ಶಿವಮೊಗ್ಗ:ಸಾಗರ ಸಮೀಪ ರಾಷ್ಟ್ರೀಯ ಹೆದ್ದಾರಿ ಕಾಸ್ಪಾಡಿ ಬಳಿ ಟವೆರಾ ಕಾರೊಂದು ಚಾಲನೆಯಲ್ಲಿದ್ದಾಗಲೇ ಬೆಂಕಿ ಕಾಣಿಸಿಕೊಂಡಿದ್ದು, ಕಾರು ಭಸ್ಮವಾಗಿದೆ. ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಂಗಳವಾರ ರಾತ್ರಿ 1.30ರ ಸುಮಾರಿಗೆ ಶಿವಮೊಗ್ಗದಿಂದ ಸಾಗರದ ಕಡೆ ಬರುತ್ತಿದ್ದ ಕಾರಿನಲ್ಲಿ ಈ ಘಟನೆ ನಡೆದಿದೆ.ಟವೆರಾ ಕಾರು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಕಾರಿನಲ್ಲಿದ್ದ ಒಬ್ಬರಿಗೆ ಸಣ್ಣ ಪುಟ್ಟ ಸುಟ್ಟ ಗಾಯವಾಗಿದೆ.
ಶಾರ್ಟ್ ಸರ್ಕಿಟ್ ಘಟನೆಗೆ ಕಾರಣ ಎನ್ನಲಾಗಿದ್ದು, ಸ್ಥಳಕ್ಕೆ ಅಗ್ನಿ ಶಾಮಕ ಮತ್ತು ತುರ್ತು ಸೇವೆಯ ಸಿಬ್ಬಂದಿ ಜೆ.ರವಿ, ಪ್ರಕಾಶ್, ರವಿಕುಮಾರ್, ಕುಮಾರಸ್ವಾಮಿ ಬಂದು ಬೆಂಕಿ ನಂದಿಸಿದ್ದಾರೆ.