ಕೊಳ್ಳೇಗಾಲ ತಾಲ್ಲೂಕು ಹಂಪಾಪುರ ಗ್ರಾಮದ ವ್ಯಕ್ತಿಯೊಬ್ಬರು (ದೂರುದಾರ) ಉಡುಪಿಯ ಸಾಯಿ ಸೆಕ್ಯೂರಿಟಿಸ್ ಸಂಸ್ಥೆಯ ಮೂಲಕ ಹನೂರು ತಾಲ್ಲೂಕು ಪಿ.ಜಿ.ಪಾಳ್ಯ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿಹೊರಗುತ್ತಿಗೆ ಆಧಾರದಲ್ಲಿ ಪ್ರಯೋಗಾಲಯ ತಾಂತ್ರಿಕ ಅಧಿಕಾರಿಯಾಗಿ ನೇಮಕಗೊಂಡಿದ್ದರು. ಸಂಸ್ಥೆಯು ನೇಮಕ ಮಾಡಿಕೊಂಡಿರುವ ಬಗ್ಗೆ ಕಾರ್ಯಾದೇಶ ಹಾಗೂ ವೇತನ ಪಾವತಿ ಬಿಲ್ ಗಳನ್ನು ಪಿ.ಜಿ.ಪಾಳ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಳುಹಿಸಿಕೊಡಲು ಅವರು ಇದೇ 19ರಂದು ಮಹೇಶ್ ಅವರನ್ನು ಭೇಟಿ ಮಾಡಿದ್ದರು. 21ರಂದು ಕರೆ ಮಾಡಿ ವಿಚಾರಿಸಿದಾಗ, ಮಹೇಶ್ ಅವರು ₹5,000 ಕೊಡುವಂತೆ ಬೇಡಿಕೆ ಇಟ್ಟಿದ್ದರು.