<p><strong>ಚಾಮರಾಜನಗರ: </strong>ಕೋವಿಡ್–19 ತಡೆಗೆ ಹೇರಲಾಗಿದ್ದ ಲಾಕ್ಡೌನ್ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಜಿಲ್ಲೆಯ 1,817 ಮಂದಿ ನೇಕಾರರಿಗೆ ‘ನೇಕಾರ ಸಮ್ಮಾನ್’ ಯೋಜನೆ ಅಡಿಯಲ್ಲಿ ಸಹಾಯ ಧನ ಲಭಿಸಿದೆ.</p>.<p>ತಲಾ ₹2,000ದಂತೆ 1,817 ನೇಕಾರರ ಬ್ಯಾಂಕ್ ಖಾತೆಗಳಿಗೆ ಒಟ್ಟು ₹36.34 ಲಕ್ಷ ಜಮೆ ಆಗಿದೆ. ಉಳಿದವರಿಗೂ ಶೀಘ್ರವಾಗಿ ಬರಲಿದೆ ಎಂದು ಹೇಳುತ್ತಾರೆ ಕೈಮಗ್ಗ ಮತ್ತು ಜವಳಿ ಇಲಾಖೆಯ ಅಧಿಕಾರಿಗಳು.</p>.<p>ಲಾಕ್ಡೌನ್ನಿಂದ ಅರ್ಥಿಕವಾಗಿ ಕಷ್ಟ ಅನುಭವಿಸುತ್ತಿದ್ದ ಕೈಮಗ್ಗಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ನೇಕಾರರು ಮತ್ತು ಕೈಮಗ್ಗ ಪೂರ್ವ ಚಟುವಟಿಕೆಗಳಲ್ಲಿ ನಿರತರಾದವರಿಗೆ ಒಮ್ಮೆಗೆ ₹2,000 ಪರಿಹಾರ ಧನ ನೀಡುವ, ‘ನೇಕಾರ ಸಮ್ಮಾನ್’ ಯೋಜನೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಘೋಷಿಸಿದ್ದರು. ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿತ್ತು.</p>.<p>ಇಲಾಖೆಯು4ನೇ ರಾಷ್ಟ್ರೀಯ ಕೈಮಗ್ಗ ಗಣತಿಯಲ್ಲಿ ನೋಂದಣಿ ಮಾಡಿಕೊಂಡಿರುವ ಕೈಮಗ್ಗ ನೇಕಾರರಿಂದ ಜುಲೈ ತಿಂಗಳಲ್ಲಿ ಅರ್ಜಿಗಳನ್ನು ಆಹ್ವಾನಿಸಿತ್ತು.</p>.<p>ಜಿಲ್ಲೆಯಲ್ಲಿ 2,272 ಮಂದಿ ನೇಕಾರರು ಇಲಾಖೆಯಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ. ಪರಿಹಾರ ಧನಕ್ಕಾಗಿ 1,911 ಮಂದಿ ಅರ್ಜಿ ಸಲ್ಲಿಸಿದ್ದರು. ಈ ಪೈಕಿ 1,817 ಮಂದಿಯ ಖಾತೆಗೆ ₹2,000 ಜಮೆ ಆಗಿದೆ.</p>.<p>‘1,911 ಅರ್ಜಿಗಳಲ್ಲಿ ಆಧಾರ್, ಬ್ಯಾಂಕ್ ಖಾತೆ ಸಮಸ್ಯೆಗಳಿಂದ 11 ಅರ್ಜಿಗಳು ತಿರಸ್ಕೃತವಾಗಿತ್ತು, ಅರ್ಜಿದಾರರ ಪೈಕಿ ಐವರು ಮೃತಪಟ್ಟಿದ್ದರು. ಉಳಿದ ಅರ್ಜಿಗಳು ಅಂಗೀಕಾರವಾಗಿದ್ದು, ಶೀಘ್ರದಲ್ಲಿ ಆ ನೇಕಾರರ ಖಾತೆಗೂ ಪರಿಹಾರ ಧನ ಜಮೆ ಆಗಲಿದೆ’ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕ ಎ.