<p><strong>ಚಾಮರಾಜನಗರ: </strong>ಕೋವಿಡ್–19 ಲಾಕ್ಡೌನ್ನಿಂದಾಗಿ ಸಂಕಷ್ಟಕ್ಕೆ ಈಡಾಗಿದ್ದ ಜಿಲ್ಲೆಯ 13,001 ಬೆಳೆಗಾರರಿಗೆ ಸರ್ಕಾರ ಘೋಷಿಸಿದ್ದ ₹5,000 ಪರಿಹಾರ ತಲುಪಿದೆ. ₹6.50 ಕೋಟಿಯಷ್ಟು ಪರಿಹಾರವನ್ನು ಕೃಷಿ ಇಲಾಖೆ ರೈತರ ಖಾತೆಗೆ ನೇರವಾಗಿ ಜಮೆ ಮಾಡಿದೆ.</p>.<p>ಲಾಕ್ಡೌನ್ ಅವಧಿಯಲ್ಲಿ ಮೆಕ್ಕೆಜೋಳದ ಬೆಳೆ ಕುಸಿದಿತ್ತು. ಬೆಂಬಲ ಬೆಲೆ ಘೋಷಿಸಿದ್ದರೂ ಖರೀದಿಸುವವರು ಯಾರೂ ಇರಲಿಲ್ಲ. ಇದರಿಂದಾಗಿ ರೈತರು ನಷ್ಟ ಅನುಭವಿಸಿದ್ದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮೂರನೇ ಪ್ಯಾಕೇಜ್ ಘೋಷಿಸುವ ಸಂದರ್ಭದಲ್ಲಿ ರಾಜ್ಯದಲ್ಲಿರುವ 10 ಲಕ್ಷ ಮೆಕ್ಕೆಜೋಳ ಬೆಳೆಗಾರರಿಗೆ ಒಂದು ಬಾರಿಗೆ ₹5,000 ಪರಿಹಾರ ನೀಡುವುದಾಗಿ ಹೇಳಿದ್ದರು.</p>.<p>ಅದರಂತೆ ಜಿಲ್ಲೆಯಲ್ಲಿ ಬೆಳೆ ಸಮೀಕ್ಷೆ ನಡೆಸಲಾಗಿತ್ತು. ಸಮೀಕ್ಷೆಯಲ್ಲಿ ಉಲ್ಲೇಖಿಸಿದ ಬೆಳೆಗಾರರಿಗೆ ಮಾತ್ರ ಪರಿಹಾರ ನೀಡಲಾಗುತ್ತದೆ. ಕೃಷಿ ಇಲಾಖೆ ನೀಡಿರುವ ಅಂಕಿ ಅಂಶಗಳ ಪ್ರಕಾರ ಜಿಲ್ಲೆಯಲ್ಲಿ 13,931 ರೈತರನ್ನು ಫಲಾನುಭವಿಗಳನ್ನು ಗುರುತಿಸಲಾಗಿದೆ.</p>.<p>ಕೃಷಿ ಇಲಾಖೆಯ ಅಧಿಕಾರಿಗಳು ನೀಡಿರುವ ಅಂಕಿ ಅಂಶಗಳ ಪ್ರಕಾರ, ಒಟ್ಟು ಫಲಾನುಭವಿಗಳಲ್ಲಿ 13,001 ಮಂದಿಯ ಬ್ಯಾಂಕ್ ಖಾತೆಗೆ ತಲಾ ₹5,000 ದಂತೆ ಹಣ ಜಮೆ ಮಾಡಲಾಗಿದೆ.</p>.<p>13,054ರಷ್ಟು ರೈತರ ವಿವರಗಳನ್ನು ಪರಿಹಾರ ಧನ ಪಾವತಿಗಾಗಿ ಕಳುಹಿಸಲಾಗಿತ್ತು. ಈ ಪೈಕಿ 13,001 ರೈತರಿಗೆ ಪಾವತಿಯಾಗಿದೆ. ಉಳಿದವರದ್ದು ತಾಂತ್ರಿಕ ಕಾರಣದಿಂದಾಗಿ ಪಾವತಿಯಾಗಿಲ್ಲ ಎಂದು ಅಧಿಕಾರಿಗಳು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p class="Subhead">ಆಧಾರ್ ಜೋಡಣೆಯಾಗಿಲ್ಲ: ‘ಒಟ್ಟು ಫಲಾನುಭವಿಗಳ ಪೈಕಿ 577 ರೈತರ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆ ಜೋಡಣೆಯಾಗಿಲ್ಲ. 238 ರೈತರ ಖಾತೆಗೆ ಆಧಾರ್ ಜೋಡಣೆಯಾಗಿದ್ದರೂ, ಸಕ್ರಿಯವಾಗಿಲ್ಲ. 62 ಮಂದಿಯ ಆಧಾರ್ ದೃಢೀಕರಣ ಪ್ರಕ್ರಿಯೆ ತಿರಸ್ಕೃತವಾಗಿದೆ. ಈ ಕಾರಣಗಳಿಂದಾಗಿ ಪರಿಹಾರ ಧನ ಪಾವತಿಯಾಗಿಲ್ಲ. ಸಮಸ್ಯೆ ಬಗೆಹರಿದ ತಕ್ಷಣ ಅವರಿಗೂ ಹಣ ಬರಲಿದೆ’ ಎಂದು ಅವರು ಮಾಹಿತಿ ನೀಡಿದರು.</p>.<p class="Subhead">‘ಬೆಳೆ ಸಮೀಕ್ಷೆ ನಡೆಸಿ ಫಲಾನುಭವಿಗಳನ್ನು ಗುರುತಿಸಲಾಗಿದ್ದು, ₹6.50 ಕೋಟಿಯಷ್ಟು ಪರಿಹಾರ ಧನ ಪಾವತಿ ಮಾಡಲಾಗಿದೆ’ ಎಂದು ಜಂಟಿ ಕೃಷಿ ನಿರ್ದೇಶಕಿ ಎಚ್.ಟಿ.ಚಂದ್ರಕಲಾ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p class="Subhead">ಸಮೀಕ್ಷೆಗೆ ಆಕ್ಷೇಪ: ಫಲಾನುಭವಿಗಳನ್ನು ಗುರುತಿಸುವುದಕ್ಕಾಗಿ ನಡೆಸಲಾದ ಬೆಳೆ ಸಮೀಕ್ಷೆಯನ್ನು ಸರಿಯಾಗಿ ಮಾಡಿಲ್ಲ ಎಂಬ ಆರೋಪವೂ ಕೇಳಿ ಬಂದಿದೆ.</p>.<p class="Subhead">ಹನೂರು ಭಾಗದಲ್ಲಿ ಕೆಲವು ರೈತರು ಈ ಆರೋಪ ಮಾಡಿದ್ದು, ‘ಸಮೀಕ್ಷೆಗೆ ಬಂದ ಸಿಬ್ಬಂದಿ ಆ್ಯಪ್ನಲ್ಲಿ ಕೃಷಿಯೇತರ ಭೂಮಿ ಎಂದು ನಮೂದಿಸುವುದರಿಂದ ಪರಿಹಾರದಿಂದ ವಂಚಿತರಾಗಿದ್ದೇವೆ’ ಎಂದು ಬೆಳೆಗಾರರು ಅಳಲು ತೋಡಿಕೊಂಡಿದ್ದಾರೆ.</p>.<p class="Briefhead">ಹನೂರು ತಾಲ್ಲೂಕಿನಲ್ಲಿ ಹೆಚ್ಚು ಫಲಾನುಭವಿಗಳು</p>.<p class="Subhead">ಜಿಲ್ಲೆಯಲ್ಲಿ ಹನೂರು ತಾಲ್ಲೂಕಿನಲ್ಲಿ ಹೆಚ್ಚಿನ ರೈತರು ಮೆಕ್ಕೆ ಜೋಳ ಬೆಳೆಯುತ್ತಾರೆ. ಫಲಾನುಭವಿಗಳ ಸಂಖ್ಯೆ ಅಲ್ಲಿಯೇ ಹೆಚ್ಚಿದೆ. ಅಲ್ಲಿ 6,569 ಮಂದಿ ಫಲಾನುಭವಿಗಳನ್ನು ಗುರುತಿಸಲಾಗಿದ್ದು, ಈ ಪೈಕಿ 6,062 ಮಂದಿಗೆ ಪರಿಹಾರ ದೊರಕಿದೆ.</p>.<p class="Subhead">ಗುಂಡ್ಲುಪೇಟೆ ಎರಡನೇ ಸ್ಥಾನದಲ್ಲಿದೆ. ಪರಿಹಾರ ನೀಡಲು ಗುರುತಿಸಲಾದ 2,633 ರೈತರ ಪೈಕಿ 2,488 ಬೆಳೆಗಾರರ ಖಾತೆಗೆ ಹಣ ಜಮಾವಣೆ ಆಗಿದೆ. ನಂತರದ ಸ್ಥಾನದಲ್ಲಿ ಚಾಮರಾಜನಗರ, ಕೊಳ್ಳೇಗಾಲ ಮತ್ತು ಯಳಂದೂರು ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ: </strong>ಕೋವಿಡ್–19 ಲಾಕ್ಡೌನ್ನಿಂದಾಗಿ ಸಂಕಷ್ಟಕ್ಕೆ ಈಡಾಗಿದ್ದ ಜಿಲ್ಲೆಯ 13,001 ಬೆಳೆಗಾರರಿಗೆ ಸರ್ಕಾರ ಘೋಷಿಸಿದ್ದ ₹5,000 ಪರಿಹಾರ ತಲುಪಿದೆ. ₹6.50 ಕೋಟಿಯಷ್ಟು ಪರಿಹಾರವನ್ನು ಕೃಷಿ ಇಲಾಖೆ ರೈತರ ಖಾತೆಗೆ ನೇರವಾಗಿ ಜಮೆ ಮಾಡಿದೆ.</p>.<p>ಲಾಕ್ಡೌನ್ ಅವಧಿಯಲ್ಲಿ ಮೆಕ್ಕೆಜೋಳದ ಬೆಳೆ ಕುಸಿದಿತ್ತು. ಬೆಂಬಲ ಬೆಲೆ ಘೋಷಿಸಿದ್ದರೂ ಖರೀದಿಸುವವರು ಯಾರೂ ಇರಲಿಲ್ಲ. ಇದರಿಂದಾಗಿ ರೈತರು ನಷ್ಟ ಅನುಭವಿಸಿದ್ದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮೂರನೇ ಪ್ಯಾಕೇಜ್ ಘೋಷಿಸುವ ಸಂದರ್ಭದಲ್ಲಿ ರಾಜ್ಯದಲ್ಲಿರುವ 10 ಲಕ್ಷ ಮೆಕ್ಕೆಜೋಳ ಬೆಳೆಗಾರರಿಗೆ ಒಂದು ಬಾರಿಗೆ ₹5,000 ಪರಿಹಾರ ನೀಡುವುದಾಗಿ ಹೇಳಿದ್ದರು.</p>.<p>ಅದರಂತೆ ಜಿಲ್ಲೆಯಲ್ಲಿ ಬೆಳೆ ಸಮೀಕ್ಷೆ ನಡೆಸಲಾಗಿತ್ತು. ಸಮೀಕ್ಷೆಯಲ್ಲಿ ಉಲ್ಲೇಖಿಸಿದ ಬೆಳೆಗಾರರಿಗೆ ಮಾತ್ರ ಪರಿಹಾರ ನೀಡಲಾಗುತ್ತದೆ. ಕೃಷಿ ಇಲಾಖೆ ನೀಡಿರುವ ಅಂಕಿ ಅಂಶಗಳ ಪ್ರಕಾರ ಜಿಲ್ಲೆಯಲ್ಲಿ 13,931 ರೈತರನ್ನು ಫಲಾನುಭವಿಗಳನ್ನು ಗುರುತಿಸಲಾಗಿದೆ.</p>.<p>ಕೃಷಿ ಇಲಾಖೆಯ ಅಧಿಕಾರಿಗಳು ನೀಡಿರುವ ಅಂಕಿ ಅಂಶಗಳ ಪ್ರಕಾರ, ಒಟ್ಟು ಫಲಾನುಭವಿಗಳಲ್ಲಿ 13,001 ಮಂದಿಯ ಬ್ಯಾಂಕ್ ಖಾತೆಗೆ ತಲಾ ₹5,000 ದಂತೆ ಹಣ ಜಮೆ ಮಾಡಲಾಗಿದೆ.</p>.<p>13,054ರಷ್ಟು ರೈತರ ವಿವರಗಳನ್ನು ಪರಿಹಾರ ಧನ ಪಾವತಿಗಾಗಿ ಕಳುಹಿಸಲಾಗಿತ್ತು. ಈ ಪೈಕಿ 13,001 ರೈತರಿಗೆ ಪಾವತಿಯಾಗಿದೆ. ಉಳಿದವರದ್ದು ತಾಂತ್ರಿಕ ಕಾರಣದಿಂದಾಗಿ ಪಾವತಿಯಾಗಿಲ್ಲ ಎಂದು ಅಧಿಕಾರಿಗಳು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p class="Subhead">ಆಧಾರ್ ಜೋಡಣೆಯಾಗಿಲ್ಲ: ‘ಒಟ್ಟು ಫಲಾನುಭವಿಗಳ ಪೈಕಿ 577 ರೈತರ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆ ಜೋಡಣೆಯಾಗಿಲ್ಲ. 238 ರೈತರ ಖಾತೆಗೆ ಆಧಾರ್ ಜೋಡಣೆಯಾಗಿದ್ದರೂ, ಸಕ್ರಿಯವಾಗಿಲ್ಲ. 62 ಮಂದಿಯ ಆಧಾರ್ ದೃಢೀಕರಣ ಪ್ರಕ್ರಿಯೆ ತಿರಸ್ಕೃತವಾಗಿದೆ. ಈ ಕಾರಣಗಳಿಂದಾಗಿ ಪರಿಹಾರ ಧನ ಪಾವತಿಯಾಗಿಲ್ಲ. ಸಮಸ್ಯೆ ಬಗೆಹರಿದ ತಕ್ಷಣ ಅವರಿಗೂ ಹಣ ಬರಲಿದೆ’ ಎಂದು ಅವರು ಮಾಹಿತಿ ನೀಡಿದರು.