<p><strong>ಹನೂರು:</strong> ತಾಲ್ಲೂಕಿನ ಒಡೆಯರಪಾಳ್ಯ ಸಮೀಪ ವಿ.ಎಸ್.ದೊಡ್ಡಿ ಭಾಗ್ಯ ಎಂಬುವರ ಮನೆಯಲ್ಲಿ ನಿಧಿ ಆಸೆಗಾಗಿ ಗುಂಡಿ ತೆಗೆದಿರುವ ಪ್ರಕರಣ ಭಾನುವಾರ ರಾತ್ರಿ ಪೊಲೀಸರಿಂದ ಬೆಳಕಿಗೆ ಬಂದಿದ್ದು, ಅಸಾಮಿಗಳು ಪರಾರಿಯಾಗಿದ್ದಾರೆ.</p><p> ನಾಲ್ಕೈದು ವರ್ಷದ ಹಿಂದೆ ವಾಸ್ತು ಸರಿಯಿಲ್ಲ ಎಂದು ತಿಳಿದು ಭಾಗ್ಯ ಮನೆ ತೊರೆದು, ಬೆಂಗಳೂರಿನಲ್ಲಿ ತಳ್ಳು ಗಾಡಿಯಲ್ಲಿ ಮಜ್ಜಿಗೆ, ವ್ಯಾಪಾರ ಮಾಡುತ್ತಿದ್ದರು. ಈ ವೇಳೆ ಸಂಬಂಧಿ ಪರಶಿವ ಎಂಬುವರು ಭಾಗ್ಯ ಅವರನ್ನು ಸ್ಥಳೀಯ ಜ್ಯೋತಿಷ್ಯ ಬಳಿ ಕರೆದೊಯ್ದು ಭವಿಷ್ಯ ಕೇಳಿಸಿದ್ದರು. ಈ ವೇಳೆ ಜೋತಿಷಿ ಮನೆಯಲ್ಲಿ ನಿಧಿ ಇದೆ ಎಂದು ತಿಳಿಸಿದಾಗ ಇದನ್ನು ಅರಿಯದ ಭಾಗ್ಯ ಶೋಧನೆಗಾಗಿ ಅನುಮತಿ ನೀಡಿದ್ದರು ಎನ್ನಲಾಗಿದೆ.</p><p>ಜ್ಯೋತಿಷಿ ತನ್ನ ಜತೆಗಾರನೊಂದಿಗೆ ಕಳೆದ ವಾರ ಗ್ರಾಮಕ್ಕೆ ಆಗಮಿಸಿ ಭಾಗ್ಯ ಸಮ್ಮುಖದಲ್ಲೇ ರಾತ್ರಿ ವೇಳೆ ಮನೆಯಲ್ಲಿ ಕಳಸವಿಟ್ಟು ವಿಶೇಷ ಪೂಜೆ ನೆರವೇರಿಸಿದ. ಯಾರಿಗೂ ತಿಳಿಯದಂತೆ ನಿಧಿಗಾಗಿ ಗುಂಡಿ ತೆಗೆಯಲು ಆರಂಭಿಸಿದ್ದರು. 3 ಅಡಿ ಅಗಲ ಹಾಗೂ 20 ಅಡಿ ಆಳ ತೆಗೆದಿದ್ದು, ಶೋಧ ಕಾರ್ಯ ಮುಂದುವರಿದಿತ್ತು. ಈ ಬಗ್ಗೆ ಸ್ಥಳೀಯರಿಗೆ ವಿಷಯ ಗೊತ್ತಾಗಿ ಪೊಲೀಸರಿಗೆ ಮಾಹಿತಿ ನೀಡಿದರು. ಈ ಬಗ್ಗೆ ತಿಳಿದ ಅಸಾಮಿಗಳು ಮನೆಯಿಂದ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಆಗಮಿಸಿದ ಒಡೆಯರಪಾಳ್ಯ ಉಪ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದು, ಭಾಗ್ಯ ಅವರಿಗೆ ಇಂತಹ ಕಾರ್ಯ ನಡೆಯದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು ಎಂದು ತಿಳಿದು ಬಂದಿದೆ.</p><p>ಈ ಸಂಬಂಧ ಇನ್ಸ್ ಪೆಕ್ಟರ್ ಶಶಿಕುಮಾರ್ ಮಾತನಾಡಿ, ‘ನಿಧಿ ಇದೆ ಎಂದು ತಿಳಿದು ಅವರ ಮನೆಯಲ್ಲೇ ಗುಂಡಿ ತೆಗೆಸಿರುವುದು ನಿಜಕ್ಕೂ ವಿಪರ್ಯಾಸ. ಈ ಸಂಬಂಧ ಸ್ಥಳಕ್ಕೆ ಸಿಬ್ಬಂದಿ ಕಳುಹಿಸಿದ್ದು, ಸಂಬಂಧಪಟ್ಟವರಿಗೆ ಸೂಚನೆ ನೀಡಲಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹನೂರು:</strong> ತಾಲ್ಲೂಕಿನ ಒಡೆಯರಪಾಳ್ಯ ಸಮೀಪ ವಿ.