ.ವೈ.ರಾಘವೇಂದ್ರ ಮಾರ್ಚ್‌28ರಂದು ನಾಮಪತ್ರ ಸಲ್ಲಿಸುವರು.

ಬೆಳಗ್ಗೆ 7.30ಕ್ಕೆ ಶಿಕಾರಿಪುರದ ಹುಚ್ಚುರಾಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸುವರು. 8ಕ್ಕೆ ಶಿಕಾರಿಪುರದ ರಾಯರಮಠಕ್ಕೆ ಭೇಟಿ ನೀಡಿ, 9ಕ್ಕೆ ಶಿವಮೊಗ್ಗದ ರವೀಂದ್ರ ನಗರದ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸುವರು. 10.30 ಕ್ಕೆ ನಗರದ ರಾಮಣ್ಣಶ್ರೇಷ್ಠಿ ಪಾರ್ಕ್‌ನಿಂದ ನಡೆಯಲಿರುವ ಮೆರವಣಿಗೆಯಲ್ಲಿ ಭಾಗವಹಿಸುವರು.

ಮೆರವಣಿಗೆ ಗಾಂಧಿ ಬಜಾರ್, ಶಿವಪ್ಪ ನಾಯಕ ವೃತ್ತ, ನೆಹರೂ ರಸ್ತೆ, ಗೋಪಿ ವೃತ್ತ, ಬಾಲರಾಜ್ ಅರಸ್ ರಸ್ತೆ, ಮಹಾವೀರ ವೃತ್ತದ ಮೂಲಕ ಎನ್‌ಇಎಸ್ ಮೈದಾನ ತಲುಪಲಿದೆ. ಅಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ, ವಿಧಾನ ಪರಿಷತ್‌ ಮಾಜಿ ಸಭಾಪತಿ ಡಿ.ಎಚ್.ಶಂಕರಮೂರ್ತಿ, ಶಾಸಕರಾದ ಕೆ.ಎಸ್.ಈಶ್ವರಪ್ಪ, ಎಸ್.ರುದ್ರೇಗೌಡ, ವಿಶ್ವೇಶ್ವರ ಹೆಗಡೆ ಕಾಗೇರಿ, ಗೋವಿಂದ ಕಾರಜೋಳ, ಶ್ರೀರಾಮುಲು, ಬಸವರಾಜ್ ಬೊಮ್ಮಾಯಿ, ರೇಣುಕಾಚಾರ್ಯ, ರಾಜೀವ್, ಮಾಡಾಳ್ ವಿರುಪಾಕ್ಷಪ್ಪ, ಚಂದ್ರಪ್ಪ, ಆಯನೂರು ಮಂಜುನಾಥ್, ಕೆ.ಪಿ.ನಂಜುಂಡಿ ಭಾಗವಹಿಸುವರು.

ಮಧ್ಯಾಹ್ನ 1ರಿಂದ 1.30ರ ಮಧ್ಯೆಜಿಲ್ಲಾಧಿಕಾರಿ ಕಚೇರಿಯಲ್ಲಿಜಿಲ್ಲಾ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸುವರು ಎಂದುಬಿಜೆಪಿ ವಕ್ತಾರರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT