<p>ಚಾಮರಾಜನಗರ: ‘ಕಿರಿಯ ವಿದ್ಯಾರ್ಥಿ ಗಳನ್ನು ಪರಿಚಯ ಮಾಡಿಕೊಳ್ಳುವ ಉದ್ದೇಶದಿಂದ ಕಾಲೇಜುಗಳಲ್ಲಿ ಹಿರಿಯ ವಿದ್ಯಾರ್ಥಿಗಳು ನಡೆಸುವ ಸ್ವಾಗತ ಕಾರ್ಯಕ್ರಮವು ಸ್ನೇಹದ ಬೆಸುಗೆಗೆ ನಾಂದಿಯಾಗಲಿದೆ’ ಎಂದು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕೆ.ಎಚ್. ನರಸಿಂಹಮೂರ್ತಿ ಹೇಳಿದರು.<br /> <br /> ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಇತ್ತೀಚೆಗೆ ಮೈಸೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಉಪಕೇಂದ್ರದಿಂದ ಕಿರಿಯ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಸ್ವಾಗತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> ಕಿರಿಯ ವಿದ್ಯಾರ್ಥಿಗಳಲ್ಲಿರುವ ಭಯ, ದುಗುಡ ದೂರಮಾಡಲು ಸ್ವಾಗತ ಕಾರ್ಯಕ್ರಮಗಳು ಪೂರಕವಾಗಿವೆ. ಜತೆಗೆ, ಶಿಕ್ಷಣ ಕಲಿಯಲು ಸಹಕಾರಿಯಾಗಿವೆ ಎಂದರು.<br /> <br /> ಶಾಲಾ– ಕಾಲೇಜುಗಳಲ್ಲಿ ನಡೆಯುವ ಬೀಳ್ಕೊಡುಗೆ ಸಮಾ ರಂಭದಂತೆ ಸ್ವಾಗತ ಕಾರ್ಯಕ್ರಮ ನಡೆಸುವುದು ಉತ್ತಮ ಬೆಳವಣಿಗೆ ಎಂದ ಅವರು, ಇಂದಿನ ಶೈಕ್ಷಣಿಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ಕಲಿಯಲು ಸಾಕಷ್ಟು ಅವಕಾಶಗಳಿವೆ. ಉತ್ತಮ ವಿಚಾರದ ಬಗ್ಗೆ ಹೆಚ್ಚು ಚರ್ಚಿಸಬೇಕಿದೆ ಎಂದರು.<br /> <br /> ಸ್ವಾಗತ ಕಾರ್ಯಕ್ರಮದ ಮೂಲಕ ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗಳಲ್ಲಿರುವ ಆತಂಕವನ್ನು ಹೋಗಲಾಡಿಸಬೇಕು. ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ವಿಚಾರ ಕುರಿತು ಚರ್ಚಿಸಿ ವಿಷಯ ವಿನಿಮಯ ಮಾಡಿಕೊಳ್ಳಬೇಕು. ಇದನ್ನು ಹೊರತುಪಡಿಸಿ ಇತರೇ ಚಟುವಟಿಕೆಗಳಿಗೆ ಆಸ್ಪದ ನೀಡಬಾರದು ಎಂದು ಸಲಹೆ ನೀಡಿದರು.<br /> <br /> ಮಕ್ಕಳ ತಜ್ಞ ಡಾ.ಬಸವರಾಜು ಮಾತನಾಡಿ, ‘ವಿದ್ಯಾರ್ಥಿ ಜೀವನ ಭವಿಷ್ಯದಲ್ಲಿ ಮೆಲುಕು ಹಾಕು ವಂತಹುದು. ಜತೆಗೆ, ಅತ್ಯಮೂಲ್ಯ ವಾದುದು ಎಂದು ಹೇಳಿದರು.