ಮಂಜುನಾಥ್ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಇಲಾಖೆಯಲ್ಲಿ ನೋಂದಣಿ ಮಾಡಿಕೊಂಡಿರುವ ನೇಕಾರರಲ್ಲಿ 360ಕ್ಕೂ ಹೆಚ್ಚು ಮಂದಿ ಜಿಲ್ಲೆಯಲ್ಲಿ ಇಲ್ಲ. ತಮಿಳುನಾಡಿನ ಸತ್ಯಮಂಗಲ ಹಾಗೂ ಇತರ ಕಡೆಗಳಲ್ಲಿ ವಾಸವಿದ್ದಾರೆ. ಹಾಗಾಗಿ ಅವರು ಪರಿಹಾರಕ್ಕಾಗಿ ಅವರು ಅರ್ಜಿ ಸಲ್ಲಿಸಿಲ್ಲ’ ಎಂದು ಅವರು ಮಾಹಿತಿ ನೀಡಿದರು.</p>.<p class="Briefhead"><strong>ಸಂಕಷ್ಟ ಅನುಭವಿಸಿದ್ದ ನೇಕಾರರು</strong></p>.<p>ಜಿಲ್ಲೆಯಲ್ಲಿ468 ಕುಟುಂಬಗಳು ನೇಕಾರಿಕೆಯನ್ನು ನಂಬಿಕೊಂಡಿವೆ. ಕೊಳ್ಳೇಗಾಲ, ಹನೂರು ಭಾಗಗಳಲ್ಲಿ ಕೈಮಗ್ಗ ನೇಕಾರರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಬಹುತೇಕ ನೇಕಾರರು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ತಮಿಳುನಾಡನ್ನೇ ನಂಬಿದ್ದಾರೆ.</p>.<p>ಲಾಕ್ಡೌನ್ ಕಾರಣದಿಂದ ಎರಡು ತಿಂಗಳಿಗೂ ಹೆಚ್ಚು ಕಾಲ ನೇಕಾರರಿಗೆ ಸಂಪಾದನೆ ಇರಲಿಲ್ಲ. ಅಂತರರಾಜ್ಯ ಗಡಿಗಳು ಬಂದ್ ಆಗಿದ್ದರಿಂದ ಹಾಗೂ ವಾಹನಗಳ ಸಂಚಾರಕ್ಕೆ ನಿರ್ಬಂಧ ಇದ್ದುದರಿಂದ ತಯಾರಿಸಿದ್ದ ಸೀರೆಗಳು ಮಾರಾಟವಾಗಿರಲಿಲ್ಲ. ಇದರಿಂದ ತೊಂದರೆಗೆ ಸಿಲುಕಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ: </strong>ಕೋವಿಡ್–19 ತಡೆಗೆ ಹೇರಲಾಗಿದ್ದ ಲಾಕ್ಡೌನ್ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಜಿಲ್ಲೆಯ 1,817 ಮಂದಿ ನೇಕಾರರಿಗೆ ‘ನೇಕಾರ ಸಮ್ಮಾನ್’ ಯೋಜನೆ ಅಡಿಯಲ್ಲಿ ಸಹಾಯ ಧನ ಲಭಿಸಿದೆ.</p>.<p>ತಲಾ ₹2,000ದಂತೆ 1,817 ನೇಕಾರರ ಬ್ಯಾಂಕ್ ಖಾತೆಗಳಿಗೆ ಒಟ್ಟು ₹36.34 ಲಕ್ಷ ಜಮೆ ಆಗಿದೆ. ಉಳಿದವರಿಗೂ ಶೀಘ್ರವಾಗಿ ಬರಲಿದೆ ಎಂದು ಹೇಳುತ್ತಾರೆ ಕೈಮಗ್ಗ ಮತ್ತು ಜವಳಿ ಇಲಾಖೆಯ ಅಧಿಕಾರಿಗಳು.</p>.<p>ಲಾಕ್ಡೌನ್ನಿಂದ ಅರ್ಥಿಕವಾಗಿ ಕಷ್ಟ ಅನುಭವಿಸುತ್ತಿದ್ದ ಕೈಮಗ್ಗಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ನೇಕಾರರು ಮತ್ತು ಕೈಮಗ್ಗ ಪೂರ್ವ ಚಟುವಟಿಕೆಗಳಲ್ಲಿ ನಿರತರಾದವರಿಗೆ ಒಮ್ಮೆಗೆ ₹2,000 ಪರಿಹಾರ ಧನ ನೀಡುವ, ‘ನೇಕಾರ ಸಮ್ಮಾನ್’ ಯೋಜನೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಘೋಷಿಸಿದ್ದರು. ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿತ್ತು.</p>.