<p><strong>ಚಾಮರಾಜನಗರ:</strong> ಜಿಲ್ಲೆಯಲ್ಲಿ ಸೋಮವಾರ ಇಬ್ಬರು ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ. ಒಬ್ಬರು ಕೋವಿಡ್ ಕಾರಣದಿಂದ ಮೃತಪಟ್ಟಿದ್ದರೆ, ಮತ್ತೊಬ್ಬರು ಕೋವಿಡ್ಯೇತರ ಕಾರಣದಿಂದ ನಿಧನರಾಗಿದ್ದಾರೆ.</p>.<p>ಕೊಳ್ಳೇಗಾಲದ 62 ವರ್ಷ ಮಹಿಳೆ ಅ.10ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಭಾನುವಾರ ಮೃತಪಟ್ಟಿದ್ದಾರೆ. ತಮಿಳುನಾಡಿನ ಈರೋಡ್ ಜಿಲ್ಲೆಯ ನಿವಾಸಿ 85 ವರ್ಷದ ವೃದ್ಧ ಅ.12ರಂದು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಶನಿವಾರ (ಅ.17) ಮೃತಪಟ್ಟಿದ್ದರು. ನಂತರ ನಡೆಸಿದ ಕೋವಿಡ್ ಪರೀಕ್ಷೆಯಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿತ್ತು.</p>.<p>ಇದರೊಂದಿಗೆ, ಜಿಲ್ಲೆಯಲ್ಲಿ ಕೋವಿಡ್ನಿಂದ ಮೃತಪಟ್ಟವರ ಸಂಖ್ಯೆ 86ಕ್ಕೆ ಹಾಗೂ ಕೋವಿಡ್ಯೇತರ ಕಾರಣದಿಂದ ನಿಧನರಾದವರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ.</p>.<p>ಸೋಮವಾರ 107 ಮಂದಿ ಗುಣಮುಖರಾಗಿದ್ದಾರೆ. 54 ಹೊಸ ಪ್ರಕರಣಗಳು ದೃಢಪಟ್ಟಿವೆ.</p>.<p class="Subhead">ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆ:ಜಿಲ್ಲೆಯಲ್ಲಿ ಇದುವರೆಗೆ 4,672 ಮಂದಿ ಸೋಂಕು ಮುಕ್ತರಾಗಿದ್ದು, 5,491 ಕೋವಿಡ್ ಪ್ರಕರಣಗಳು ವರದಿಯಾಗಿವೆ. 702 ಸಕ್ರಿಯ ಪ್ರಕರಣಗಳಿವೆ. 223 ಮಂದಿ ಹೋಂ ಐಸೊಲೇಷನ್ನಲ್ಲಿದೆ. 43 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಸೋಮವಾರ 310 ಮಂದಿಯ ಗಂಟಲು ದ್ರವದ ಮಾದರಿಗಳ ಪರೀಕ್ಷೆ ವರದಿ ಬಂದಿದ್ದು, 257 ಮಂದಿಯ ವರದಿ ನೆಗೆಟಿವ್ ಬಂದಿವೆ. 53 ಜನರಿಗೆ ಸೋಂಕು ಇರುವುದು ಖಚಿತವಾಗಿದೆ. ಒಂದು ಪ್ರಕರಣ ಮೈಸೂರಿಗೆ ದೃಢಪಟ್ಟಿದೆ.</p>.