</p>.<p class="Subhead">‘ಬೆಳೆ ಸಮೀಕ್ಷೆ ನಡೆಸಿ ಫಲಾನುಭವಿಗಳನ್ನು ಗುರುತಿಸಲಾಗಿದ್ದು, ₹6.50 ಕೋಟಿಯಷ್ಟು ಪರಿಹಾರ ಧನ ಪಾವತಿ ಮಾಡಲಾಗಿದೆ’ ಎಂದು ಜಂಟಿ ಕೃಷಿ ನಿರ್ದೇಶಕಿ ಎಚ್.ಟಿ.ಚಂದ್ರಕಲಾ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p class="Subhead">ಸಮೀಕ್ಷೆಗೆ ಆಕ್ಷೇಪ: ಫಲಾನುಭವಿಗಳನ್ನು ಗುರುತಿಸುವುದಕ್ಕಾಗಿ ನಡೆಸಲಾದ ಬೆಳೆ ಸಮೀಕ್ಷೆಯನ್ನು ಸರಿಯಾಗಿ ಮಾಡಿಲ್ಲ ಎಂಬ ಆರೋಪವೂ ಕೇಳಿ ಬಂದಿದೆ.</p>.<p class="Subhead">ಹನೂರು ಭಾಗದಲ್ಲಿ ಕೆಲವು ರೈತರು ಈ ಆರೋಪ ಮಾಡಿದ್ದು, ‘ಸಮೀಕ್ಷೆಗೆ ಬಂದ ಸಿಬ್ಬಂದಿ ಆ್ಯಪ್ನಲ್ಲಿ ಕೃಷಿಯೇತರ ಭೂಮಿ ಎಂದು ನಮೂದಿಸುವುದರಿಂದ ಪರಿಹಾರದಿಂದ ವಂಚಿತರಾಗಿದ್ದೇವೆ’ ಎಂದು ಬೆಳೆಗಾರರು ಅಳಲು ತೋಡಿಕೊಂಡಿದ್ದಾರೆ.</p>.<p class="Briefhead">ಹನೂರು ತಾಲ್ಲೂಕಿನಲ್ಲಿ ಹೆಚ್ಚು ಫಲಾನುಭವಿಗಳು</p>.<p class="Subhead">ಜಿಲ್ಲೆಯಲ್ಲಿ ಹನೂರು ತಾಲ್ಲೂಕಿನಲ್ಲಿ ಹೆಚ್ಚಿನ ರೈತರು ಮೆಕ್ಕೆ ಜೋಳ ಬೆಳೆಯುತ್ತಾರೆ. ಫಲಾನುಭವಿಗಳ ಸಂಖ್ಯೆ ಅಲ್ಲಿಯೇ ಹೆಚ್ಚಿದೆ. ಅಲ್ಲಿ 6,569 ಮಂದಿ ಫಲಾನುಭವಿಗಳನ್ನು ಗುರುತಿಸಲಾಗಿದ್ದು, ಈ ಪೈಕಿ 6,062 ಮಂದಿಗೆ ಪರಿಹಾರ ದೊರಕಿದೆ.</p>.<p class="Subhead">ಗುಂಡ್ಲುಪೇಟೆ ಎರಡನೇ ಸ್ಥಾನದಲ್ಲಿದೆ. ಪರಿಹಾರ ನೀಡಲು ಗುರುತಿಸಲಾದ 2,633 ರೈತರ ಪೈಕಿ 2,488 ಬೆಳೆಗಾರರ ಖಾತೆಗೆ ಹಣ ಜಮಾವಣೆ ಆಗಿದೆ. ನಂತರದ ಸ್ಥಾನದಲ್ಲಿ ಚಾಮರಾಜನಗರ, ಕೊಳ್ಳೇಗಾಲ ಮತ್ತು ಯಳಂದೂರು ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>