ನಂತರ ಮಾತನಾಡಿದ ಅವರು,‘ಕೇಂದ್ರ ಸರ್ಕಾರದವರು ನಿರಂತರವಾಗಿ ರೈತರಿಗೆ ಅನ್ಯಾಯ ಮಾಡುತ್ತಿದ್ದಾರೆ. ಇದರ ಜೊತೆಗೆ ರೈತರಿಗೆ ಕಿರುಕುಳ ಕೊಟ್ಟು ರೈತರನ್ನು ಸಾಯಿಸುತ್ತಿದ್ದಾರೆ. ಇದು ಎಷ್ಟರ ಮಟ್ಟಿಗೆ ಸರಿ. ಹಾಗಾಗಿ ಕೇಂದ್ರ ಸರ್ಕಾರ ರೈತರ ಕಷ್ಟಗಳನ್ನು ಪರಿಹರಿಸಬೇಕು. ಮುಖ್ಯವಾಗಿ ಸ್ವಾಮಿನಾಥನ್ ವರದಿ ಜಾರಿಯಾಗಬೇಕು. ಕನಿಷ್ಠ ಬೆಂಬಲ ಬೆಲೆ ಸೇರಿ ರೈತರ 15ಕ್ಕೂ ಹೆಚ್ಚು ಹಕ್ಕೋತರ ಕೂಡಲೇ ಜಾರಿ ಮಾಡಬೇಕು. ರೈತ ಈ ದೇಶದ ಬೆನ್ನೆಲುಬು. ಆದರೆ ರೈತರನ್ನು ಕಡೆಗಣಿಸುತ್ತಿರುವುದು ನಿಜಕ್ಕೂ ದುರಂತದ ವಿಷಯ. ಹಾಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮಧ್ಯಪ್ರವೇಶಿಸಿ ರೈತರ ಸಂಕಷ್ಟ ಕೂಡಲೇ ಪರಿಹರಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಮಟ್ಟದಲ್ಲಿ ಹೋರಾಟ ನಡೆಯುತ್ತದೆ’ ಎಂದರು.