<p><strong>ಗುಂಡ್ಲುಪೇಟೆ</strong>: ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿ, ಗ್ರಾಮ ಲೆಕ್ಕಾಧಿಕಾರಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ವ್ಯಕ್ತಿಗೆ ಗುಂಡ್ಲುಪೇಟೆ ಜೆಎಂಎಫ್ಸಿ ನ್ಯಾಯಾಲಯ 3 ವರ್ಷ ಜೈಲು ಶಿಕ್ಷೆ ವಿಧಿಸಿದೆ.</p>.<p>ಗುಂಡ್ಲುಪೇಟೆ ತಾಲ್ಲೂಕಿನ ವಡೆಯನಪುರ ಗ್ರಾಮದ ಶ್ರೀಕಂಠಸ್ವಾಮಿ ಎಂಬವರೇ ಶಿಕ್ಷೆಗೊಳಗಾದವರು. 2018ರ ಆ. 1ರಂದು ಬೊಮ್ಮಲಾಪುರ ವೃತ್ತದ ಗ್ರಾಮ ಲೆಕ್ಕಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬಸವರಾಜು ಪುಜೇರಿ ಎಂಬವರಿಗೆ ಪೌತಿ ಖಾತೆ ವಿಷಯಕ್ಕೆ ಸಂಬಂಧಿಸಿದಂತೆ ಶ್ರೀಕಂಠಸ್ವಾಮಿ ನಿಂದಿಸಿ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದರು.</p>.<p>ಈ ಬಗ್ಗೆ ಬಸವರಾಜು ಗುಂಡ್ಲುಪೇಟೆ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣದ ಬಗ್ಗೆ ವಾದ-ಪ್ರತಿವಾದ ನಡೆದು ನಿಂದನೆ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಪಡಿಸಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಪ್ರಧಾನ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಧೀಶರಾದ ಜೆ. ಶಿವಕುಮಾರ್ ಅಪರಾಧಿಗೆ 3 ವರ್ಷ ಸಾದಾ ಶಿಕ್ಷೆ, ₹10 ಸಾವಿರ ದಂಡ ವಿಧಿಸಿ ಆದೇಶಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಂಡ್ಲುಪೇಟೆ</strong>: ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿ, ಗ್ರಾಮ ಲೆಕ್ಕಾಧಿಕಾರಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ವ್ಯಕ್ತಿಗೆ ಗುಂಡ್ಲುಪೇಟೆ ಜೆಎಂಎಫ್ಸಿ ನ್ಯಾಯಾಲಯ 3 ವರ್ಷ ಜೈಲು ಶಿಕ್ಷೆ ವಿಧಿಸಿದೆ.</p>.<p>ಗುಂಡ್ಲುಪೇಟೆ ತಾಲ್ಲೂಕಿನ ವಡೆಯನಪುರ ಗ್ರಾಮದ ಶ್ರೀಕಂಠಸ್ವಾಮಿ ಎಂಬವರೇ ಶಿಕ್ಷೆಗೊಳಗಾದವರು. 2018ರ ಆ. 1ರಂದು ಬೊಮ್ಮಲಾಪುರ ವೃತ್ತದ ಗ್ರಾಮ ಲೆಕ್ಕಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬಸವರಾಜು ಪುಜೇರಿ ಎಂಬವರಿಗೆ ಪೌತಿ ಖಾತೆ ವಿಷಯಕ್ಕೆ ಸಂಬಂಧಿಸಿದಂತೆ ಶ್ರೀಕಂಠಸ್ವಾಮಿ ನಿಂದಿಸಿ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದರು.</p>.<p>ಈ ಬಗ್ಗೆ ಬಸವರಾಜು ಗುಂಡ್ಲುಪೇಟೆ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣದ ಬಗ್ಗೆ ವಾದ-ಪ್ರತಿವಾದ ನಡೆದು ನಿಂದನೆ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಪಡಿಸಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಪ್ರಧಾನ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಧೀಶರಾದ ಜೆ. ಶಿವಕುಮಾರ್ ಅಪರಾಧಿಗೆ 3 ವರ್ಷ ಸಾದಾ ಶಿಕ್ಷೆ, ₹10 ಸಾವಿರ ದಂಡ ವಿಧಿಸಿ ಆದೇಶಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>