<p><strong>ಶಿವಮೊಗ್ಗ:</strong> ಸಂಕ್ರಾಂತಿಯ ನಂತರ ಸಚಿವ ಸಂಪುಟ ವಿಸ್ತರಣೆ ಖಚಿತ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.</p>.<p>ನಗರದಲ್ಲಿ ಗುರುವಾರ ಸುದ್ದಿಗಾರರ ಜತೆ ಅವರು ಮಾತನಾಡಿದರು.</p>.<p>ಸಚಿವ ಸಂಪುಟ ವಿಸ್ತರಣೆ, ಪುನರ್ರಚನೆ ಏಕಕಾಲದಲ್ಲಿ ಆಗುವ ಕುರಿತು ಮಾಹಿತಿ ಇಲ್ಲ. ಉಪ ಚುನಾವಣೆಯಲ್ಲಿ ಗೆದ್ದವರಿಗೆ ಸ್ಥಾನಮಾನ ನೀಡುವುದುಖಚಿತ ಎಂದು ಪ್ರತಿಕ್ರಿಯೆ ನೀಡಿದರು.</p>.<p>ಎಚ್.ವಿಶ್ವನಾಥ್, ಆರ್.ಶಂಕರ್ ಹಾಗೂ ಲಕ್ಷ್ಮಣ ಸವದಿ ಭವಿಷ್ಯ ಕುರಿತು ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ.ಉಪ ಮುಖ್ಯಮಂತ್ರಿ ಹುದ್ದೆ ಬೇಡ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಸಹಿಸಂಗ್ರಹ ಮಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇಂತಹ ವಿಷಯಗಳನ್ನು ಬೀದಿಯಲ್ಲಿ ನಿಂತು ಮಾತನಾಡಲು ಸಾಧ್ಯವಿಲ್ಲ.ಪಕ್ಷದ ಆಂತರಿಕವಿಚಾರ ಕುಳಿತು ಬಗೆಹರಿಸಿಕೊಳ್ಳಲಾಗುವುದು ಎಂದರು.</p>.<p>ಮಹಾರಾಷ್ಟ್ರ ಸರ್ಕಾರ ಅನಗತ್ಯವಾಗಿ ಕನ್ನಡಿಗರನ್ನುಕೆಣಕುತ್ತಿದೆ. ಗಡಿ ವಿವಾದ ಈಗಾಗಲೇ ಸುಪ್ರೀಂಕೋರ್ಟ್ನಲ್ಲಿದೆ. ಶಿವಸೇನೆ-ಎಂಇಎಸ್ ಅವಕಾಶಕ್ಕಾಗಿ ಕ್ಯಾತೆ ತೆಗೆಯುತ್ತಿದ್ದಾರೆ. ರಾಜ್ಯದ ಭಾಷೆ, ನೆಲ, ಜಲದ ವಿಷಯ ಬಂದಾಗ ಕನ್ನಡಿಗರ ಸ್ವಾಭಿಮಾನಕ್ಕೆ ತಕ್ಕಂಥ ಕೆಲಸ ಮಾಡಲಾಗುವುದುಎಂದು ಭರವಸೆ ನೀಡಿದರು.</p>.<p>ರಾಜ್ಯ ಸರ್ಕಾರ 1,500 ಕೋಟಿನೆರೆ ಪರಿಹಾರದ ಹಣಬಿಡುಗಡೆ ಮಾಡಿದೆ. ಶೀಘ್ರ ಪರಿಹಾರ ವಿತರಣೆ ನಡೆಯಲಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಸಂಕ್ರಾಂತಿಯ ನಂತರ ಸಚಿವ ಸಂಪುಟ ವಿಸ್ತರಣೆ ಖಚಿತ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.</p>.<p>ನಗರದಲ್ಲಿ ಗುರುವಾರ ಸುದ್ದಿಗಾರರ ಜತೆ ಅವರು ಮಾತನಾಡಿದರು.</p>.<p>ಸಚಿವ ಸಂಪುಟ ವಿಸ್ತರಣೆ, ಪುನರ್ರಚನೆ ಏಕಕಾಲದಲ್ಲಿ ಆಗುವ ಕುರಿತು ಮಾಹಿತಿ ಇಲ್ಲ. ಉಪ ಚುನಾವಣೆಯಲ್ಲಿ ಗೆದ್ದವರಿಗೆ ಸ್ಥಾನಮಾನ ನೀಡುವುದುಖಚಿತ ಎಂದು ಪ್ರತಿಕ್ರಿಯೆ ನೀಡಿದರು.</p>.<p>ಎಚ್.ವಿಶ್ವನಾಥ್, ಆರ್.ಶಂಕರ್ ಹಾಗೂ ಲಕ್ಷ್ಮಣ ಸವದಿ ಭವಿಷ್ಯ ಕುರಿತು ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ.ಉಪ ಮುಖ್ಯಮಂತ್ರಿ ಹುದ್ದೆ ಬೇಡ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಸಹಿಸಂಗ್ರಹ ಮಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇಂತಹ ವಿಷಯಗಳನ್ನು ಬೀದಿಯಲ್ಲಿ ನಿಂತು ಮಾತನಾಡಲು ಸಾಧ್ಯವಿಲ್ಲ.ಪಕ್ಷದ ಆಂತರಿಕವಿಚಾರ ಕುಳಿತು ಬಗೆಹರಿಸಿಕೊಳ್ಳಲಾಗುವುದು ಎಂದರು.</p>.<p>ಮಹಾರಾಷ್ಟ್ರ ಸರ್ಕಾರ ಅನಗತ್ಯವಾಗಿ ಕನ್ನಡಿಗರನ್ನುಕೆಣಕುತ್ತಿದೆ. ಗಡಿ ವಿವಾದ ಈಗಾಗಲೇ ಸುಪ್ರೀಂಕೋರ್ಟ್ನಲ್ಲಿದೆ. ಶಿವಸೇನೆ-ಎಂಇಎಸ್ ಅವಕಾಶಕ್ಕಾಗಿ ಕ್ಯಾತೆ ತೆಗೆಯುತ್ತಿದ್ದಾರೆ. ರಾಜ್ಯದ ಭಾಷೆ, ನೆಲ, ಜಲದ ವಿಷಯ ಬಂದಾಗ ಕನ್ನಡಿಗರ ಸ್ವಾಭಿಮಾನಕ್ಕೆ ತಕ್ಕಂಥ ಕೆಲಸ ಮಾಡಲಾಗುವುದುಎಂದು ಭರವಸೆ ನೀಡಿದರು.</p>.<p>ರಾಜ್ಯ ಸರ್ಕಾರ 1,500 ಕೋಟಿನೆರೆ ಪರಿಹಾರದ ಹಣಬಿಡುಗಡೆ ಮಾಡಿದೆ. ಶೀಘ್ರ ಪರಿಹಾರ ವಿತರಣೆ ನಡೆಯಲಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>