ಸಾರ್ವಜನಿಕರ ಸುರಕ್ಷತೆ ಮತ್ತು ಆರೋಗ್ಯದ ಹಿತದೃಷ್ಠಿಯಿಂದ ಕೋರೊನಾ ವೈರಸ್ ಎರಡನೇ ಅಲೆ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಸಿ.ಆರ್.ಪಿ.ಸಿ 1973 ಕಲಂ 144(1) ರಡಿ ಮೇ 10ರ ಬೆಳಿಗ್ಗೆ 6 ಗಂಟೆಯಿಂದ ಮೇ 24ರ ಬೇಳಿಗ್ಗೆ 6 ಗಂಟೆಯವರೆಗೆ ಜಿಲ್ಲಾದ್ಯಂತ ಕೋವಿಡ್-19 ಮುಂಜಾಗ್ರತಾ ಕ್ರಮವಾಗಿ ರಾಜ್ಯ ಸರ್ಕಾರ ಹೊರಡಿಸಿರುವ ಕಟ್ಟುನಿಟ್ಟಿನ ಲಾಕ್ಡೌನ್ ಜಾರಿಗೊಳಿಸಲಾಗಿದ್ದು, ಜನರು ಇದನ್ನು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ಆದೇಶಿಸಿದ್ದಾರೆ.