ವಿಷಯ ತಿಳಿದ ತಕ್ಷಣ ತಾಲ್ಲೂಕು ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ನಾಗೇಶ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಗಂಗಾಧರ್, ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿಯ ಶಿವಮ್ಮ, ರಾಜೇಶ್ವರಿ ಸೇರಿದಂತೆ ಇತರರು ಗ್ರಾಮಕ್ಕೆ ಧಾವಿಸಿ ಬಾಲಕಿಯನ್ನು ನಗರದ ಸರ್ಕಾರಿ ಉಪವಿಭಾಗ ಆಸ್ಪತ್ರೆಗೆ ಕರೆ ತಂದು ಮತ್ತೊಮ್ಮೆ ಪರೀಕ್ಷೆ ನಡೆಸಿ ಕುಟುಂಬದವರಿಂದ ಮಾಹಿತಿ ಪಡೆದರು. ಆ ಬಳಿಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು.