ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ರಕ್ಷಣೆಯಿಲ್ಲದಂತಾಗಿದೆ. ಶಾಲೆಗೆ ಜಾಗ ನೀಡಿದ ವ್ಯಕ್ತಿ ಜಾಗ ತನ್ನದೆಂದು ಹೇಳಿ ಶಾಲಾ ಅವರಣದಲ್ಲಿ ಶೆಡ್ ನಿರ್ಮಿಸಿದ್ದಾರೆ. ಇದರಿಂದ ಮಕ್ಕಳ ಕಲಿಕೆಗೆ ತೊಂದರೆಯಾಗುವುದರ ಜತೆಗೆ ಮಕ್ಕಳಿಗೆ ರಕ್ಷಣೆಯಿಲ್ಲದಂತಾಗಿದೆ. ಇದರಿಂದ ಪೋಷಕರಲ್ಲಿ ಆತಂಕ ಮನೆ ಮಾಡಿದ್ದು ಶಾಲೆಯಲ್ಲಿ ಮಕ್ಕಳಿಗೆ ರಕ್ಷಣೆಯ ವ್ಯವಸ್ಥೆ ಮಾಡುವವರೆಗೆ ಎಂದು ಪೋಷಕರು ಕಳೆದ ಹತ್ತು ದಿನಗಳಿಂದ ಮಕ್ಕಳನ್ನು ಶಾಲೆಗೆ ಕಳುಹಿಸಿರಲಿಲ್ಲ.