<p><strong>ಚಾಮರಾಜನಗರ:</strong> ಸಮೀಪದ ಯಡಬೆಟ್ಟದಲ್ಲಿರುವ ವೈದ್ಯಕೀಯ ಕಾಲೇಜಿನ ಕೋವಿಡ್–19 ಪ್ರಯೋಗಾಲಯ ತಾತ್ಕಾಲಿಕವಾಗಿ ಸ್ಥಗಿತಗೊಂಡಿರುವ ಕಾರಣ, ಬೆಂಗಳೂರಿಗೆ ಕಳುಹಿಸಲಾಗಿರುವ 1,684 ಗಂಟಲ ದ್ರವ ಮಾದರಿಗಳ ವರದಿ ಇನ್ನೂ ಬಂದಿಲ್ಲ.</p>.<p>ಪ್ರಯೋಗಾಲಯದ ತಂತ್ರಜ್ಞೆಯೊಬ್ಬರು ಕೋವಿಡ್–19ಗೆ ತುತ್ತಾಗಿರುವುದರಿಂದ ಪ್ರಯೋಗಾಲಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಅವರ ಪ್ರಾಥಮಿಕ ಸಂಪರ್ಕಿತ ಆರು ಸಹೋದ್ಯೋಗಿಗಳು ಹೋಮ್ ಕ್ವಾರಂಟೈನ್ ನಲ್ಲಿರುವುದರಿಂದ ಪ್ರಯೋಗಾಲಯ ಮತ್ತೆ ಕಾರ್ಯಾರಂಭ ಮಾಡಿಲ್ಲ.</p>.<p>ಜಿಲ್ಲೆಯಲ್ಲಿ ಈಗ ಗಂಟಲ ದ್ರವ ಮಾದರಿ ಸಂಗ್ರಹ ದಿನೇ ದಿನೇ ಹೆಚ್ಚುತ್ತಿದ್ದು, 350ರಿಂದ 400 ಮಾದರಿಗಳನ್ನು ಸಂಗ್ರಹಿಸಲಾಗುತ್ತಿದೆ. ಎಲ್ಲವನ್ನೂ ಬೆಂಗಳೂರಿಗೆ ಕಳುಹಿಸಲಾಗುತ್ತಿತ್ತು. ಮೂರು ದಿನಗಳಿಂದ ಅಲ್ಲಿಯ ವರದಿ ಬಂದಿಲ್ಲ.</p>.<p>ಈಗಾಗಲೇ ಸೋಂಕು ದೃಢಪಟ್ಟ ವ್ಯಕ್ತಿಗಳ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರು, ಕಂಟೈನ್ಮೆಂಟ್ ವಲಯದ ನಿವಾಸಿಗಳು ಸೇರಿದಂತೆ ಹಲವರ ಗಂಟಲ ದ್ರವಗಳನ್ನು ಸಂಗ್ರಹಿಸಲಾಗಿದೆ.</p>.<p>ನಿರೀಕ್ಷಿತ ಸಮಯಕ್ಕೆ ವರದಿ ಬಾರದೇ ಇರುವುದರಿಂದ ಜಿಲ್ಲಾಡಳಿತ ಇಕ್ಕಟ್ಟಿಗೆ ಸಿಲುಕಿದೆ. ಮೂರು ದಿನಗಳಿಂದ ಯಾರಿಗೆಲ್ಲ ಸೋಂಕು ತಗುಲಿದೆ ಎಂಬುದು ಗೊತ್ತಾಗುತ್ತಿಲ್ಲ. ಇದರಿಂದಾಗಿ ಸೋಂಕಿತರ ಸಂಪರ್ಕಿತರನ್ನು ಪತ್ತೆ ಮಾಡುವುದಕ್ಕೂ ಆಗುತ್ತಿಲ್ಲ.</p>.<p>ಗಂಟಲ ದ್ರವದ ಮಾದರಿಯನ್ನು ಪರೀಕ್ಷೆಗೆ ನೀಡಿರುವ ಜನರು ಮೂರು ದಿನಗಳಿಂದ ಹೊರಗಡೆ ಓಡಾಡುವ ಸಾಧ್ಯತೆ ಇದ್ದು, ಒಂದು ವೇಳೆ ಅವರಿಗೆ ಸೋಂಕು ತಗುಲಿದರೆ, ಇತರ ಕಡೆಗಳಿಗೂ ಹರಡಲಿದೆ ಎಂಬ ಆತಂಕದಲ್ಲಿ ಅಧಿಕಾರಿಗಳು ಹಾಗೂ ವೈದ್ಯರು ಇದ್ದಾರೆ.</p>.<p class="Subhead"><strong>392 ಜನರ ಮೇಲೆ ನಿಗಾ:</strong> ಈ ಮಧ್ಯೆ, ಸದ್ಯ ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 32 ವ್ಯಕ್ತಿಗಳ 186 ಪ್ರಾಥಮಿಕ ಸಂಪರ್ಕಿತರು ಹಾಗೂ 206 ದ್ವಿತೀಯ ಸಂಪರ್ಕಿತರನ್ನು ಗುರುತಿಸಲಾಗಿದ್ದು, ಒಟ್ಟು 392 ಮಂದಿ ಮನೆ ಕ್ವಾರಂಟೈನ್ನಲ್ಲಿ ಇದ್ದಾರೆ. ಜಿಲ್ಲಾಡಳಿತ ಅವರ ಆರೋಗ್ಯದ ಮೇಲೆ ನಿಗಾ ಇಟ್ಟಿದೆ.</p>.<p class="Briefhead"><strong>ಐಸಿಯುನಿಂದ ವಾರ್ಡ್ಗೆ ಸ್ಥಳಾಂತರ</strong></p>.<p>ಈ ಮಧ್ಯೆ, ನಗರದ ಕೋವಿಡ್–19 ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೂವರ ಪೈಕಿ ಒಬ್ಬರನ್ನು ಮಂಗಳವಾರ ಸಾಮಾನ್ಯ ವಾರ್ಡ್ಗೆ ಸ್ಥಳಾಂತರಿಸಲಾಗಿದೆ.</p>.<p>‘ಗುಂಡ್ಲುಪೇಟೆ ಮಹದೇವಪ್ರಸಾದ್ ನಗರದ ನಿವಾಸಿ ರೋಗಿ ಸಂಖ್ಯೆ 8,311 ಅವರ ಪ್ರಾಥಮಿಕ ಸಂಪರ್ಕಿತರಲ್ಲಿ ಒಬ್ಬರಾದ 50 ವರ್ಷದ ವ್ಯಕ್ತಿಯ ಆರೋಗ್ಯ ಸುಧಾರಿಸಿರುವುದರಿಂದ ಅವರನ್ನು ವಾರ್ಡ್ಗೆ ಸ್ಥಳಾಂತರಿಸಲಾಗಿದೆ’ ಎಂದು ಜಿಲ್ಲಾ ಸರ್ಜನ್ ಡಾ.ಕೃಷ್ಣಪ್ರಸಾದ್ ಅವರು ‘ಪ್ರಜಾವಾಣಿ’ಗೆ ತಿಳಿಸಿದೆ.</p>.<p>ಮಹದೇವಪ್ರಸಾದ್ ನಗರ ನಿವಾಸಿ 45 ವರ್ಷ ಮಹಿಳೆ ಹಾಗೂ 70 ವರ್ಷದ ವೃದ್ಧರೊಬ್ಬರು ಇನ್ನೂ ಐಸಿಯುನಲ್ಲಿ ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ಸಮೀಪದ ಯಡಬೆಟ್ಟದಲ್ಲಿರುವ ವೈದ್ಯಕೀಯ ಕಾಲೇಜಿನ ಕೋವಿಡ್–19 ಪ್ರಯೋಗಾಲಯ ತಾತ್ಕಾಲಿಕವಾಗಿ ಸ್ಥಗಿತಗೊಂಡಿರುವ ಕಾರಣ, ಬೆಂಗಳೂರಿಗೆ ಕಳುಹಿಸಲಾಗಿರುವ 1,684 ಗಂಟಲ ದ್ರವ ಮಾದರಿಗಳ ವರದಿ ಇನ್ನೂ ಬಂದಿಲ್ಲ.</p>.<p>ಪ್ರಯೋಗಾಲಯದ ತಂತ್ರಜ್ಞೆಯೊಬ್ಬರು ಕೋವಿಡ್–19ಗೆ ತುತ್ತಾಗಿರುವುದರಿಂದ ಪ್ರಯೋಗಾಲಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಅವರ ಪ್ರಾಥಮಿಕ ಸಂಪರ್ಕಿತ ಆರು ಸಹೋದ್ಯೋಗಿಗಳು ಹೋಮ್ ಕ್ವಾರಂಟೈನ್ ನಲ್ಲಿರುವುದರಿಂದ ಪ್ರಯೋಗಾಲಯ ಮತ್ತೆ ಕಾರ್ಯಾರಂಭ ಮಾಡಿಲ್ಲ.</p>.<p>ಜಿಲ್ಲೆಯಲ್ಲಿ ಈಗ ಗಂಟಲ ದ್ರವ ಮಾದರಿ ಸಂಗ್ರಹ ದಿನೇ ದಿನೇ ಹೆಚ್ಚುತ್ತಿದ್ದು, 350ರಿಂದ 400 ಮಾದರಿಗಳನ್ನು ಸಂಗ್ರಹಿಸಲಾಗುತ್ತಿದೆ. ಎಲ್ಲವನ್ನೂ ಬೆಂಗಳೂರಿಗೆ ಕಳುಹಿಸಲಾಗುತ್ತಿತ್ತು. ಮೂರು ದಿನಗಳಿಂದ ಅಲ್ಲಿಯ ವರದಿ ಬಂದಿಲ್ಲ.</p>.<p>ಈಗಾಗಲೇ ಸೋಂಕು ದೃಢಪಟ್ಟ ವ್ಯಕ್ತಿಗಳ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರು, ಕಂಟೈನ್ಮೆಂಟ್ ವಲಯದ ನಿವಾಸಿಗಳು ಸೇರಿದಂತೆ ಹಲವರ ಗಂಟಲ ದ್ರವಗಳನ್ನು ಸಂಗ್ರಹಿಸಲಾಗಿದೆ.