<br /> <br /> ವಿದ್ಯಾರ್ಥಿ ಜೀವನದಲ್ಲಿ ಉತ್ತಮ ಸ್ನೇಹಿತರ ಪರಿಚಯ ಮಾಡಿಕೊಳ್ಳಬೇಕು. ಜೀವನ ಉದ್ದಕ್ಕೂ ನೆನಪು ತರುವಂತಹ ಉತ್ತಮ ಸ್ನೇಹ ನೆಮ್ಮದಿ ನೀಡುತ್ತದೆ. ಉಲ್ಲಾಸದಿಂದ ಇರುವಂತೆ ಮಾಡುತ್ತದೆ. ಸಜ್ಜನರ ಸ್ನೇಹದಿಂದ ಸೇವಾ ಮನೋಭಾವ ಬೆಳೆಯುತ್ತದೆ ಎಂದು ಹೇಳಿದರು.<br /> <br /> ಪ್ರಾಧ್ಯಾಪಕ ರಾಮಚಂದ್ರನ್ ಮಾತನಾಡಿ, ‘ಹೊಸ ವಿಚಾರಗಳ ವಿನಿಮಯಕ್ಕೆ ಸ್ವಾಗತ ಕಾರ್ಯಕ್ರಮ ಸಹಕಾರಿಯಾಗಿದೆ. ಈಗಿನ ಕಿರಿಯ ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಶಿಕ್ಷಣಕ್ಕೆ ಪೂರಕವಾದ ವಿಚಾರಗಳನ್ನು ಮುಂದಿನ ಕಿರಿಯ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಬೇಕು ಎಂದು ಹೇಳಿದರು.<br /> <br /> ಕಾರ್ಯಕ್ರಮದಲ್ಲಿ ಕಬಡ್ಡಿ ವಿಜೇತರಿಗೆ ಸನ್ಮಾನಿಸಲಾಯಿತು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಕೇಂದ್ರದ ಸಂಯೋಜಕ ಪ್ರೊ.ಶಿವಬಸವಯ್ಯ, ವಾಣಿಜ್ಯ ವಿಭಾಗದ ಮುಖ್ಯಸ್ಥ ತಿಮ್ಮರಾಯಪ್ಪ, ಇಂಗ್ಲಿಷ್ ವಿಭಾಗದ ಲಕ್ಷ್ಮಣ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಾಮರಾಜನಗರ: ‘ಕಿರಿಯ ವಿದ್ಯಾರ್ಥಿ ಗಳನ್ನು ಪರಿಚಯ ಮಾಡಿಕೊಳ್ಳುವ ಉದ್ದೇಶದಿಂದ ಕಾಲೇಜುಗಳಲ್ಲಿ ಹಿರಿಯ ವಿದ್ಯಾರ್ಥಿಗಳು ನಡೆಸುವ ಸ್ವಾಗತ ಕಾರ್ಯಕ್ರಮವು ಸ್ನೇಹದ ಬೆಸುಗೆಗೆ ನಾಂದಿಯಾಗಲಿದೆ’ ಎಂದು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕೆ.ಎಚ್. ನರಸಿಂಹಮೂರ್ತಿ ಹೇಳಿದರು.<br /> <br /> ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಇತ್ತೀಚೆಗೆ ಮೈಸೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಉಪಕೇಂದ್ರದಿಂದ ಕಿರಿಯ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಸ್ವಾಗತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> ಕಿರಿಯ ವಿದ್ಯಾರ್ಥಿಗಳಲ್ಲಿರುವ ಭಯ, ದುಗುಡ ದೂರಮಾಡಲು ಸ್ವಾಗತ ಕಾರ್ಯಕ್ರಮಗಳು ಪೂರಕವಾಗಿವೆ. ಜತೆಗೆ, ಶಿಕ್ಷಣ ಕಲಿಯಲು ಸಹಕಾರಿಯಾಗಿವೆ ಎಂದರು.