<p>ಚಾಮರಾಜನಗರ ತಾಲ್ಲೂಕಿನ 20, ಗುಂಡ್ಲುಪೇಟೆ 13, ಕೊಳ್ಳೇಗಾಲದ 10 ಹನೂರು ಮತ್ತು ಯಳಂದೂರು ತಾಲ್ಲೂಕುಗಳಲ್ಲಿ ತಲಾ ಐವರಿಗೆ ಸೋಂಕು ತಗುಲಿದೆ. ಹೊರ ಜಿಲ್ಲೆಯವರು ಒಬ್ಬರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ಜಿಲ್ಲೆಯಲ್ಲಿ ಸೋಮವಾರ ಇಬ್ಬರು ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ. ಒಬ್ಬರು ಕೋವಿಡ್ ಕಾರಣದಿಂದ ಮೃತಪಟ್ಟಿದ್ದರೆ, ಮತ್ತೊಬ್ಬರು ಕೋವಿಡ್ಯೇತರ ಕಾರಣದಿಂದ ನಿಧನರಾಗಿದ್ದಾರೆ.</p>.<p>ಕೊಳ್ಳೇಗಾಲದ 62 ವರ್ಷ ಮಹಿಳೆ ಅ.10ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಭಾನುವಾರ ಮೃತಪಟ್ಟಿದ್ದಾರೆ. ತಮಿಳುನಾಡಿನ ಈರೋಡ್ ಜಿಲ್ಲೆಯ ನಿವಾಸಿ 85 ವರ್ಷದ ವೃದ್ಧ ಅ.12ರಂದು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಶನಿವಾರ (ಅ.17) ಮೃತಪಟ್ಟಿದ್ದರು. ನಂತರ ನಡೆಸಿದ ಕೋವಿಡ್ ಪರೀಕ್ಷೆಯಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿತ್ತು.</p>.<p>ಇದರೊಂದಿಗೆ, ಜಿಲ್ಲೆಯಲ್ಲಿ ಕೋವಿಡ್ನಿಂದ ಮೃತಪಟ್ಟವರ ಸಂಖ್ಯೆ 86ಕ್ಕೆ ಹಾಗೂ ಕೋವಿಡ್ಯೇತರ ಕಾರಣದಿಂದ ನಿಧನರಾದವರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ.</p>.<p>ಸೋಮವಾರ 107 ಮಂದಿ ಗುಣಮುಖರಾಗಿದ್ದಾರೆ. 54 ಹೊಸ ಪ್ರಕರಣಗಳು ದೃಢಪಟ್ಟಿವೆ.</p>.<p class="Subhead">ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆ:ಜಿಲ್ಲೆಯಲ್ಲಿ ಇದುವರೆಗೆ 4,672 ಮಂದಿ ಸೋಂಕು ಮುಕ್ತರಾಗಿದ್ದು, 5,491 ಕೋವಿಡ್ ಪ್ರಕರಣಗಳು ವರದಿಯಾಗಿವೆ. 702 ಸಕ್ರಿಯ ಪ್ರಕರಣಗಳಿವೆ. 223 ಮಂದಿ ಹೋಂ ಐಸೊಲೇಷನ್ನಲ್ಲಿದೆ. 43 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಸೋಮವಾರ 310 ಮಂದಿಯ ಗಂಟಲು ದ್ರವದ ಮಾದರಿಗಳ ಪರೀಕ್ಷೆ ವರದಿ ಬಂದಿದ್ದು, 257 ಮಂದಿಯ ವರದಿ ನೆಗೆಟಿವ್ ಬಂದಿವೆ. 53 ಜನರಿಗೆ ಸೋಂಕು ಇರುವುದು ಖಚಿತವಾಗಿದೆ. ಒಂದು ಪ್ರಕರಣ ಮೈಸೂರಿಗೆ ದೃಢಪಟ್ಟಿದೆ.</p>.<p>ಚಾಮರಾಜನಗರ ತಾಲ್ಲೂಕಿನ 20, ಗುಂಡ್ಲುಪೇಟೆ 13, ಕೊಳ್ಳೇಗಾಲದ 10 ಹನೂರು ಮತ್ತು ಯಳಂದೂರು ತಾಲ್ಲೂಕುಗಳಲ್ಲಿ ತಲಾ ಐವರಿಗೆ ಸೋಂಕು ತಗುಲಿದೆ. ಹೊರ ಜಿಲ್ಲೆಯವರು ಒಬ್ಬರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>