</p>.<p>ನಿರೀಕ್ಷಿತ ಸಮಯಕ್ಕೆ ವರದಿ ಬಾರದೇ ಇರುವುದರಿಂದ ಜಿಲ್ಲಾಡಳಿತ ಇಕ್ಕಟ್ಟಿಗೆ ಸಿಲುಕಿದೆ. ಮೂರು ದಿನಗಳಿಂದ ಯಾರಿಗೆಲ್ಲ ಸೋಂಕು ತಗುಲಿದೆ ಎಂಬುದು ಗೊತ್ತಾಗುತ್ತಿಲ್ಲ. ಇದರಿಂದಾಗಿ ಸೋಂಕಿತರ ಸಂಪರ್ಕಿತರನ್ನು ಪತ್ತೆ ಮಾಡುವುದಕ್ಕೂ ಆಗುತ್ತಿಲ್ಲ.</p>.<p>ಗಂಟಲ ದ್ರವದ ಮಾದರಿಯನ್ನು ಪರೀಕ್ಷೆಗೆ ನೀಡಿರುವ ಜನರು ಮೂರು ದಿನಗಳಿಂದ ಹೊರಗಡೆ ಓಡಾಡುವ ಸಾಧ್ಯತೆ ಇದ್ದು, ಒಂದು ವೇಳೆ ಅವರಿಗೆ ಸೋಂಕು ತಗುಲಿದರೆ, ಇತರ ಕಡೆಗಳಿಗೂ ಹರಡಲಿದೆ ಎಂಬ ಆತಂಕದಲ್ಲಿ ಅಧಿಕಾರಿಗಳು ಹಾಗೂ ವೈದ್ಯರು ಇದ್ದಾರೆ.</p>.<p class="Subhead"><strong>392 ಜನರ ಮೇಲೆ ನಿಗಾ:</strong> ಈ ಮಧ್ಯೆ, ಸದ್ಯ ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 32 ವ್ಯಕ್ತಿಗಳ 186 ಪ್ರಾಥಮಿಕ ಸಂಪರ್ಕಿತರು ಹಾಗೂ 206 ದ್ವಿತೀಯ ಸಂಪರ್ಕಿತರನ್ನು ಗುರುತಿಸಲಾಗಿದ್ದು, ಒಟ್ಟು 392 ಮಂದಿ ಮನೆ ಕ್ವಾರಂಟೈನ್ನಲ್ಲಿ ಇದ್ದಾರೆ. ಜಿಲ್ಲಾಡಳಿತ ಅವರ ಆರೋಗ್ಯದ ಮೇಲೆ ನಿಗಾ ಇಟ್ಟಿದೆ.</p>.<p class="Briefhead"><strong>ಐಸಿಯುನಿಂದ ವಾರ್ಡ್ಗೆ ಸ್ಥಳಾಂತರ</strong></p>.<p>ಈ ಮಧ್ಯೆ, ನಗರದ ಕೋವಿಡ್–19 ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೂವರ ಪೈಕಿ ಒಬ್ಬರನ್ನು ಮಂಗಳವಾರ ಸಾಮಾನ್ಯ ವಾರ್ಡ್ಗೆ ಸ್ಥಳಾಂತರಿಸಲಾಗಿದೆ.</p>.<p>‘ಗುಂಡ್ಲುಪೇಟೆ ಮಹದೇವಪ್ರಸಾದ್ ನಗರದ ನಿವಾಸಿ ರೋಗಿ ಸಂಖ್ಯೆ 8,311 ಅವರ ಪ್ರಾಥಮಿಕ ಸಂಪರ್ಕಿತರಲ್ಲಿ ಒಬ್ಬರಾದ 50 ವರ್ಷದ ವ್ಯಕ್ತಿಯ ಆರೋಗ್ಯ ಸುಧಾರಿಸಿರುವುದರಿಂದ ಅವರನ್ನು ವಾರ್ಡ್ಗೆ ಸ್ಥಳಾಂತರಿಸಲಾಗಿದೆ’ ಎಂದು ಜಿಲ್ಲಾ ಸರ್ಜನ್ ಡಾ.ಕೃಷ್ಣಪ್ರಸಾದ್ ಅವರು ‘ಪ್ರಜಾವಾಣಿ’ಗೆ ತಿಳಿಸಿದೆ.</p>.<p>ಮಹದೇವಪ್ರಸಾದ್ ನಗರ ನಿವಾಸಿ 45 ವರ್ಷ ಮಹಿಳೆ ಹಾಗೂ 70 ವರ್ಷದ ವೃದ್ಧರೊಬ್ಬರು ಇನ್ನೂ ಐಸಿಯುನಲ್ಲಿ ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>