<br /> <br /> ಶಾಲಾ– ಕಾಲೇಜುಗಳಲ್ಲಿ ನಡೆಯುವ ಬೀಳ್ಕೊಡುಗೆ ಸಮಾ ರಂಭದಂತೆ ಸ್ವಾಗತ ಕಾರ್ಯಕ್ರಮ ನಡೆಸುವುದು ಉತ್ತಮ ಬೆಳವಣಿಗೆ ಎಂದ ಅವರು, ಇಂದಿನ ಶೈಕ್ಷಣಿಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ಕಲಿಯಲು ಸಾಕಷ್ಟು ಅವಕಾಶಗಳಿವೆ. ಉತ್ತಮ ವಿಚಾರದ ಬಗ್ಗೆ ಹೆಚ್ಚು ಚರ್ಚಿಸಬೇಕಿದೆ ಎಂದರು.<br /> <br /> ಸ್ವಾಗತ ಕಾರ್ಯಕ್ರಮದ ಮೂಲಕ ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗಳಲ್ಲಿರುವ ಆತಂಕವನ್ನು ಹೋಗಲಾಡಿಸಬೇಕು. ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ವಿಚಾರ ಕುರಿತು ಚರ್ಚಿಸಿ ವಿಷಯ ವಿನಿಮಯ ಮಾಡಿಕೊಳ್ಳಬೇಕು. ಇದನ್ನು ಹೊರತುಪಡಿಸಿ ಇತರೇ ಚಟುವಟಿಕೆಗಳಿಗೆ ಆಸ್ಪದ ನೀಡಬಾರದು ಎಂದು ಸಲಹೆ ನೀಡಿದರು.<br /> <br /> ಮಕ್ಕಳ ತಜ್ಞ ಡಾ.ಬಸವರಾಜು ಮಾತನಾಡಿ, ‘ವಿದ್ಯಾರ್ಥಿ ಜೀವನ ಭವಿಷ್ಯದಲ್ಲಿ ಮೆಲುಕು ಹಾಕು ವಂತಹುದು. ಜತೆಗೆ, ಅತ್ಯಮೂಲ್ಯ ವಾದುದು ಎಂದು ಹೇಳಿದರು.<br /> <br /> ವಿದ್ಯಾರ್ಥಿ ಜೀವನದಲ್ಲಿ ಉತ್ತಮ ಸ್ನೇಹಿತರ ಪರಿಚಯ ಮಾಡಿಕೊಳ್ಳಬೇಕು. ಜೀವನ ಉದ್ದಕ್ಕೂ ನೆನಪು ತರುವಂತಹ ಉತ್ತಮ ಸ್ನೇಹ ನೆಮ್ಮದಿ ನೀಡುತ್ತದೆ. ಉಲ್ಲಾಸದಿಂದ ಇರುವಂತೆ ಮಾಡುತ್ತದೆ. ಸಜ್ಜನರ ಸ್ನೇಹದಿಂದ ಸೇವಾ ಮನೋಭಾವ ಬೆಳೆಯುತ್ತದೆ ಎಂದು ಹೇಳಿದರು.<br /> <br /> ಪ್ರಾಧ್ಯಾಪಕ ರಾಮಚಂದ್ರನ್ ಮಾತನಾಡಿ, ‘ಹೊಸ ವಿಚಾರಗಳ ವಿನಿಮಯಕ್ಕೆ ಸ್ವಾಗತ ಕಾರ್ಯಕ್ರಮ ಸಹಕಾರಿಯಾಗಿದೆ. ಈಗಿನ ಕಿರಿಯ ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಶಿಕ್ಷಣಕ್ಕೆ ಪೂರಕವಾದ ವಿಚಾರಗಳನ್ನು ಮುಂದಿನ ಕಿರಿಯ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಬೇಕು ಎಂದು ಹೇಳಿದರು.<br /> <br /> ಕಾರ್ಯಕ್ರಮದಲ್ಲಿ ಕಬಡ್ಡಿ ವಿಜೇತರಿಗೆ ಸನ್ಮಾನಿಸಲಾಯಿತು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಕೇಂದ್ರದ ಸಂಯೋಜಕ ಪ್ರೊ.ಶಿವಬಸವಯ್ಯ, ವಾಣಿಜ್ಯ ವಿಭಾಗದ ಮುಖ್ಯಸ್ಥ ತಿಮ್ಮರಾಯಪ್ಪ, ಇಂಗ್ಲಿಷ್ ವಿಭಾಗದ ಲಕ್ಷ್ಮಣ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>