<p>ಇಲಾಖೆಯು4ನೇ ರಾಷ್ಟ್ರೀಯ ಕೈಮಗ್ಗ ಗಣತಿಯಲ್ಲಿ ನೋಂದಣಿ ಮಾಡಿಕೊಂಡಿರುವ ಕೈಮಗ್ಗ ನೇಕಾರರಿಂದ ಜುಲೈ ತಿಂಗಳಲ್ಲಿ ಅರ್ಜಿಗಳನ್ನು ಆಹ್ವಾನಿಸಿತ್ತು.</p>.<p>ಜಿಲ್ಲೆಯಲ್ಲಿ 2,272 ಮಂದಿ ನೇಕಾರರು ಇಲಾಖೆಯಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ. ಪರಿಹಾರ ಧನಕ್ಕಾಗಿ 1,911 ಮಂದಿ ಅರ್ಜಿ ಸಲ್ಲಿಸಿದ್ದರು. ಈ ಪೈಕಿ 1,817 ಮಂದಿಯ ಖಾತೆಗೆ ₹2,000 ಜಮೆ ಆಗಿದೆ.</p>.<p>‘1,911 ಅರ್ಜಿಗಳಲ್ಲಿ ಆಧಾರ್, ಬ್ಯಾಂಕ್ ಖಾತೆ ಸಮಸ್ಯೆಗಳಿಂದ 11 ಅರ್ಜಿಗಳು ತಿರಸ್ಕೃತವಾಗಿತ್ತು, ಅರ್ಜಿದಾರರ ಪೈಕಿ ಐವರು ಮೃತಪಟ್ಟಿದ್ದರು. ಉಳಿದ ಅರ್ಜಿಗಳು ಅಂಗೀಕಾರವಾಗಿದ್ದು, ಶೀಘ್ರದಲ್ಲಿ ಆ ನೇಕಾರರ ಖಾತೆಗೂ ಪರಿಹಾರ ಧನ ಜಮೆ ಆಗಲಿದೆ’ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕ ಎ.ಮಂಜುನಾಥ್ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಇಲಾಖೆಯಲ್ಲಿ ನೋಂದಣಿ ಮಾಡಿಕೊಂಡಿರುವ ನೇಕಾರರಲ್ಲಿ 360ಕ್ಕೂ ಹೆಚ್ಚು ಮಂದಿ ಜಿಲ್ಲೆಯಲ್ಲಿ ಇಲ್ಲ. ತಮಿಳುನಾಡಿನ ಸತ್ಯಮಂಗಲ ಹಾಗೂ ಇತರ ಕಡೆಗಳಲ್ಲಿ ವಾಸವಿದ್ದಾರೆ. ಹಾಗಾಗಿ ಅವರು ಪರಿಹಾರಕ್ಕಾಗಿ ಅವರು ಅರ್ಜಿ ಸಲ್ಲಿಸಿಲ್ಲ’ ಎಂದು ಅವರು ಮಾಹಿತಿ ನೀಡಿದರು.</p>.<p class="Briefhead"><strong>ಸಂಕಷ್ಟ ಅನುಭವಿಸಿದ್ದ ನೇಕಾರರು</strong></p>.<p>ಜಿಲ್ಲೆಯಲ್ಲಿ468 ಕುಟುಂಬಗಳು ನೇಕಾರಿಕೆಯನ್ನು ನಂಬಿಕೊಂಡಿವೆ. ಕೊಳ್ಳೇಗಾಲ, ಹನೂರು ಭಾಗಗಳಲ್ಲಿ ಕೈಮಗ್ಗ ನೇಕಾರರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಬಹುತೇಕ ನೇಕಾರರು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ತಮಿಳುನಾಡನ್ನೇ ನಂಬಿದ್ದಾರೆ.</p>.<p>ಲಾಕ್ಡೌನ್ ಕಾರಣದಿಂದ ಎರಡು ತಿಂಗಳಿಗೂ ಹೆಚ್ಚು ಕಾಲ ನೇಕಾರರಿಗೆ ಸಂಪಾದನೆ ಇರಲಿಲ್ಲ. ಅಂತರರಾಜ್ಯ ಗಡಿಗಳು ಬಂದ್ ಆಗಿದ್ದರಿಂದ ಹಾಗೂ ವಾಹನಗಳ ಸಂಚಾರಕ್ಕೆ ನಿರ್ಬಂಧ ಇದ್ದುದರಿಂದ ತಯಾರಿಸಿದ್ದ ಸೀರೆಗಳು ಮಾರಾಟವಾಗಿರಲಿಲ್ಲ. ಇದರಿಂದ ತೊಂದರೆಗೆ ಸಿಲುಕಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>