ಇದಕ್ಕೂ ಮುನ್ನ ಸಂತೆಕಾಣೆ ನರ್ಸರಿಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಮಲೆಮಹದೇಶ್ವರ ವನ್ಯಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ವಿ.ಏಡುಕುಂಡಲು, ‘ಪ್ಲಾಸ್ಟಿಕ್ ವಸ್ತುಗಳ ಬಳಕೆಯಿಂದ ಮಾನವನಿಗೆ, ವನ್ಯ ಪ್ರಾಣಿಗಳಿಗೆ, ಪಕ್ಷಿಗಳಿಗೆ ತುಂಬಾ ಅನಾನುಕೂಲವಾಗಲಿದೆ. ಹೀಗಾಗಿ, ಪ್ಲಾಸ್ಟಿಕ್ ಬದಲಿಗೆ ಪರ್ಯಾಯ ವಸ್ತುಗಳನ್ನು ಬಳಸಬೇಕು’ ಎಂದು ಸೂಚಿಸಿದರು.