‘ಕಳೆದ 15 ವರ್ಷಗಳಿಂದ ಕಾವೇರಿ ಕುಡಿಯುವ ನೀರಿನ ಪೈಪ್ ಲೈನ್, ವಿದ್ಯುತ್, ದೂರವಾಣಿ ಕೇಬಲ್ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ರಸ್ತೆಯನ್ನು ಅಗೆದು ಹಾಳು ಮಾಡಲಾಯಿತು. ಕಾಮಗಾರಿಗಳು ಮುಗಿದ ಬಳಿಕ ಅಭಿವೃದ್ಧಿ ಪಡಿಸದೆ ಹಾಗೆಯೇ ಬಿಡಲಾಗಿದೆ. ಅಲ್ಲದೆ, ಈ ರಸ್ತೆ ಬದಿಯಲ್ಲಿರುವ ಕಂಬಗಳಲ್ಲಿ ವಿದ್ಯುತ್ ದೀಪಗಳು ಕೆಟ್ಟು ವರ್ಷಗಳಾಗಿವೆ’ ಎಂದು ಮಲೆ ಮಹದೇಶ್ವರ ಬೆಟ್ಟದ ಮೋಹನ್.ಎಸ್ ಹಾಗೂ ವಿಜಯ್ ಅಸಮಾಧಾನ ವ್ಯಕ್ತಪಡಿಸಿದರು.