<p><strong>ಚಾಮರಾಜನಗರ</strong>: ನಾಲ್ಕು ವರ್ಷಗಳ ಹಿಂದೆ ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ ಮೃತಪಟ್ಟ 36 ಮಂದಿಯ ಕುಟುಂಬಗಳಿಗೆ ತಲಾ ₹ 25 ಲಕ್ಷ ಪರಿಹಾರ ಹಾಗೂ ಸರ್ಕಾರಿ ಉದ್ಯೋಗ ನೀಡದಿದ್ದರೆ ಚಾಮರಾಜನಗರ ಜಿಲ್ಲೆ ಬಂದ್ ಮಾಡುವುದಾಗಿ ಪ್ರಗತಿಪರ ಸಂಘಟನೆಗಳ ಒಕ್ಕೂಟ ಮಂಗಳವಾರ ಎಚ್ಚರಿಕೆ ನೀಡಿದೆ.</p>.<p>ಇಲ್ಲಿನ ಪ್ರವಾಸಿ ಮಂದಿರದಲ್ಲಿ ಪ್ರಗತಿಪರ, ದಲಿತ, ರೈತ ಹಾಗೂ ಕನ್ನಡಪರ ಸಂಘಟನೆಗಳ ಮುಖಂಡರ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಯಿತು.</p>.<p>‘ಬಂದ್ ಪೂರ್ವಭಾವಿಯಾಗಿ ಜೂನ್ 13ರಂದು ಸಾಂಕೇತಿಕವಾಗಿ ಪ್ರತಿಭಟಿಸಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮನವಿ ಸಲ್ಲಿಸಲಾಗುವುದು. ಕಾಲಮಿತಿಯಲ್ಲಿ ಈಡೇರಿಸದಿದ್ದರೆ ಜಿಲ್ಲೆ ಬಂದ್ ಮಾಡುವುದು ಅನಿವಾರ್ಯವಾಗಲಿದೆ’ ಎಂದು ಒಕ್ಕೂಟದ ಮುಖಂಡ ಸಿ.ಎಂ. ಕೃಷ್ಣಮೂರ್ತಿ ತಿಳಿಸಿದರು.</p>.<p>‘ಬೆಂಗಳೂರಿನಲ್ಲಿ ಆರ್ಸಿಬಿ ಸಂಭ್ರಮಾಚರಣೆ ವೇಳೆ ಮೃತಪಟ್ಟವರ ಕುಟುಂಬಗಳಿಗೆ ಹೆಚ್ಚು ಹಾಗೂ ಆಮ್ಲಜನಕ ದುರಂತದಲ್ಲಿ ಮೃತರಾದವರ ಕುಟುಂಬದವರಿಗೆ ಕಡಿಮೆ ಪ್ರಮಾಣದಲ್ಲಿ ಪರಿಹಾರ ನೀಡುತ್ತಿರುವ ನಿರ್ಧಾರ ಖಂಡನೀಯ. ಸಾವಿನಲ್ಲಿ ರಾಜಕೀಯ ಮಾಡದೆ ಏಕರೂಪ ಪರಿಹಾರ ಕೊಡಬೇಕು’ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ</strong>: ನಾಲ್ಕು ವರ್ಷಗಳ ಹಿಂದೆ ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ ಮೃತಪಟ್ಟ 36 ಮಂದಿಯ ಕುಟುಂಬಗಳಿಗೆ ತಲಾ ₹ 25 ಲಕ್ಷ ಪರಿಹಾರ ಹಾಗೂ ಸರ್ಕಾರಿ ಉದ್ಯೋಗ ನೀಡದಿದ್ದರೆ ಚಾಮರಾಜನಗರ ಜಿಲ್ಲೆ ಬಂದ್ ಮಾಡುವುದಾಗಿ ಪ್ರಗತಿಪರ ಸಂಘಟನೆಗಳ ಒಕ್ಕೂಟ ಮಂಗಳವಾರ ಎಚ್ಚರಿಕೆ ನೀಡಿದೆ.</p>.<p>ಇಲ್ಲಿನ ಪ್ರವಾಸಿ ಮಂದಿರದಲ್ಲಿ ಪ್ರಗತಿಪರ, ದಲಿತ, ರೈತ ಹಾಗೂ ಕನ್ನಡಪರ ಸಂಘಟನೆಗಳ ಮುಖಂಡರ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಯಿತು.</p>.<p>‘ಬಂದ್ ಪೂರ್ವಭಾವಿಯಾಗಿ ಜೂನ್ 13ರಂದು ಸಾಂಕೇತಿಕವಾಗಿ ಪ್ರತಿಭಟಿಸಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮನವಿ ಸಲ್ಲಿಸಲಾಗುವುದು. ಕಾಲಮಿತಿಯಲ್ಲಿ ಈಡೇರಿಸದಿದ್ದರೆ ಜಿಲ್ಲೆ ಬಂದ್ ಮಾಡುವುದು ಅನಿವಾರ್ಯವಾಗಲಿದೆ’ ಎಂದು ಒಕ್ಕೂಟದ ಮುಖಂಡ ಸಿ.ಎಂ. ಕೃಷ್ಣಮೂರ್ತಿ ತಿಳಿಸಿದರು.</p>.<p>‘ಬೆಂಗಳೂರಿನಲ್ಲಿ ಆರ್ಸಿಬಿ ಸಂಭ್ರಮಾಚರಣೆ ವೇಳೆ ಮೃತಪಟ್ಟವರ ಕುಟುಂಬಗಳಿಗೆ ಹೆಚ್ಚು ಹಾಗೂ ಆಮ್ಲಜನಕ ದುರಂತದಲ್ಲಿ ಮೃತರಾದವರ ಕುಟುಂಬದವರಿಗೆ ಕಡಿಮೆ ಪ್ರಮಾಣದಲ್ಲಿ ಪರಿಹಾರ ನೀಡುತ್ತಿರುವ ನಿರ್ಧಾರ ಖಂಡನೀಯ. ಸಾವಿನಲ್ಲಿ ರಾಜಕೀಯ ಮಾಡದೆ ಏಕರೂಪ ಪರಿಹಾರ ಕೊಡಬೇಕು’ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>