ಶಾಲೆಯಲ್ಲಿ 1ರಿಂದ 7ನೇ ತರಗತಿಯಲ್ಲಿ ಒಟ್ಟು 35 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಮಧ್ಯಾಹ್ನದ ಬಿಸಿಯೂಟಕ್ಕೆ ಹುರುಳಿ ಮೊಳಕೆ ಕಾಳಿನ ಸಾಂಬರ್ ತಯಾರಿಸಿದ್ದು, ಅದನ್ನು ತಿಂದ ಮಕ್ಕಳ ಪೈಕಿ 14 ಮಂದಿಗೆ ವಾಂತಿ ಕಾಣಿಸಿಕೊಂಡಿದೆ. ಅವರನ್ನು ಬೊಮ್ಮನಹಳ್ಳಿ ಆಸ್ಪತ್ರೆಗೆ ದಾಖಲಿಸಿದ್ದು, ಚೇತರಿಸಿಕೊಂಡಿದ್ದಾರೆ. ಉಳಿದ 17 ವಿದ್ಯಾರ್ಥಿಗಳಿಗೆ ಮಾತ್ರೆ ನೀಡಿ ಮನೆಗೆ ಕಳುಹಿಸಲಾಗಿದೆ. ನಂತರ ಪೋಷಕರ ಒತ್ತಾಯದ ಮೇರೆಗೆ ಅಸ್ವಸ್ಥಗೊಂಡಿದ್ದ 14 ಹಾಗೂ ಮನೆಗೆ ತೆರಳಿದ್ದ 17 ವಿದ್ಯಾರ್ಥಿಗಳನ್ನು ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಯಿತು. ಉಳಿದ ನಾಲ್ವರು ವಿದ್ಯಾರ್ಥಿಗಳ ಪೋಷಕರು, ತಮ್ಮ ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆಗೆ ಕಳುಹಿಸದೆ ಮನೆಯಲ್ಲಿಯೇ ಇರಿಸಿಕೊಂಡಿದ್ದಾರೆ.