ಎಸ್.ದೊಡ್ಡಿ ಭಾಗ್ಯ ಎಂಬುವರ ಮನೆಯಲ್ಲಿ ನಿಧಿ ಆಸೆಗಾಗಿ ಗುಂಡಿ ತೆಗೆದಿರುವ ಪ್ರಕರಣ ಭಾನುವಾರ ರಾತ್ರಿ ಪೊಲೀಸರಿಂದ ಬೆಳಕಿಗೆ ಬಂದಿದ್ದು, ಅಸಾಮಿಗಳು ಪರಾರಿಯಾಗಿದ್ದಾರೆ.</p><p> ನಾಲ್ಕೈದು ವರ್ಷದ ಹಿಂದೆ ವಾಸ್ತು ಸರಿಯಿಲ್ಲ ಎಂದು ತಿಳಿದು ಭಾಗ್ಯ ಮನೆ ತೊರೆದು, ಬೆಂಗಳೂರಿನಲ್ಲಿ ತಳ್ಳು ಗಾಡಿಯಲ್ಲಿ ಮಜ್ಜಿಗೆ, ವ್ಯಾಪಾರ ಮಾಡುತ್ತಿದ್ದರು. ಈ ವೇಳೆ ಸಂಬಂಧಿ ಪರಶಿವ ಎಂಬುವರು ಭಾಗ್ಯ ಅವರನ್ನು ಸ್ಥಳೀಯ ಜ್ಯೋತಿಷ್ಯ ಬಳಿ ಕರೆದೊಯ್ದು ಭವಿಷ್ಯ ಕೇಳಿಸಿದ್ದರು. ಈ ವೇಳೆ ಜೋತಿಷಿ ಮನೆಯಲ್ಲಿ ನಿಧಿ ಇದೆ ಎಂದು ತಿಳಿಸಿದಾಗ ಇದನ್ನು ಅರಿಯದ ಭಾಗ್ಯ ಶೋಧನೆಗಾಗಿ ಅನುಮತಿ ನೀಡಿದ್ದರು ಎನ್ನಲಾಗಿದೆ.</p><p>ಜ್ಯೋತಿಷಿ ತನ್ನ ಜತೆಗಾರನೊಂದಿಗೆ ಕಳೆದ ವಾರ ಗ್ರಾಮಕ್ಕೆ ಆಗಮಿಸಿ ಭಾಗ್ಯ ಸಮ್ಮುಖದಲ್ಲೇ ರಾತ್ರಿ ವೇಳೆ ಮನೆಯಲ್ಲಿ ಕಳಸವಿಟ್ಟು ವಿಶೇಷ ಪೂಜೆ ನೆರವೇರಿಸಿದ. ಯಾರಿಗೂ ತಿಳಿಯದಂತೆ ನಿಧಿಗಾಗಿ ಗುಂಡಿ ತೆಗೆಯಲು ಆರಂಭಿಸಿದ್ದರು. 3 ಅಡಿ ಅಗಲ ಹಾಗೂ 20 ಅಡಿ ಆಳ ತೆಗೆದಿದ್ದು, ಶೋಧ ಕಾರ್ಯ ಮುಂದುವರಿದಿತ್ತು. ಈ ಬಗ್ಗೆ ಸ್ಥಳೀಯರಿಗೆ ವಿಷಯ ಗೊತ್ತಾಗಿ ಪೊಲೀಸರಿಗೆ ಮಾಹಿತಿ ನೀಡಿದರು. ಈ ಬಗ್ಗೆ ತಿಳಿದ ಅಸಾಮಿಗಳು ಮನೆಯಿಂದ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಆಗಮಿಸಿದ ಒಡೆಯರಪಾಳ್ಯ ಉಪ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದು, ಭಾಗ್ಯ ಅವರಿಗೆ ಇಂತಹ ಕಾರ್ಯ ನಡೆಯದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು ಎಂದು ತಿಳಿದು ಬಂದಿದೆ.</p><p>ಈ ಸಂಬಂಧ ಇನ್ಸ್ ಪೆಕ್ಟರ್ ಶಶಿಕುಮಾರ್ ಮಾತನಾಡಿ, ‘ನಿಧಿ ಇದೆ ಎಂದು ತಿಳಿದು ಅವರ ಮನೆಯಲ್ಲೇ ಗುಂಡಿ ತೆಗೆಸಿರುವುದು ನಿಜಕ್ಕೂ ವಿಪರ್ಯಾಸ. ಈ ಸಂಬಂಧ ಸ್ಥಳಕ್ಕೆ ಸಿಬ್ಬಂದಿ ಕಳುಹಿಸಿದ್ದು, ಸಂಬಂಧಪಟ್ಟವರಿಗೆ ಸೂಚನೆ ನೀಡಲಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>