<p><strong>ಚಾಮರಾಜನಗರ: </strong>ಪಹಣಿಯಲ್ಲಿ (ಆರ್ಟಿಸಿ) ಹೆಸರು ಸೇರಿಸುವುದಕ್ಕಾಗಿ ₹30 ಸಾವಿರ ಬೇಡಿಕೆ ಇಟ್ಟಿದ್ದ ತಾಲ್ಲೂಕು ಪಂಚಾಯಿತಿ ಕಚೇರಿಯ ಆರ್ಆರ್ಟಿ ಶಾಖೆಯ ಶಿರಸ್ತೇದಾರ್ ಮಂಜುನಾಥ್ ಎಂಬುವವರು ಶುಕ್ರವಾರ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಪೊಲೀಸರ ಬಲೆಗೆ ಬಿದ್ದಿದ್ದಾರೆ.</p>.<p>ಮಂಜುನಾಥ್ ಅವರು ವ್ಯಕ್ತಿಯೊಬ್ಬರಿಂದ ₹10 ಸಾವಿರ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಎಸಿಬಿ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ. ವಿಚಾರಣೆಯ ಬಳಿಕ ಅವರನ್ನು ಬಂಧಿಸಲಾಗಿದೆ.</p>.<p>ಶಿವಮೊಗ್ಗ ಜಿಲ್ಲೆಯ ನ್ಯಾಮತಿ ತಾಲ್ಲೂಕಿನವರಾದ ಮಂಜುನಾಥ್ ಒಂಬತ್ತು ತಿಂಗಳ ಹಿಂದೆಯಷ್ಟೇ ಇಲ್ಲಿಗೆ ಬಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.</p>.<p>‘ತಾಲ್ಲೂಕಿನ ಬದನಗುಪ್ಪೆ ಗ್ರಾಮದ ನಾಗನಾಯಕ (55) ಎಂಬುವರಿಗೆ 4 ಎಕರೆ ಜಮೀನಿದ್ದು, ಆರ್ಟಿಸಿಯಲ್ಲಿ ಅವರ ತಾತನ ಹೆಸರು ಇರಲಿಲ್ಲ. ಆರ್ಟಿಸಿಯಲ್ಲಿ ತಿದ್ದುಪಡಿ ಮಾಡಿ ತಾತನ ಹೆಸರು ಸೇರಿಸಲು ಅರ್ಜಿ ಸಲ್ಲಿಸಿದ್ದರು. ತಿದ್ದುಪಡಿ ಮಾಡಿಕೊಡಲು ಶಿರಸ್ತೇದಾರ್ ಮಂಜುನಾಥ್ ನಾಗನಾಯಕ ಅವರಿಗೆ ₹30 ಸಾವಿರದ ಬೇಡಿಕೆ ಇಟ್ಟಿದ್ದರು’ ಎಂದು ಎಸಿಬಿ ಡಿವೈಎಸ್ಪಿ ಸದಾನಂದ ತಿಪ್ಪಣ್ಣನವರ್ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ನಾಗನಾಯಕ ಅವರು ₹10 ಸಾವಿರವನ್ನು ಗುರುವಾರ ನೀಡಿದ್ದರು. ಇನ್ನು ₹10 ಸಾವಿರ ಶುಕ್ರವಾರ ನೀಡುವುದಾಗಿ ಹೇಳಿದ್ದರು. ಲಂಚಕ್ಕೆ ಬೇಡಿಕೆ ಇಟ್ಟಿರುವ ಬಗ್ಗೆ ನಾಗನಾಯಕ ಅವರು ದೂರು ನೀಡಿದ್ದರು. ಅದರ ಅನ್ವಯ, ಶುಕ್ರವಾರ ಮಂಜುನಾಥ್ ಅವರು ₹10 ಸಾವಿರ ಪಡೆಯುತ್ತಿದ್ದ ವೇಳೆ ಕಾರ್ಯಾಚರಣೆ ನಡೆಸಿದೆವು. ಈ ಸಂದರ್ಭದಲ್ಲಿ ಅವರು ಸಿಕ್ಕಿ ಬಿದ್ದರು’ ಎಂದು ಅವರು ಮಾಹಿತಿ ನೀಡಿದರು.</p>.<p>‘ವಿಚಾರಣೆ ನಡೆಸಿದ ಬಳಿಕ, ಆರೋಪಿಯನ್ನು ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗುವುದು’ ಎಂದು ಅವರು ತಿಳಿಸಿದರು.</p>.<p>ದಕ್ಷಿಣ ವಲಯ ಎಸಿಬಿ ಎಸ್ಪಿಜೆ.ಕೆ.ರಶ್ಮಿ ಅವರ ಮಾರ್ಗದರ್ಶನದಲ್ಲಿ ಎಸಿಬಿ ಠಾಣೆ ಡಿವೈಎಸ್ಪಿ ಸದಾನಂದ ತಿಪ್ಪಣ್ಣನವರ್, ಇನ್ಸ್ಪೆಕ್ಟರ್ ದೀಪಕ್ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ: </strong>ಪಹಣಿಯಲ್ಲಿ (ಆರ್ಟಿಸಿ) ಹೆಸರು ಸೇರಿಸುವುದಕ್ಕಾಗಿ ₹30 ಸಾವಿರ ಬೇಡಿಕೆ ಇಟ್ಟಿದ್ದ ತಾಲ್ಲೂಕು ಪಂಚಾಯಿತಿ ಕಚೇರಿಯ ಆರ್ಆರ್ಟಿ ಶಾಖೆಯ ಶಿರಸ್ತೇದಾರ್ ಮಂಜುನಾಥ್ ಎಂಬುವವರು ಶುಕ್ರವಾರ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಪೊಲೀಸರ ಬಲೆಗೆ ಬಿದ್ದಿದ್ದಾರೆ.</p>.<p>ಮಂಜುನಾಥ್ ಅವರು ವ್ಯಕ್ತಿಯೊಬ್ಬರಿಂದ ₹10 ಸಾವಿರ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಎಸಿಬಿ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ. ವಿಚಾರಣೆಯ ಬಳಿಕ ಅವರನ್ನು ಬಂಧಿಸಲಾಗಿದೆ.</p>.<p>ಶಿವಮೊಗ್ಗ ಜಿಲ್ಲೆಯ ನ್ಯಾಮತಿ ತಾಲ್ಲೂಕಿನವರಾದ ಮಂಜುನಾಥ್ ಒಂಬತ್ತು ತಿಂಗಳ ಹಿಂದೆಯಷ್ಟೇ ಇಲ್ಲಿಗೆ ಬಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.</p>.<p>‘ತಾಲ್ಲೂಕಿನ ಬದನಗುಪ್ಪೆ ಗ್ರಾಮದ ನಾಗನಾಯಕ (55) ಎಂಬುವರಿಗೆ 4 ಎಕರೆ ಜಮೀನಿದ್ದು, ಆರ್ಟಿಸಿಯಲ್ಲಿ ಅವರ ತಾತನ ಹೆಸರು ಇರಲಿಲ್ಲ. ಆರ್ಟಿಸಿಯಲ್ಲಿ ತಿದ್ದುಪಡಿ ಮಾಡಿ ತಾತನ ಹೆಸರು ಸೇರಿಸಲು ಅರ್ಜಿ ಸಲ್ಲಿಸಿದ್ದರು. ತಿದ್ದುಪಡಿ ಮಾಡಿಕೊಡಲು ಶಿರಸ್ತೇದಾರ್ ಮಂಜುನಾಥ್ ನಾಗನಾಯಕ ಅವರಿಗೆ ₹30 ಸಾವಿರದ ಬೇಡಿಕೆ ಇಟ್ಟಿದ್ದರು’ ಎಂದು ಎಸಿಬಿ ಡಿವೈಎಸ್ಪಿ ಸದಾನಂದ ತಿಪ್ಪಣ್ಣನವರ್ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ನಾಗನಾಯಕ ಅವರು ₹10 ಸಾವಿರವನ್ನು ಗುರುವಾರ ನೀಡಿದ್ದರು. ಇನ್ನು ₹10 ಸಾವಿರ ಶುಕ್ರವಾರ ನೀಡುವುದಾಗಿ ಹೇಳಿದ್ದರು. ಲಂಚಕ್ಕೆ ಬೇಡಿಕೆ ಇಟ್ಟಿರುವ ಬಗ್ಗೆ ನಾಗನಾಯಕ ಅವರು ದೂರು ನೀಡಿದ್ದರು. ಅದರ ಅನ್ವಯ, ಶುಕ್ರವಾರ ಮಂಜುನಾಥ್ ಅವರು ₹10 ಸಾವಿರ ಪಡೆಯುತ್ತಿದ್ದ ವೇಳೆ ಕಾರ್ಯಾಚರಣೆ ನಡೆಸಿದೆವು. ಈ ಸಂದರ್ಭದಲ್ಲಿ ಅವರು ಸಿಕ್ಕಿ ಬಿದ್ದರು’ ಎಂದು ಅವರು ಮಾಹಿತಿ ನೀಡಿದರು.</p>.<p>‘ವಿಚಾರಣೆ ನಡೆಸಿದ ಬಳಿಕ, ಆರೋಪಿಯನ್ನು ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗುವುದು’ ಎಂದು ಅವರು ತಿಳಿಸಿದರು.</p>.<p>ದಕ್ಷಿಣ ವಲಯ ಎಸಿಬಿ ಎಸ್ಪಿಜೆ.ಕೆ.ರಶ್ಮಿ ಅವರ ಮಾರ್ಗದರ್ಶನದಲ್ಲಿ ಎಸಿಬಿ ಠಾಣೆ ಡಿವೈಎಸ್ಪಿ ಸದಾನಂದ ತಿಪ್ಪಣ್ಣನವರ್, ಇನ್ಸ್ಪೆಕ್ಟರ್ ದೀಪಕ್ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>